ವಿಜಯಪುರದ ಐತಿಹಾಸಿಕ ಸ್ಮಾರಕಗಳು ಹೇಗಿವೆ? ಹೆಚ್​ಕೆ ಪಾಟೀಲ್ ಜೊತೆ ಕನ್ನಡದಲ್ಲೇ ಮಾತನಾಡಿದ ಅಮೇರಿಕದ ಪ್ರಜೆಗಳು

ಅಮೇರಿಕದ ಪ್ರಜೆಗಳು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಈ ವೇಳೆ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಿಂದ ಹೊರ ಬಂದ ಸಚಿವ ಎಚ್​ಕೆ ಪಾಟೀಲ್ ಅವರನ್ನು ಭೇಟಿಯಾದ ಪ್ರವಾರಿಗರೊಂದಿಗೆ ಸಚಿವರು ಕನ್ನಡದಲ್ಲೇ ಮಾತನಾಡಿದರು. ಇದಕ್ಕೆ ಪ್ರವಾಸಿಗರು ಕೂಡ ಕನ್ನಡದಲ್ಲೇ ಮಾತನಾಡಿ ಗಮನಸೆಳೆದರು.

Follow us
| Updated By: Rakesh Nayak Manchi

Updated on: Nov 21, 2023 | 7:21 PM

ವಿಜಯಪುರ, ನ.21: ಜಿಲ್ಲಾ ಪ್ರವಾಸದಲ್ಲಿರುವ ಅಮೇರಿಕಾದ ನ್ಯೂಯಾರ್ಕ್ ನಗರದ ಇಬ್ಬರು ಪ್ರಜೆಗಳು ಕನ್ನಡದಲ್ಲಿ ಮಾತನಾಡುವ ಮೂಲಕ ಸಚಿವ ಎಚ್​ಕೆ ಪಾಟೀಲ್ (HK Patil) ಅವರ ಮನಗೆದ್ದರು. ವಿದೇಶಿ ಪ್ರಜೆಗಳ ಕನ್ನಡ ಪ್ರೀತಿ ಕಂಡು ಸಚಿವರು ನಾಳೆ ಬೆಳಿಗ್ಗೆ ಉಪಹಾರಕ್ಕೆ ಆಹ್ವಾನಿಸಿದರು.

ಹೌದು, ನ್ಯೂಯಾರ್ಕ್ ನಗರದ ಪ್ರಜೆಗಳಾದ ರಿಚರ್ಡ್ ಹಾಗೂ ನ್ಯಾನ್ಸಿ ಅವರು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಕಚೇರಿಯಿಂದ ಹೊರಬಂದ ಸಚಿವ ಎಚ್​ಕೆ ಪಾಟೀಲರು, ರಿಚರ್ಡ್ ಮತ್ತು ನ್ಯಾನ್ಸಿ ಅವರನ್ನು ಭೇಟಿಯಾದರು.

ಇದನ್ನೂ ಓದಿ: ಬೇಸಿಗೆಯಲ್ಲಿ ಕುಡಿಯುವ ನೀರಿ ಸಮಸ್ಯೆ: ಗದಗದಲ್ಲಿ ಆತಂಕ ಹೊರಹಾಕಿದ ಸಚಿವ ಹೆಚ್​ಕೆ ಪಾಟೀಲ್

ಭೇಟಿ ವೇಳೆ, ಐತಿಹಾಸಿಕ ಸ್ಮಾರಕಗಳ ಹೇಗಿವೆ ಎಂದು ಎಚ್ ಕೆ ಪಾಟೀಲ್ ಕೇಳಿದರು. ಇದಕ್ಕೆ ರಿಚರ್ಡ್ ಮತ್ತು ನ್ಯಾನ್ಸಿ ಅವರು ಕನ್ನಡದಲ್ಲೇ ಉತ್ತರಿಸಿದರು. ಅಲ್ಲದೆ, ವಿಜಯಪುರ, ಮೈಸೂರು, ರಾಯಚೂರು ಹಾಗೂ ಕರ್ನಾಟಕದ ಬಗ್ಗೆ ಕನ್ನಡದಲ್ಲೇ ತಮ್ಮ ಅನಿಸಿಕೆಗಳನ್ನು ರಿಚರ್ಡ್ ತಿಳಿಸಿದರು.

ಕನ್ನಡ ಚೆನ್ನಾಗಿದೆ, ವಿಜಯಪುರ ಚೆನ್ನಾಗಿದೆ, ಸ್ಮಾರಕಗಳು ಚೆನ್ನಾಗಿವೆ ಎಂದು ಅಮೇರಿಕಾದ ಪ್ರಜೆಗಳು ಹೇಳಿದರು. ಇವರ ಕನ್ನಡ ಪ್ರೇಮಕಂಡು ಸಂತಸ ವ್ಯಕ್ತಪಡಿಸಿದ ಸಚಿವರು, ನಾಳೆ ಬೆಳಿಗ್ಗೆ ತಮ್ಮ ಜೊತೆಗೆ ಉಪಹಾರಕ್ಕೆ ಬರುವಂತೆ ಆಹ್ವಾನ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ