AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tragedy: ಸ್ವಾತಂತ್ರೋತ್ಸವದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಬರುವಾಗ ಅಪಘಾತ: ಕಾಲೇಜು ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ಸ್ವರೂಪ‌ ನಾಗೇಶ ಸಾರವಾಡ (19) ಮೃತ ವಿದ್ಯಾರ್ಥಿ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಸ್ವರೂಪ, ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅವಘಡ ನಡೆದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tragedy: ಸ್ವಾತಂತ್ರೋತ್ಸವದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಬರುವಾಗ ಅಪಘಾತ:  ಕಾಲೇಜು ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಸ್ವರೂಪ‌ ನಾಗೇಶ ಸಾರವಾಡ
TV9 Web
| Edited By: |

Updated on: Aug 15, 2022 | 2:45 PM

Share

ವಿಜಯಪುರ: 75ನೇ ವರ್ಷದ ಸ್ವಾತಂತ್ರೋತ್ಸವ(Independence 75) ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಸ್ಕೂಟಿಯಲ್ಲಿ ಬರುತ್ತಿದ್ದ ವಿದ್ಯಾರ್ಥಿಗಳಿಗೆ ಅಪಘಾತವಾಗಿದೆ. ವಿಜಯಪುರ ನಗರದ ಹೊರ ಭಾಗದ ರಿಂಗ್ ರೋಡ್ ನಲ್ಲಿ ವಿದ್ಯಾರ್ಥಿಗಳ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ(Accident) ಓರ್ವ ವಿದ್ಯಾರ್ಥಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವನಿಗೆ ಗಂಭೀರ‌ ಗಾಯಗಳಾಗಿವೆ.

ಸ್ವರೂಪ‌ ನಾಗೇಶ ಸಾರವಾಡ (19) ಮೃತ ವಿದ್ಯಾರ್ಥಿ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಸ್ವರೂಪ, ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅವಘಡ ನಡೆದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಕೂಟಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆಗಾಗಿ ಪೊಲೀಸರು ತಲಾಷ್ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ₹15 ಲಕ್ಷ ನೀಡುವ ಭರವಸೆ, ರೈತರ ಆದಾಯ ದುಪ್ಪಟ್ಟು ಮಾಡುವ ವಾಗ್ದಾನ ಏನಾಯಿತು: ಮೋದಿ ವಿರುದ್ಧ ಪವನ್ ಖೇರಾ ವಾಗ್ದಾಳಿ

ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ

ಬೆಂಗಳೂರು: ಬೆಂಗಳೂರಿನ HBR​​ ಲೇಔಟ್​​ನಲ್ಲಿ (HBR Layout Bangalore) ನಿನ್ನೆ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸುಳ್ಯ ಮೂಲದ ವಿಶುಕುಮಾರ್ (33) ಮೃತ ದುರ್ದೈವಿ. ವಿಶುಕುಮಾರ್ (sullia vishu kumar) ನಿನ್ನೆ ಟೆರಸ್ ಮೇಲೆ ಧ್ವಜ ಕಟ್ಟುತ್ತಿದ್ದಾಗ ಬಿದ್ದಿದ್ದ. ಆತನನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ (Azadi Ka Amrit Mahotsav).

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ವಿಶುಕುಮಾರ್ ನಿನ್ನೆ ಭಾನುವಾರ ಮಧ್ಯಾಹ್ನ 1.45 ರಲ್ಲಿ ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿದ್ದಾಗ ಎರಡನೇ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಮೇಲಿಂದ ಕೆಳಗೆ ಬಿದ್ದಿದ್ದ ವಿಶುಕುಮಾರ್ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ವಿಶುಕುಮಾರ್ ಕೊನೆಯುಸಿರೆಳೆದ್ದಾರೆ. ಘಟನೆ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಅವರು ದೂರು ನೀಡಿದ್ದು, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ