ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದಲ್ಲಿ ಹಗಲಿನಲ್ಲೇ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಹತ್ಯೆಯ ಹಿಂದೆ ಯುವತಿ ನೆರಳಿರುವುದಾಗಿ ಕೊಲೆಯಾದ ತಂದೆ ಆರೋಪ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಎಸ್ಪಿ ಭೇಟಿ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?
ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ದಾಳಿ: ಕೊಲೆ ಹಿಂದೆ ಯುವತಿಯ ಕರಿನೆರಳು?
Edited By:

Updated on: Jan 28, 2025 | 2:59 PM

ವಿಜಯಪುರ, ಜನವರಿ 28: ಜಿಲ್ಲೆಯಲ್ಲಿ ಹಾಡಹಗಲೇ ಗುಂಡಿನ ಸಪ್ಪಳ ಕೇಳಿಬಂದಿದೆ. ಕಾರಿನ ಮೇಲೆ ಗುಂಡಿನ ದಾಳಿ ನಡೆಸಿ ದುಷ್ಕರ್ಮಿಗಳು ಓರ್ವ ವ್ಯಕ್ತಿಯ ಹತ್ಯೆ (Shot Dead) ಮಾಡಿರುವಂತಹ ಘಟನೆ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಮನಾವರ ದೊಡ್ಡಿ ಬಳಿ ನಡೆದಿದೆ. ಸತೀಶ್ ರಾಠೋಡ್ ಮೃತ ವ್ಯಕ್ತಿ. ರಮೇಶ್​​ ಚವ್ಹಾಣ್​ ಹಾಗೂ ಇತರರಿಂದ ಕೃತ್ಯವೆಸಗಿರುವ ಆರೋಪ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಎಸ್​ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ವಿಜಯಪುರ ಗ್ರಾಮೀಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹತ್ಯೆ ಹಿಂದಿದೆಯಾ ಯುವತಿಯ ನೆರಳು?

ಇನ್ನು ಹತ್ಯೆ ಹಿಂದೆ ಯುವತಿಯ ನೆರಳಿದೆ ಎಂದು ಕೊಲೆಗೀಡಾದ ಸತೀಶ್ ತಂದೆ ಪ್ರೇಮಸಿಂಗ್ ಆರೋಪಿಸಿದ್ದಾರೆ. ರಮೇಶ್​​ ಚವ್ಹಾಣ್ ಪುತ್ರಿಯನ್ನ ಸತೀಶ್ ರಾಠೋಡ್​​ ಮದುವೆಯಾಗಲು ಗುರು ಹಿರಿಯರ ಸಮ್ಮುಖದಲ್ಲಿ ಕೇಳಲಾಗಿತ್ತು. ಕಳೆದ ಒಂದೂವರೆ ವರ್ಷದ ಹಿಂದೆ ರಮೇಶ್ ಮಗಳ ಜೊತೆ ಸತೀಶ್ ವಿವಾಹ ಪ್ರಸ್ತಾಪ ನಡೆದಿತ್ತು. ಆದರೆ ಸತೀಶ್​ಗೆ ನನ್ನ ಮಗಳನ್ನು ಕೊಡಲ್ಲ ಎಂದು ಖಡಾಖಂಡಿತವಾಗಿ ರಮೇಶ್​ ಹೇಳಿದ್ದರು. ಇದಾದ ಬಳಿಕ ಒಂದು ವರ್ಷದ ಹಿಂದೆ ರಮೇಶ್ ಮಗಳು ಬಾವಿಗೆ ಹಾರಿ ಮೃತಪಟ್ಟಿದ್ದಳಂತೆ.

ಇದನ್ನೂ ಓದಿ: ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ

ಇದೇ ಕಾರಣವೇ ಸತೀಶ್ ಮೇಲೆ ರಮೇಶ್ ಹಾಗೂ ಸಹಚರರಿಗೆ ಕೋಪವಿತ್ತಂತೆ. ಇದೇ ಕೋಪದಲ್ಲಿ ಸತೀಶ್ ನನ್ನ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆಂದು ಸತೀಶ್ ತಂದೆ ಪ್ರೇಮ್​ಸಿಂಗ್ ಆರೋಪಿಸಿದ್ದಾರೆ. ಆದರೆ ಪೊಲೀಸರ ತನಿಖೆಯ ಬಳಿಕ ಸತೀಶ್ ಹತ್ಯೆಯ ಸತ್ಯಾಂಶ ಬಯಲಿಗೆ ಬರುವ ಸಾಧ್ಯತೆ ಇದೆ.

ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಇತರೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಎಷ್ಟು ಗುಂಡುಗಳನ್ನು ಹಾರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಸ್ಥಳದಲ್ಲಿ ಸತೀಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಹೆಜ್ಜೇನು ದಾಳಿಯಿಂದ ಮರದ ಮೇಲಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಮತ್ತೊಂದು ಪ್ರಕರಣದಲ್ಲಿ ಕೋತಿಗಳನ್ನು ಓಡಿಸಲು ಮರವೇರಿದ್ದ ವ್ಯಕ್ತಿ ಹೆಜ್ಜೇನು ದಾಳಿಯಿಂದ ಮರದ ಮೇಲಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವಂತಹ ಘಟನೆ ಬೀದರ್​ ಜಿಲ್ಲೆಯ ಹಲಸೂರು ತಾ. ಗಡಿಗೌಡಗಾಂವನಲ್ಲಿ ನಿನ್ನೆ ಸಂಜೆ ನಡೆದಿದೆ. ಯುವರಾಜ್​ ಬಿರಾದಾರ್​​(45) ಮೃತ ವ್ಯಕ್ತಿ. ಗಾಯಗೊಂಡ ಯುವರಾಜ್​ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:59 pm, Tue, 28 January 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us