AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು

ಡೀಸೆಲ್ ಬಾಕಿ ಹಣಕ್ಕಾಗಿ ಬಂಕ್ ಮಾಲೀಕರು, ವ್ಯಕ್ತಿಯೋರ್ವನನ್ನು ಅರೆಬೆತ್ತಲೆಗೊಳಿಸಿ ಕೂಡಿಸಿದ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.

ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು
ರಮೇಶ್ ಬಿ. ಜವಳಗೇರಾ
|

Updated on:Jun 26, 2023 | 1:57 PM

Share

ವಿಜಯಪುರ: ಡೀಸೆಲ್(diesel) ಹಾಕಿಸಿದ್ದ ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಪೆಟ್ರೋಲ್ ಬಂಕ್​ನಲ್ಲಿ(petrol bunk) ಕೂಡಿಸಿದ ಅಮಾನವೀಯ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ. ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಬಾಕಿ ಹಣ ವಸೂಲಿಗೆ ಮೌನೇಶ್ ಪತ್ತಾರ್ ಎನ್ನುವಾತನನ್ನು ಅರೆಬೆತ್ತಲೆಗೊಳಿಸಿ ಮುದ್ದೇಬಿಹಾಳ ಪಟ್ಟಣದಲ್ಲಿರುವ ಬೋಸಲೆ ಬಂಕ್​ನಲ್ಲಿ ಕೂಡಿಹಾಕಿದ್ದಾರೆ. 10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ರೀ ಪ್ರಯಾಣಕ್ಕಾಗಿ ಬಸ್ ಮೇಲೆ ‘ಶಕ್ತಿ’ ತೋರಿಸಿ ಬರೋಬ್ಬರಿ 5000 ರೂ. ದಂಡ ತೆತ್ತ ಮಹಿಳೆ

ತಮಿಳುನಾಡು ಮೂಲದ ಶಿವಶಕ್ತಿ ಬೋರ್ ವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮೌನೇಶ, ವಾಹನಗಳಿಗೆ ಬೋಸಲೆ ಅವರ ಬಂಕ್ ನಲ್ಲಿ ಡೀಸೆಲ್ ಹಾಕಿಸುತ್ತಿದ್ದ. ಆದ್ರೆ, ಶವಶಕ್ತಿ ಬೋರ್ ವೆಲ್ಸ್​ನವರು ಡೀಸೆಲ್ ಬಾಕಿ ಹಣ ನೀಡದೇ ಹೋಗಿದ್ದಾರೆ. ಹೀಗಾಗಿ ಬಾಕಿ ಹಣಕ್ಕಾಗಿ ಪೆಟ್ರೋಲ್ ಬಂಕ್ ಮಾಲೀಕ, ಮೌನೇಶ್​ನನ್ನು ಹಿಡಿದುಕೊಂಡಿದ್ದಾರೆ. ಅಲ್ಲದೇ ಹಣ ಕೊಡಬೇಕೆಂದು ಮೌನೇಶ್​ನನ್ನು ಬಂಕ್​ನಲ್ಲೇ ಕೂಡಿಹಾಕಿದ್ದಾರೆ. ಇನ್ನು ಮೌನೇಶ ಬಿಡುಗಡೆಗಾಗಿ ಆತನ ಪತ್ನಿ ಹಾಗೂ ಮಕ್ಕಳು ಕಳೆದ ಮೂರು ದಿನಗಳಿಂದ ಬೋಸಲೆ ಪೆಟ್ರೋಲ್ ಬಂಕ್ ನಲ್ಲೇ ಕುಳಿತುಕೊಂಡಿದ್ದಾರೆ.

10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೂ ತೆರಳಲು ಬಿಡದೇ ಬಂಕ್ ಮಾಲೀಕರು ಮೌನೇಶ ಕುಟುಂಬಸ್ಥರನ್ನು ತಡೆಹಿಡಿದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:39 pm, Mon, 26 June 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ