AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಐತಿಹಾಸಿಕ ಸ್ಮಾರಕಗಳು ಹೇಗಿವೆ? ಹೆಚ್​ಕೆ ಪಾಟೀಲ್ ಜೊತೆ ಕನ್ನಡದಲ್ಲೇ ಮಾತನಾಡಿದ ಅಮೇರಿಕದ ಪ್ರಜೆಗಳು

ಅಮೇರಿಕದ ಪ್ರಜೆಗಳು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಈ ವೇಳೆ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಿಂದ ಹೊರ ಬಂದ ಸಚಿವ ಎಚ್​ಕೆ ಪಾಟೀಲ್ ಅವರನ್ನು ಭೇಟಿಯಾದ ಪ್ರವಾರಿಗರೊಂದಿಗೆ ಸಚಿವರು ಕನ್ನಡದಲ್ಲೇ ಮಾತನಾಡಿದರು. ಇದಕ್ಕೆ ಪ್ರವಾಸಿಗರು ಕೂಡ ಕನ್ನಡದಲ್ಲೇ ಮಾತನಾಡಿ ಗಮನಸೆಳೆದರು.

TV9 Web
| Edited By: Rakesh Nayak Manchi|

Updated on: Nov 21, 2023 | 7:21 PM

Share

ವಿಜಯಪುರ, ನ.21: ಜಿಲ್ಲಾ ಪ್ರವಾಸದಲ್ಲಿರುವ ಅಮೇರಿಕಾದ ನ್ಯೂಯಾರ್ಕ್ ನಗರದ ಇಬ್ಬರು ಪ್ರಜೆಗಳು ಕನ್ನಡದಲ್ಲಿ ಮಾತನಾಡುವ ಮೂಲಕ ಸಚಿವ ಎಚ್​ಕೆ ಪಾಟೀಲ್ (HK Patil) ಅವರ ಮನಗೆದ್ದರು. ವಿದೇಶಿ ಪ್ರಜೆಗಳ ಕನ್ನಡ ಪ್ರೀತಿ ಕಂಡು ಸಚಿವರು ನಾಳೆ ಬೆಳಿಗ್ಗೆ ಉಪಹಾರಕ್ಕೆ ಆಹ್ವಾನಿಸಿದರು.

ಹೌದು, ನ್ಯೂಯಾರ್ಕ್ ನಗರದ ಪ್ರಜೆಗಳಾದ ರಿಚರ್ಡ್ ಹಾಗೂ ನ್ಯಾನ್ಸಿ ಅವರು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಕಚೇರಿಯಿಂದ ಹೊರಬಂದ ಸಚಿವ ಎಚ್​ಕೆ ಪಾಟೀಲರು, ರಿಚರ್ಡ್ ಮತ್ತು ನ್ಯಾನ್ಸಿ ಅವರನ್ನು ಭೇಟಿಯಾದರು.

ಇದನ್ನೂ ಓದಿ: ಬೇಸಿಗೆಯಲ್ಲಿ ಕುಡಿಯುವ ನೀರಿ ಸಮಸ್ಯೆ: ಗದಗದಲ್ಲಿ ಆತಂಕ ಹೊರಹಾಕಿದ ಸಚಿವ ಹೆಚ್​ಕೆ ಪಾಟೀಲ್

ಭೇಟಿ ವೇಳೆ, ಐತಿಹಾಸಿಕ ಸ್ಮಾರಕಗಳ ಹೇಗಿವೆ ಎಂದು ಎಚ್ ಕೆ ಪಾಟೀಲ್ ಕೇಳಿದರು. ಇದಕ್ಕೆ ರಿಚರ್ಡ್ ಮತ್ತು ನ್ಯಾನ್ಸಿ ಅವರು ಕನ್ನಡದಲ್ಲೇ ಉತ್ತರಿಸಿದರು. ಅಲ್ಲದೆ, ವಿಜಯಪುರ, ಮೈಸೂರು, ರಾಯಚೂರು ಹಾಗೂ ಕರ್ನಾಟಕದ ಬಗ್ಗೆ ಕನ್ನಡದಲ್ಲೇ ತಮ್ಮ ಅನಿಸಿಕೆಗಳನ್ನು ರಿಚರ್ಡ್ ತಿಳಿಸಿದರು.

ಕನ್ನಡ ಚೆನ್ನಾಗಿದೆ, ವಿಜಯಪುರ ಚೆನ್ನಾಗಿದೆ, ಸ್ಮಾರಕಗಳು ಚೆನ್ನಾಗಿವೆ ಎಂದು ಅಮೇರಿಕಾದ ಪ್ರಜೆಗಳು ಹೇಳಿದರು. ಇವರ ಕನ್ನಡ ಪ್ರೇಮಕಂಡು ಸಂತಸ ವ್ಯಕ್ತಪಡಿಸಿದ ಸಚಿವರು, ನಾಳೆ ಬೆಳಿಗ್ಗೆ ತಮ್ಮ ಜೊತೆಗೆ ಉಪಹಾರಕ್ಕೆ ಬರುವಂತೆ ಆಹ್ವಾನ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!