AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರ ವಿರೋಧ ಕಟ್ಟಿಕೊಂಡು ಮಹಿಳೆ ಜತೆ ಅಕ್ರಮ ಸಂಬಂಧ, ಆಕೆಯಿಂದಲೇ ಪ್ರಾಣ ತೆತ್ತ

ಮನೆಯವರ ವಿರೋಧ ಕಟ್ಟಿಕೊಂಡು ಮಹಿಳೆ ಜತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೋರ್ವ ಇದೀಗ ಅದೇ ಮಹಿಳೆಯಿಂದಾಗಿ ಪ್ರಾಣ ತೆತ್ತಿದ್ದಾನೆ.

ಮನೆಯವರ ವಿರೋಧ ಕಟ್ಟಿಕೊಂಡು ಮಹಿಳೆ ಜತೆ ಅಕ್ರಮ ಸಂಬಂಧ, ಆಕೆಯಿಂದಲೇ ಪ್ರಾಣ ತೆತ್ತ
ಸಾಂದರ್ಭಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 25, 2023 | 7:55 AM

Share

ವಿಜಯಪುರ, (ಜುಲೈ 25): ವ್ಯಕ್ತಿಯೋರ್ವ ಆತ್ಮಹತ್ಯೆ (Suicide) ಮಾಡಿಕೊಳ್ಳುವುದಾಗಿ ವಾಟ್ಸಾಪ್ ಸ್ಟೇಟಸ್​​ ಹಾಕಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ(Vijayapura) ಜಿಲ್ಲೆಯ ಸಿಂದಗಿ ತಾಲೂಕಿನ ಪಿ.ಹೆಚ್.ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಹೆಸರು ಬರೆದಿಟ್ಟು ಶಿವಣ್ಣ ಚೌಧರಿ(40) ಎನ್ನುವಾತ ಪಿ.ಹೆಚ್.ಬೂದಿಹಾಳ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಸಾವಿಗೆ ಅನೈತಿಕ ಸಂಬಂಧವಿರುವ(illicit relationship) ಮಹಿಳೆಯೇ ಕಾರಣವೆಂದು ವಾಟ್ಸಪ್​ ಸ್ಟೇಟಸ್​ನಲ್ಲಿ ಮಹಿಳೆ ಫೋಟೋ ಹಾಕಿ, ಗ್ರಾಮದ ಕೆಲವರ ಹೆಸರು ಉಲ್ಲೇಖಿಸಿದ್ದಾನೆ. ಅಲ್ಲದೇ ಆಕೆಗೆ ನೀಡಿರುವ ಹಣ ನನ್ನ ತನ್ನ ಮಕ್ಕಳಿಗೆ ಕೊಡಿಸಿ ಎಂದು ವಿಡಿಯೋ ಚಿತ್ರೀಕರಿಸಿ, ಡೆತ್​ನೋಟ್ ಬರೆದಿಟ್ಟಿದ್ದಾನೆ.

ಇದನ್ನೂ ಓದಿ: ಹೆಂಡತಿ ಮಕ್ಕಳಿದ್ದರೂ ಪಕ್ಕದ ಮನೆಯಾಕೆ ಜೊತೆ ಮದುವೆಗೆ ಪ್ಲಾನ್, ಪ್ರಶ್ನಿಸಿದ ಯುವತಿಯ ತಾಯಿಗೆ ಚಾಕು ಇರಿತ

ಮನೆಯವರ ವಿರೋಧ ಕಟ್ಟಿಕೊಂಡು ಆಕೆ ಜೊತೆಗಿದ್ದೆ, ಹಣವನ್ನೂ ನೀಡಿದ್ದೆ. ನನ್ನ ಬಳಿ ಹಣ ಖಾಲಿಯಾದ ಬಳಿಕ ನನ್ನನ್ನು ದೂರ ಮಾಡಿದಳೆ. ನನ್ನ ಮೂವರು ಮಕ್ಕಳು ಅನಾಥವಾದರೂ ಪರವಾಗಿಲ್ಲ, ಆಕೆಗೆ ಶಿಕ್ಷೆಯಾಗಬೇಕು. ನಾನು ಆಕೆಗೆ ನೀಡಿರುವ ಹಣ ನನ್ನ ಮಕ್ಕಳಿಗೆ ಕೊಡಿಸಿ ಎಂದು ಮನವಿ ಮಾಡಿರುವ ಶಿವಣ್ಣ, ಆಕೆ ಹಲವರ ಜೊತೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಡೆತ್​ನೋಟ್​ನಲ್ಲಿ ಉಲ್ಲೇಖಿಸಿದ್ದಾನೆ.

ಹಾಗೇ ಪಿ.ಹೆಚ್.ಬೂದಿಹಾಳ ಗ್ರಾಮದ ಕೆಲವರ ಹೆಸರು ಹೇಳಿರುವ ಶಿವಣ್ಣ ಚೌಧರಿ, ಸಿದ್ದು ವಾಲೀಕಾರ ಮಾಟಮಂತ್ರ ಮಾಡಿ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ. ಸಿದ್ದು ವಾಲೀಕಾರಗೆ ಮೊಹಮ್ಮದ್ ಸಾಬ್ ಫತೇಪುರ, ಬಾಬು ನಾಟಿಕಾರ, ಮಲಕಪ್ಪ ಸಹಾಯ ಮಾಡುತ್ತಿದ್ದಾರೆಂದು ವಿಡಿಯೋನಲ್ಲಿ ಹೇಳಿ ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸ್ಥಳಕ್ಕೆ ಸಿಂದಗಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದ ಕಲ್ಲಿದ್ದಲು ಟ್ರಕ್
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?
ಯಾವ ಸ್ಥಳಗಳಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಆಪತ್ತು ತರುತ್ತದೆ?