AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ

ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಕರುಳ ಕುಡಿಗಳನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ
ಮೃತ ಮಕ್ಕಳು
ಅಶೋಕ ಯಡಳ್ಳಿ, ವಿಜಯಪುರ
| Updated By: ಪ್ರಸನ್ನ ಹೆಗಡೆ|

Updated on: Oct 17, 2025 | 1:16 PM

Share

ವಿಜಯಪುರ, ಅಕ್ಟೊಬರ್​ 17: ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ (Vijayapura) ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಶಿವಮ್ಮ‌ ರಾಜು ರಾಠೋಡ್ (8), ಕಾರ್ತಿಕ ವಿಶ್ವ ರಾಠೋಡ್ (7) ಹಾಗೂ ಸ್ವಪ್ನಾ ರಾಜು ರಾಠೋಡ್ (12) ಮೃತ ಮಕ್ಕಳಾಗಿದ್ದು,ಕರುಳ ಕುಡಿಗಳನ್ನು ಕಳೆದುಕೊಂಡಿರುವ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಹದೇವ ನಗರದ ಬಳಿಯ ರಾಠೋಡ್ ಎಂಬವರ ಜಮೀನಿನಲ್ಲಿ ಮೂವರು ಮಕ್ಕಳು ಕುರಿಗಳ ಜೊತೆಗೆ ಆಟವಾಡುತ್ತಿದ್ದರು.ಕುಟುಂಬದವರು ಸಹ ಮಕ್ಕಳು ಇಲ್ಲಿಯೇ ಆಟವಾಡುತ್ತಿದ್ದಾರಲ್ಲ ಎಂದು ಅಂದುಕೊಂಡಿದ್ದರು. ಹೀಗೆ ಕುರಿಗಳ ಜೊತೆ ಆಡುತ್ತ ಕೃಷಿ ಹೊಂಡದ ಬಳಿ ತೆರಳಿರುವ ಮಕ್ಕಳು ಆಯತಪ್ಪಿ ಬಿದ್ದಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಬಹಳ ಹೊತ್ತಾದರೂ ಮಕ್ಕಳು ಬಾರದಿರುವ ಹಿನ್ನಲೆ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಸಂಶಯ ಬಂದು ಕೃಷಿ ಹೊಂಡದಲ್ಲಿ ಹುಡುಕಾಡಿದಾಗ ಮೂವರು ಮಕ್ಕಳ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ತಹಶೀಲ್ದಾರ ಚೆನಗೊಂಡ ಹಾಗೂ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಆಸ್ಪತ್ರೆಯಲ್ಲಿ ಮಲಗಿದ ಹಾಗೆ ನಟನೆ ಮಾಡಿ ಮೊಬೈಲ್ ಎಗಿರಿಸಿದ ಖದೀಮ

ಇತ್ತೀಚಿನ ದಿನಗಳಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಕಾನೂನಿನ ಪ್ರಕಾರ ಕೃಷಿಹೊಂಡದ ಸುತ್ತಲೂ ತಂತಿ ಬೇಲಿಯನ್ನ ಕಡ್ಡಾಯವಾಗಿ ಹಾಕಬೇಕು. ಕೃಷಿ ಹೊಂಡದ ಬಳಿ ಯಾರೂ ಓಡಾಡದಂತೆ ನೋಡಿಕೊಳ್ಳಬೇಕು ಎಂಬ ನಿಯಮವಿದೆ. ಆದರೆ ಇದ್ಯಾವುದೇ ನಿಯಮಗಳನ್ನು ಕೆಲ ರೈತರು ಪಾಲನೆ ಮಾಡದಿರುವುದೇ ಇಂತಹ ದುರಂತಗಳಿಗೆ ಕಾರಣವಾಗುತ್ತಿವೆ. ಹೀಗಾಗಿ ಇನ್ನಾದರೂ ಕೃಷಿ ಹೊಂಡಗಳನ್ನು ಹೊಂದಿರುವ ರೈತರು ಎಚ್ಚೆತ್ತುಕೊಳ್ಳಬೇಕಿದ್ದು, ಕೃಷಿ ಹೊಂಡದ ಸುತ್ತ ಬೇಲಿ ಅಥವಾ ತಡೆಗೋಡೆಯನ್ನ ಖಡ್ಡಾಯವಾಗಿ ನಿರ್ಮಿಸಬೇಕು ಎಂಬ ಮಾತುಗಳು ಕೇಳಿಬಂದಿವೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ