AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಸಿಂದಗಿಯಲ್ಲಿ ಮತ್ತೆ ಭೂಕಂಪದ ಅನುಭವ! ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆತಂಕ

ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿರುವ ಬಗ್ಗೆ ಮಾಹಿತಿ ಇದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ ದಾಖಲಾಗಿದ್ದು, ಜನರಿಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚುತ್ತಿದೆ.

ವಿಜಯಪುರ ಸಿಂದಗಿಯಲ್ಲಿ ಮತ್ತೆ ಭೂಕಂಪದ ಅನುಭವ! ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆತಂಕ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 06, 2021 | 9:14 AM

Share

ವಿಜಯಪುರ: ಜಿಲ್ಲೆಯ ಸಿಂದಗಿಯಲ್ಲಿ ಮತ್ತೆ ಭೂಕಂಪದ (Earthquake) ಅನುಭವವಾಗಿದೆ. ಇಂದು (ಅ.6) ಬೆಳಗ್ಗೆ 8.30ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಸಿಂದಗಿ ಪಟ್ಟಣದ ನಾಗೂರು ಬಡಾವಣೆ, ಶಿವಶಂಕರ್ ಬಡಾವಣೆ, ವಿದ್ಯಾನಗರ, ಜ್ಯೋತಿನಗರ ಸೇರಿ ಹಲವೆಡೆ ಕಂಪನದ ಅನುಭವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಳೆದ ಅಕ್ಟೋಬರ್ 1ರ ಬೆಳಗಿನ ಜಾವ 5.30 ಕ್ಕೆ ಭೂಮಿ ನಡುಗಿದ ಅನುಭವ ಉಂಟಾಗಿತ್ತು. ಈಗ ಮತ್ತೆ ಸಿಂದಗಿ ಪಟ್ಟಣದಲ್ಲಿ 2ನೇ ಬಾರಿ ಭೂಮಿ ಕಂಪಿಸಿದ ಅನುಭವಾಗಿದೆ. ಆದರೆ ಅನಾಹುತ ಸಂಭವಿಸಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಈವರೆಗೆ ಜಿಲ್ಲೆಯಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿರುವ ಬಗ್ಗೆ ಮಾಹಿತಿ ಇದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ ದಾಖಲಾಗಿದ್ದು, ಜನರಿಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚುತ್ತಿದೆ. ಇನ್ನು ಅಕ್ಟೋಬರ್ 2ರ ಬೆಳಗ್ಗೆ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ, ಬಾಬಾನಗರ, ಕಳ್ಳಕವಟಗಿ, ಸೋಮದೇವರಹಟ್ಟಿ, ಘೊಣಸಗಿ, ಮಲಕನದೇವರಹಟ್ಟಿ, ಹುಬನೂರ, ಸಿದ್ದಾಪುರ ಕೆ, ಟಕ್ಕಳಕಿ ಭಾಗದಲ್ಲಿ 8.30 ರಿಂದ 8.31 ನಿಮಿಷಕ್ಕೆ ಭೂಮಿ ಕಂಪನವಾಗಿತ್ತು. ಭೂಕಂಪನ ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲಾಗಿತ್ತು.

ಅಕ್ಟೋಬರ್ 1ಕ್ಕೆ ಸಿಂದಗಿ ಪಟ್ಟಣದಲ್ಲಿ ಭೂಕಂಪನದ ಅನುಭವವಾಗಿತ್ತು. ಭೂಕಂಪನದವೆಂದು ವಿಜಯಪುರ ಜಿಲ್ಲಾಡಳಿತ ದೃಢಪಡಿಸಿತ್ತು. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.5ರಷ್ಟು ದಾಖಲಾಗಿದೆ. ಮಸೂತಿಯಲ್ಲಿ ಭೂಕಂಪನದ ಕೇಂದ್ರ ಬಿಂದುವಿದ್ದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಈ ಕುರಿತು ಅಧಿಕೃತ ಮಾಹಿತಿ ನೀಡಿತ್ತು.

ಇದನ್ನೂ ಓದಿ

ಹೃದಯ ಕಾಯಿಲೆಗೆ ಬೇಸತ್ತು ತಾನೂ ವಿಷ ಸೇವಿಸಿ ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿದ ತಾಯಿ

ಸಿಂದಗಿ ಪಟ್ಟಣದಲ್ಲಿ ಭೂಕಂಪನವಾದದ್ದು ನಿಜ; ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲು

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ