AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಐತಿಹಾಸಿಕ ಸ್ಮಾರಕಗಳು ಹೇಗಿವೆ? ಹೆಚ್​ಕೆ ಪಾಟೀಲ್ ಜೊತೆ ಕನ್ನಡದಲ್ಲೇ ಮಾತನಾಡಿದ ಅಮೇರಿಕದ ಪ್ರಜೆಗಳು

ಅಮೇರಿಕದ ಪ್ರಜೆಗಳು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಈ ವೇಳೆ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಿಂದ ಹೊರ ಬಂದ ಸಚಿವ ಎಚ್​ಕೆ ಪಾಟೀಲ್ ಅವರನ್ನು ಭೇಟಿಯಾದ ಪ್ರವಾರಿಗರೊಂದಿಗೆ ಸಚಿವರು ಕನ್ನಡದಲ್ಲೇ ಮಾತನಾಡಿದರು. ಇದಕ್ಕೆ ಪ್ರವಾಸಿಗರು ಕೂಡ ಕನ್ನಡದಲ್ಲೇ ಮಾತನಾಡಿ ಗಮನಸೆಳೆದರು.

TV9 Web
| Edited By: Rakesh Nayak Manchi|

Updated on: Nov 21, 2023 | 7:21 PM

Share

ವಿಜಯಪುರ, ನ.21: ಜಿಲ್ಲಾ ಪ್ರವಾಸದಲ್ಲಿರುವ ಅಮೇರಿಕಾದ ನ್ಯೂಯಾರ್ಕ್ ನಗರದ ಇಬ್ಬರು ಪ್ರಜೆಗಳು ಕನ್ನಡದಲ್ಲಿ ಮಾತನಾಡುವ ಮೂಲಕ ಸಚಿವ ಎಚ್​ಕೆ ಪಾಟೀಲ್ (HK Patil) ಅವರ ಮನಗೆದ್ದರು. ವಿದೇಶಿ ಪ್ರಜೆಗಳ ಕನ್ನಡ ಪ್ರೀತಿ ಕಂಡು ಸಚಿವರು ನಾಳೆ ಬೆಳಿಗ್ಗೆ ಉಪಹಾರಕ್ಕೆ ಆಹ್ವಾನಿಸಿದರು.

ಹೌದು, ನ್ಯೂಯಾರ್ಕ್ ನಗರದ ಪ್ರಜೆಗಳಾದ ರಿಚರ್ಡ್ ಹಾಗೂ ನ್ಯಾನ್ಸಿ ಅವರು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಕಚೇರಿಯಿಂದ ಹೊರಬಂದ ಸಚಿವ ಎಚ್​ಕೆ ಪಾಟೀಲರು, ರಿಚರ್ಡ್ ಮತ್ತು ನ್ಯಾನ್ಸಿ ಅವರನ್ನು ಭೇಟಿಯಾದರು.

ಇದನ್ನೂ ಓದಿ: ಬೇಸಿಗೆಯಲ್ಲಿ ಕುಡಿಯುವ ನೀರಿ ಸಮಸ್ಯೆ: ಗದಗದಲ್ಲಿ ಆತಂಕ ಹೊರಹಾಕಿದ ಸಚಿವ ಹೆಚ್​ಕೆ ಪಾಟೀಲ್

ಭೇಟಿ ವೇಳೆ, ಐತಿಹಾಸಿಕ ಸ್ಮಾರಕಗಳ ಹೇಗಿವೆ ಎಂದು ಎಚ್ ಕೆ ಪಾಟೀಲ್ ಕೇಳಿದರು. ಇದಕ್ಕೆ ರಿಚರ್ಡ್ ಮತ್ತು ನ್ಯಾನ್ಸಿ ಅವರು ಕನ್ನಡದಲ್ಲೇ ಉತ್ತರಿಸಿದರು. ಅಲ್ಲದೆ, ವಿಜಯಪುರ, ಮೈಸೂರು, ರಾಯಚೂರು ಹಾಗೂ ಕರ್ನಾಟಕದ ಬಗ್ಗೆ ಕನ್ನಡದಲ್ಲೇ ತಮ್ಮ ಅನಿಸಿಕೆಗಳನ್ನು ರಿಚರ್ಡ್ ತಿಳಿಸಿದರು.

ಕನ್ನಡ ಚೆನ್ನಾಗಿದೆ, ವಿಜಯಪುರ ಚೆನ್ನಾಗಿದೆ, ಸ್ಮಾರಕಗಳು ಚೆನ್ನಾಗಿವೆ ಎಂದು ಅಮೇರಿಕಾದ ಪ್ರಜೆಗಳು ಹೇಳಿದರು. ಇವರ ಕನ್ನಡ ಪ್ರೇಮಕಂಡು ಸಂತಸ ವ್ಯಕ್ತಪಡಿಸಿದ ಸಚಿವರು, ನಾಳೆ ಬೆಳಿಗ್ಗೆ ತಮ್ಮ ಜೊತೆಗೆ ಉಪಹಾರಕ್ಕೆ ಬರುವಂತೆ ಆಹ್ವಾನ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್