AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಐತಿಹಾಸಿಕ ಸ್ಮಾರಕಗಳು ಹೇಗಿವೆ? ಹೆಚ್​ಕೆ ಪಾಟೀಲ್ ಜೊತೆ ಕನ್ನಡದಲ್ಲೇ ಮಾತನಾಡಿದ ಅಮೇರಿಕದ ಪ್ರಜೆಗಳು

ಅಮೇರಿಕದ ಪ್ರಜೆಗಳು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದರು. ಈ ವೇಳೆ ವಿಜಯಪುರದ ಜಿಲ್ಲಾಧಿಕಾರಿ ಕಚೇರಿಯಿಂದ ಹೊರ ಬಂದ ಸಚಿವ ಎಚ್​ಕೆ ಪಾಟೀಲ್ ಅವರನ್ನು ಭೇಟಿಯಾದ ಪ್ರವಾರಿಗರೊಂದಿಗೆ ಸಚಿವರು ಕನ್ನಡದಲ್ಲೇ ಮಾತನಾಡಿದರು. ಇದಕ್ಕೆ ಪ್ರವಾಸಿಗರು ಕೂಡ ಕನ್ನಡದಲ್ಲೇ ಮಾತನಾಡಿ ಗಮನಸೆಳೆದರು.

TV9 Web
| Edited By: |

Updated on: Nov 21, 2023 | 7:21 PM

Share

ವಿಜಯಪುರ, ನ.21: ಜಿಲ್ಲಾ ಪ್ರವಾಸದಲ್ಲಿರುವ ಅಮೇರಿಕಾದ ನ್ಯೂಯಾರ್ಕ್ ನಗರದ ಇಬ್ಬರು ಪ್ರಜೆಗಳು ಕನ್ನಡದಲ್ಲಿ ಮಾತನಾಡುವ ಮೂಲಕ ಸಚಿವ ಎಚ್​ಕೆ ಪಾಟೀಲ್ (HK Patil) ಅವರ ಮನಗೆದ್ದರು. ವಿದೇಶಿ ಪ್ರಜೆಗಳ ಕನ್ನಡ ಪ್ರೀತಿ ಕಂಡು ಸಚಿವರು ನಾಳೆ ಬೆಳಿಗ್ಗೆ ಉಪಹಾರಕ್ಕೆ ಆಹ್ವಾನಿಸಿದರು.

ಹೌದು, ನ್ಯೂಯಾರ್ಕ್ ನಗರದ ಪ್ರಜೆಗಳಾದ ರಿಚರ್ಡ್ ಹಾಗೂ ನ್ಯಾನ್ಸಿ ಅವರು ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ವೇಳೆ ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ನಂತರ ಕಚೇರಿಯಿಂದ ಹೊರಬಂದ ಸಚಿವ ಎಚ್​ಕೆ ಪಾಟೀಲರು, ರಿಚರ್ಡ್ ಮತ್ತು ನ್ಯಾನ್ಸಿ ಅವರನ್ನು ಭೇಟಿಯಾದರು.

ಇದನ್ನೂ ಓದಿ: ಬೇಸಿಗೆಯಲ್ಲಿ ಕುಡಿಯುವ ನೀರಿ ಸಮಸ್ಯೆ: ಗದಗದಲ್ಲಿ ಆತಂಕ ಹೊರಹಾಕಿದ ಸಚಿವ ಹೆಚ್​ಕೆ ಪಾಟೀಲ್

ಭೇಟಿ ವೇಳೆ, ಐತಿಹಾಸಿಕ ಸ್ಮಾರಕಗಳ ಹೇಗಿವೆ ಎಂದು ಎಚ್ ಕೆ ಪಾಟೀಲ್ ಕೇಳಿದರು. ಇದಕ್ಕೆ ರಿಚರ್ಡ್ ಮತ್ತು ನ್ಯಾನ್ಸಿ ಅವರು ಕನ್ನಡದಲ್ಲೇ ಉತ್ತರಿಸಿದರು. ಅಲ್ಲದೆ, ವಿಜಯಪುರ, ಮೈಸೂರು, ರಾಯಚೂರು ಹಾಗೂ ಕರ್ನಾಟಕದ ಬಗ್ಗೆ ಕನ್ನಡದಲ್ಲೇ ತಮ್ಮ ಅನಿಸಿಕೆಗಳನ್ನು ರಿಚರ್ಡ್ ತಿಳಿಸಿದರು.

ಕನ್ನಡ ಚೆನ್ನಾಗಿದೆ, ವಿಜಯಪುರ ಚೆನ್ನಾಗಿದೆ, ಸ್ಮಾರಕಗಳು ಚೆನ್ನಾಗಿವೆ ಎಂದು ಅಮೇರಿಕಾದ ಪ್ರಜೆಗಳು ಹೇಳಿದರು. ಇವರ ಕನ್ನಡ ಪ್ರೇಮಕಂಡು ಸಂತಸ ವ್ಯಕ್ತಪಡಿಸಿದ ಸಚಿವರು, ನಾಳೆ ಬೆಳಿಗ್ಗೆ ತಮ್ಮ ಜೊತೆಗೆ ಉಪಹಾರಕ್ಕೆ ಬರುವಂತೆ ಆಹ್ವಾನ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ