ವಿಜಯಪುರ: ವಿಚಿತ್ರ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ; ಹೇಗೆ ಗೊತ್ತಾ?

ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ‘ಕಂಬಳಿ ಮೇಲೆ ಅಕ್ಕಿಯಿಂದ ಮಂಡಲ ಹಾಕಿ, ಕೊರಳಲ್ಲಿ ಮೆಣಸಿಕನಾಯಿ ಹಾಗೂ ಲಿಂಬೆಕಾಯಿ ಕಟ್ಟಿಕೊಂಡು ವಿಚಿತ್ರ ರೀತಿಯಲ್ಲಿ ವ್ಯಕ್ಯಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಜಯಪುರ: ವಿಚಿತ್ರ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ; ಹೇಗೆ ಗೊತ್ತಾ?
ಇಂಡಿ ತಾಲೂಕಿನಲ್ಲಿ ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Jan 06, 2024 | 7:43 PM

ವಿಜಯಪುರ, ಜ.06: ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ, ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ‘ಕಂಬಳಿ ಮೇಲೆ ಅಕ್ಕಿಯಿಂದ ಮಂಡಲ ಹಾಕಿ, ಕೊರಳಲ್ಲಿ ಮೆಣಸಿಕನಾಯಿ ಹಾಗೂ ಲಿಂಬೆಕಾಯಿ ಕಟ್ಟಿಕೊಂಡು ವಿಚಿತ್ರ ರೀತಿಯಲ್ಲಿ ವ್ಯಕ್ಯಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಡಿವೆಪ್ಪ (43) ನೇಣು ಹಾಕಿಕೊಂಡು ಆತ್ಮಹತ್ಯಗೆ ಶರಣಾದ ವ್ಯಕ್ತಿ.

ವಿಚಿತ್ರ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಇತ ಪಿತ್ರಾರ್ಜಿತವಾಗಿ ಬಂದಿದ್ದ 35 ಎಕರೆಗೂ ಆಧಿಕ ಜಮೀನು ಮಾರಾಟ ಮಾಡಿದ್ದ. ಮಧ್ಯ ಸೇವನೆ ಹಾಗೂ ಇತರೆ ಚಟಗಳ ದಾಸನಾಗಿದ್ದ ಅಡಿವೆಪ್ಪ, ಆಸ್ತಿ ಮಾರಾಟ ಮಾಡಿದ ಬಳಿಕ ಮಾನಸಿಕವಾಗಿ ಆಘಾತಗೊಂಡಿದ್ದನಂತೆ. ಈ ಹಿನ್ನಲೆ ತನ್ನ ಎರಡೂ ಕೈಗಳಲ್ಲಿ ಕೆಂಪು ಬಟ್ಟೆಯಲ್ಲಿ ನಿಂಬೆ ಹಣ್ಣು ಕಟ್ಟಿಕೊಂಡು ಇಂದು ಮುಂಜಾನೆ ಬೇವಿನ ಮರಕ್ಕೆ ನೇಣು ಹಾಕಿಕೊಂಡು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಝಳಕಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:Iowa School Shootout: ಅಯೋವಾ ಶಾಲೆಯಲ್ಲಿ ಗುಂಡಿನ ದಾಳಿ; ವಿದ್ಯಾರ್ಥಿ ಸಾವು, ಆರೋಪಿ ಆತ್ಮಹತ್ಯೆ

ಗೂಡ್ಸ್​ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಗೂಡ್ಸ್​ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಥಣಿಯ ಗುಡ್ಡದ ಲಕ್ಷ್ಮೀ ದೇಗುಲ ಬಳಿ ನಡೆದಿದೆ. ಮಸರಗುಪ್ಪಿ ಗ್ರಾಮದ ಶಿಕ್ಷಕ ರವಸಾಬ್ R.ಹಿಪ್ಪರಗಿ(57) ಮೃತವ್ಯಕ್ತಿ. ಘಟನಾ ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Sat, 6 January 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us