Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು

ಡೀಸೆಲ್ ಬಾಕಿ ಹಣಕ್ಕಾಗಿ ಬಂಕ್ ಮಾಲೀಕರು, ವ್ಯಕ್ತಿಯೋರ್ವನನ್ನು ಅರೆಬೆತ್ತಲೆಗೊಳಿಸಿ ಕೂಡಿಸಿದ ಅಮಾನವೀಯ ಘಟನೆ ವಿಜಯಪುರದಲ್ಲಿ ನಡೆದಿದೆ.

ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು
Follow us
ರಮೇಶ್ ಬಿ. ಜವಳಗೇರಾ
|

Updated on:Jun 26, 2023 | 1:57 PM

ವಿಜಯಪುರ: ಡೀಸೆಲ್(diesel) ಹಾಕಿಸಿದ್ದ ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಪೆಟ್ರೋಲ್ ಬಂಕ್​ನಲ್ಲಿ(petrol bunk) ಕೂಡಿಸಿದ ಅಮಾನವೀಯ ಘಟನೆ ವಿಜಯಪುರ (Vijayapura) ಜಿಲ್ಲೆಯಲ್ಲಿ ನಡೆದಿದೆ. ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಬಾಕಿ ಹಣ ವಸೂಲಿಗೆ ಮೌನೇಶ್ ಪತ್ತಾರ್ ಎನ್ನುವಾತನನ್ನು ಅರೆಬೆತ್ತಲೆಗೊಳಿಸಿ ಮುದ್ದೇಬಿಹಾಳ ಪಟ್ಟಣದಲ್ಲಿರುವ ಬೋಸಲೆ ಬಂಕ್​ನಲ್ಲಿ ಕೂಡಿಹಾಕಿದ್ದಾರೆ. 10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: ಫ್ರೀ ಪ್ರಯಾಣಕ್ಕಾಗಿ ಬಸ್ ಮೇಲೆ ‘ಶಕ್ತಿ’ ತೋರಿಸಿ ಬರೋಬ್ಬರಿ 5000 ರೂ. ದಂಡ ತೆತ್ತ ಮಹಿಳೆ

ತಮಿಳುನಾಡು ಮೂಲದ ಶಿವಶಕ್ತಿ ಬೋರ್ ವೆಲ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಮೌನೇಶ, ವಾಹನಗಳಿಗೆ ಬೋಸಲೆ ಅವರ ಬಂಕ್ ನಲ್ಲಿ ಡೀಸೆಲ್ ಹಾಕಿಸುತ್ತಿದ್ದ. ಆದ್ರೆ, ಶವಶಕ್ತಿ ಬೋರ್ ವೆಲ್ಸ್​ನವರು ಡೀಸೆಲ್ ಬಾಕಿ ಹಣ ನೀಡದೇ ಹೋಗಿದ್ದಾರೆ. ಹೀಗಾಗಿ ಬಾಕಿ ಹಣಕ್ಕಾಗಿ ಪೆಟ್ರೋಲ್ ಬಂಕ್ ಮಾಲೀಕ, ಮೌನೇಶ್​ನನ್ನು ಹಿಡಿದುಕೊಂಡಿದ್ದಾರೆ. ಅಲ್ಲದೇ ಹಣ ಕೊಡಬೇಕೆಂದು ಮೌನೇಶ್​ನನ್ನು ಬಂಕ್​ನಲ್ಲೇ ಕೂಡಿಹಾಕಿದ್ದಾರೆ. ಇನ್ನು ಮೌನೇಶ ಬಿಡುಗಡೆಗಾಗಿ ಆತನ ಪತ್ನಿ ಹಾಗೂ ಮಕ್ಕಳು ಕಳೆದ ಮೂರು ದಿನಗಳಿಂದ ಬೋಸಲೆ ಪೆಟ್ರೋಲ್ ಬಂಕ್ ನಲ್ಲೇ ಕುಳಿತುಕೊಂಡಿದ್ದಾರೆ.

10 ರಿಂದ 15 ಲಕ್ಷ ರೂ. ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೂ ತೆರಳಲು ಬಿಡದೇ ಬಂಕ್ ಮಾಲೀಕರು ಮೌನೇಶ ಕುಟುಂಬಸ್ಥರನ್ನು ತಡೆಹಿಡಿದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:39 pm, Mon, 26 June 23

ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ