24 ವರ್ಷದಿಂದ ನಾಪತ್ತೆಯಾಗಿದ್ದ ವಿಜಯಪುರದ ವ್ಯಕ್ತಿಯನ್ನು ಮನೆ ಸೇರಿಸಿದ ಕುಂಭಮೇಳ

| Updated By: ರಮೇಶ್ ಬಿ. ಜವಳಗೇರಾ

Updated on: Feb 25, 2025 | 11:17 PM

ಉತ್ತರಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರೋ ಮಹಾಕುಂಭ ಮೇಳಕ್ಕೆ ತೆರೆ ಬೀಳುತ್ತಿದೆ. 45 ಕೋಟಿ ಜನರು ಪುಣ್ಯ ಸ್ನಾನ ಮಾಡಿದರು ಎನ್ನಲಾಗುತ್ತಿದೆ. ಇನ್ನು ಪ್ರಯಾಗ್ ರಾಜ್ ಗೆ ಹೋಗುವಾಗ ಅನೇಕ ತೊಂದರೆಗಳು ಟ್ರಾಫಿಕ್ ಜಾಮ್ ಸಮಸ್ಯೆ ಅಪಘಾತವಾಗಿ ಅನೇಕರ ಸಾವು ನೋವು ಘಟನೆಗಳು ನಡೆದಿವೆ. ಇಷ್ಟರ ಮದ್ಯೆ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭ ಮೇಳ 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವನನ್ನು ವಾಪಸ್ ಮನೆಗೆ ಕರೆ ತರುವುದಕ್ಕೆ ಕಾರಣವಾಗಿದೆ.

24 ವರ್ಷದಿಂದ ನಾಪತ್ತೆಯಾಗಿದ್ದ ವಿಜಯಪುರದ ವ್ಯಕ್ತಿಯನ್ನು ಮನೆ ಸೇರಿಸಿದ ಕುಂಭಮೇಳ
ರಮೇಶ ಚೌಧರಿ
Follow us on

ವಿಜಯಪುರ, (ಫೆಬ್ರವರಿ 25): ಕಳೆದ 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವ ಮತ್ತೆ ವಾಪಸ್​ ಮನೆ ಸೇರಿದ್ದಾನೆ. ಇದಕ್ಕೆ ಕಾರಣ ಮಹಾ ಕುಂಭಮೇಳ. ಹೌದು..ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ರಮೇಶ ಚೌಧರಿ ಕಳೆದ 2001 ರಲ್ಲಿ ಮನೆಯಿಂದ ನಾಪತ್ತೆಯಾಗಿದ್ದು, ಇದೀಗ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಾದಲ್ಲಿ ಪತ್ತೆಯಾಗಿದ್ದಾರೆ. 24 ವರ್ಷಗಳಿಂದ ನಾಪತ್ತೆಯಾಗಿದ್ದ ರಮೇಶ ಚೌಧರಿ ಕುಂಭಮೇಳಕ್ಕೆ ತೆರಳಿದ್ದವರಿಗೆ ಕಾಶಿಯಲ್ಲಿ ಸಿಕ್ಕಿದ್ದಾರೆ. ಇನ್ನು ರಮೇಶನನ್ನು ತಮ್ಮ ವಾಹನದಲ್ಲಿ ವಾಪಸ್ ಬಳೂತಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾರೆ. ಸುಮಾರು 24 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಮೇಶ ಚೌಧರಿ ಬಳೂತಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಆತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ರಮೇಶ ಚೌಧರಿ ಕಳೆದ 2001 ರಲ್ಲಿ ಮನೆಯಿಂದ ನಾಪತ್ತೆಯಾಗಿದ್ದ. ಆತನ ಗುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಇನ್ನು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರೋ ಕುಂಭ ಮೇಳಕ್ಕೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ಮಲ್ಲನಗೌಡ ಪಾಟೀಲ ಹಾಗೂ ಇತರರು ತೆರಳಿದ್ದರು. ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ಥಾನ ಮಾಡಿದ ರಮೇಶ ಹಾಗೂ ತಂಡ ಕಾಶಿಗೆ ತೆರಳಿತ್ತು. ಕಾಶಿಯಲ್ಲಿ ಮಲ್ಲನಗೌಡ ಕಣ್ಣಿಗೆ ರಮೇಶ ಸನ್ಯಾಸಿಯ ಬಟ್ಟೆಯಲ್ಲಿ ಕಂಡಿದ್ದಾರೆ. ರಮೇಶನನ್ನು ಕಂಡ ಮಲ್ಲನಗೌಡ ಈತ ನಮ್ಮೂರಿನವ ಎಂದು ನೋಡಿ ಮಾತನಾಡಿಸಿದ್ದಾರೆ. ಆಗ ಆತ ಬಳೂತಿ ಗ್ರಾಮದ ರಮೇಶ ಚೌಧರಿ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: 7 ವರ್ಷಗಳ ಹಿಂದೆ ನಾಪತ್ತೆಯಾಗಿ ಮಹಾರಾಷ್ಟ್ರದ ರಾಯಗಢದಲ್ಲಿದ್ದ ಬಾದಾಮಿ ಮಹಿಳೆ ಸಿನಿಮೀಯ ರೀತಿಯಲ್ಲಿ ವಾಪಸ್

ಕನ್ನಡದಲ್ಲಿ ರಮೇಶನನ್ನು ಮಾತನಾಡಿಸಿ ವಿಚಾರಿಸಿದ್ದಾರೆ. ರಮೇಶ ತನ್ನೆಲ್ಲಾ ಮಾಹಿತಿ ನೀಡಿದ್ದಾರೆ. ಮನೆ ಬಿಟ್ಟು ಊರೂರು ಅಲೆಯುತ್ತಾ ಬಿಹಾರದ ಪಾಟ್ನಾಕ್ಕೆ ಹೋಗಿ ಅಲ್ಲಿ ಡಾಂಬರೀಕರಣ ಕೆಲಸ ಮಾಡುತ್ತಾ ಕಾಲ ಕಳೆದೆ. ಊರು ನೆನಪು ಆಗುತ್ತಿತ್ತು. ಊರಿಗೆ ಹೋಗಬೇಕೆಂದು ಒಂದೆರಡು ಬಾರಿ ಪ್ರಯತ್ನ ಮಾಡಿ ಬಿಟ್ಟೆ. ನನಗೆ ನನ್ನದೆಯಾದ ಒತ್ತಡವಿತ್ತು ಎಂದೆಲ್ಲಾ ಹೇಳಿದ್ಧಾನೆ. ತನ್ನ ಪೂರ್ವಾಪರ, ತಂದೆ, ತಾಯಿ ಹಾಗೂ ಕುಟುಂಬಸ್ಥರ ಹೆಸರುಗಳನ್ನು ಕೂಡ ಹೇಳಿದ್ದಾನೆ.

ಆಗ ಮಲ್ಲನಗೌಡ ಬಳೂತಿಯಲ್ಲಿರೋ ರಮೇಶನ ಸಂಬಂಧಿಕರಿಗೆ ವಿಡಿಯೋ ಕಾಲ ಮಾಡಿ ರಮೇಶ ಸಿಕ್ಕಿದ್ದರ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ ಕಾಶಿಯಿಂದಲೇ ಕಟುಂಬಸ್ಥರೊಂದಿಗೆ ಮಾತನಾಡಿದ್ದಾನೆ. ನಂತರ ಮಲ್ಲನಗೌಡ ಅವರು ರಮೇಶನನ್ನು ತಮ್ಮ ವಾಹನದಲ್ಲಿ ವಾಪಸ್ ಬಳೂತಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾರೆ. ಸುಮಾರು 24 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಮೇಶ ಚೌಧರಿ ಬಳೂತಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಆತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ