AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈ ಮೇಲೆ ಕಕ್ಕ ಮಾಡಿದ್ದಕ್ಕೆ ತಾಯಿಯ ಪ್ರಿಯಕರನಿಂದ 3 ವರ್ಷದ ಮಗುವಿನ ಕೊಲೆ!

ಮಹಿಳೆಯೊಬ್ಬಳು ಮದುವೆಯಾಗಿ 3 ವರ್ಷದ ಮಗುವಿದ್ದರೂ ಬೇರೆ ಗಂಡಸಿನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯ ಆಕೆಯ ಗಂಡನಿಗೆ ಗೊತ್ತಿರಲಿಲ್ಲ. ಗಂಡನಿಂದ ದೂರವಾಗಿದ್ದ ಆಕೆ ಆತನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದಳು. ಆಕೆ ತನ್ನ ಮಗುವಿನ ಜೊತೆ ಒಂದೇ ಮನೆಯಲ್ಲಿ ಆತನ ಜೊತೆ ವಾಸಿಸುತ್ತಿದ್ದಳು. ಈ ವೇಳೆ ಆಕಸ್ಮಿಕವಾಗಿ ಆ 3 ವರ್ಷದ ಮಗು ಆತನ ಶರ್ಟ್ ಮೇಲೆ ಮಲವಿಸರ್ಜನೆ ಮಾಡಿದ್ದರಿಂದ ಆತ ಆ ಮಗುವನ್ನು ಕೊಲೆ ಮಾಡಿದ್ದಾನೆ. ಈ ಅಮಾನವೀಯ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮೈ ಮೇಲೆ ಕಕ್ಕ ಮಾಡಿದ್ದಕ್ಕೆ ತಾಯಿಯ ಪ್ರಿಯಕರನಿಂದ 3 ವರ್ಷದ ಮಗುವಿನ ಕೊಲೆ!
Baby
ಸುಷ್ಮಾ ಚಕ್ರೆ
|

Updated on: Dec 23, 2025 | 4:12 PM

Share

ಮುಂಬೈ, ಡಿಸೆಂಬರ್ 23: ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ 3 ವರ್ಷದ ಬಾಲಕನೊಬ್ಬ ಮಲಗಿದ್ದಾಗ ಆಕಸ್ಮಿಕವಾಗಿ ಆತನ ತಾಯಿಯ ಪ್ರಿಯಕರನ ಬಟ್ಟೆಯ ಮೇಲೆ ಮಲವಿಸರ್ಜನೆ ಮಾಡಿದ್ದ. ಇದರಿಂದ ಕೋಪಗೊಂಡ ಆ ಮಗುವಿನ ತಾಯಿಯ ಪ್ರಿಯಕರ ಆ ಮಗುವನ್ನು ಕೊಲೆ (Murder) ಮಾಡಿರುವ ಘಟನೆ ವರದಿಯಾಗಿದೆ. ಡಿಸೆಂಬರ್ 11ರ ರಾತ್ರಿ ಮಲಗಲು ಹೋದಾಗ ಕುಡಿದಿದ್ದ ಮೌಲಾಲಿ ಅಲಿಯಾಸ್ ಅಕ್ಬರ್ ರಜಾಕ್ ಬಾಲಕ ಫರ್ಹಾನ್​ನ ಕತ್ತು ಹಿಸುಕಿ ಕೊಂದಿದ್ದಾನೆ.

ರಾತ್ರಿ ಫರ್ಹಾನ್ ಎಂಬ ಆ ಮಗುವಿನ ಪಕ್ಕದಲ್ಲಿ 44 ವರ್ಷದ ಮೌಲಾಲಿ ಮಲಗಿದ್ದ. ಆ ಮಗುವಿನ ತಾಯಿ ಕೆಲಸಕ್ಕೆ ಬೇರೆ ಮನೆಗೆ ಹೋಗಿದ್ದವಳು ಇನ್ನೂ ಬಂದಿರಲಿಲ್ಲ. ಈ ವೇಳೆ ಆ ಮಗು ಮಲವಿಸರ್ಜನೆ ಮಾಡಿದೆ. ಕುಡಿತದ ಅಮಲಿನಲ್ಲಿ ಮಲಗಿದ್ದ ಆತನಿಗೆ ತನ್ನ ಮೈ ಗಲೀಜಾಗಿದ್ದಕ್ಕೆ ಕೋಪ ಬಂದಿದೆ. ಬಳಿಕ ಆತ ಮಗುವಿಗೆ ಹೊಡೆದು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಸಿನಿಮೀಯ ರೀತಿ ಪತ್ನಿಯ ಕೊಂದ ಪತಿ ಕೆಲವೇ ಕ್ಷಣಗಳಲ್ಲಿ ಅರೆಸ್ಟ್! ಕೊಲೆ ರಹಸ್ಯ ಬಯಲಾಗಿದ್ದೇ ರೋಚಕ

ಆ ಮಗುವಿನ ತಾಯಿ 28 ವರ್ಷದ ಶಹನಾಜ್ ಶೇಖ್ ಮನೆಗೆ ಮರಳಿದಾಗ ಫರ್ಹಾನ್ ಮೇಲಿಂದ ಬಿದ್ದಿದ್ದಾನೆಂದು ಆತ ಅವಳಿಗೆ ಹೇಳಿದ್ದ. ಅವಳು ಕೂಡ ಆ ಮಾತನ್ನು ನಂಬಿದ್ದಳು. ನಂತರ ಆ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಅವನನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದಾಗ ಆ ತಾಯಿ ತನ್ನ ಮಗುವನ್ನು ಕರ್ನಾಟಕದ ವಿಜಯಪುರಕ್ಕೆ ಕರೆದೊಯ್ದಳು. ಅಲ್ಲಿ ಬಸ್​ ನಿಲ್ದಾಣದಿಂದ ಆಕೆಯ ಪ್ರಿಯಕರ ಪರಾರಿಯಾಗಿದ್ದ.

ಕೊನೆಗೆ ಶಹನಾಜ್ ತನ್ನ ಮೊದಲ ಪತಿಯ ಸಹಾಯದಿಂದ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಳು. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಮಗು ಮೃತಪಟ್ಟಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಕತ್ತು ಹಿಸುಕಿದ್ದರಿಂದ ಮಗು ಸಾವನ್ನಪ್ಪಿದೆ ಎಂದು ದೃಢಪಡಿಸಲಾಯಿತು. ಬಳಿಕ ಆ ತಾಯಿಯೇ ತನ್ನ ಪ್ರಿಯಕರನ ವಿರುದ್ಧ ದೂರು ನೀಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Bengaluru: ವೀಕ್​​ಡೇಸ್​​ನಲ್ಲಿ ಪ್ರೊಫೆಸರ್, ವಾರಾಂತ್ಯ ಬಂತಂದ್ರೆ ಖತರ್ನಾಕ್​​ ಕಳ್ಳಿ!

ಮೊದಲ ಮದುವೆಯಿಂದ ಇಬ್ಬರು ಮಕ್ಕಳಿರುವ ಶಹನಾಜ್ ಮತ್ತು ಆಕೆಯ ಪ್ರಿಯಕರ ಮೌಲಾಲಿ ಇಬ್ಬರೂ ವಿಜಯಪುರದವರಾಗಿದ್ದರೂ ಕಳೆದ ಒಂದು ತಿಂಗಳಿನಿಂದ ಸೊಲ್ಲಾಪುರದಲ್ಲಿ ವಾಸಿಸುತ್ತಿದ್ದರು. ಈಗ ಮೌಲಾಲಿ ತಾನೇ ಮಗುವನ್ನು ಕೊಂದಿರುವುದಾಗಿ ಒಪ್ಪಿಕೊಂಡು, ಜೈಲಿನಲ್ಲಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ