AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾಯ್ತು ಬಬಲಾದಿ ಸದಾಶಿವಮುತ್ಯಾರ ಮಠದ ಕಾಲಜ್ಞಾನ ಭವಿಷ್ಯ; 9 ತಿಂಗಳ ಹಿಂದಿನ ವಿಡಿಯೋ ಈಗ ವೈರಲ್​

500 ವರ್ಷಗಳ ಹಿಂದೆ ಚಿಕ್ಕಯ್ಯಪ್ಪ ಸ್ಚಾಮೀಜಿ ಬರೆದಿಟ್ಟಿರುವ ಕಾಲಜ್ಞಾನದ ಕುರಿತು 2021ರ ಶಿವರಾತ್ರಿಯಲ್ಲಿ ನಡೆದಿದ್ದ ಸದಾಶಿವ ಮುತ್ಯಾರ ಜಾತ್ರೆಯಲ್ಲಿ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಜಾತ್ರೆಯಲ್ಲಿ ಕಾಲಜ್ಞಾನವನ್ನು ಓದಲಾಗುತ್ತದೆ.

ನಿಜವಾಯ್ತು ಬಬಲಾದಿ ಸದಾಶಿವಮುತ್ಯಾರ ಮಠದ ಕಾಲಜ್ಞಾನ ಭವಿಷ್ಯ; 9 ತಿಂಗಳ ಹಿಂದಿನ ವಿಡಿಯೋ ಈಗ ವೈರಲ್​
ಬಬಲಾದಿ ಮಠದ ಪೀಠಾಧಿಪತಿ‌ ಸಿದ್ದರಾಮಯ್ಯ ಹೋಳಿಮಠ
TV9 Web
| Edited By: |

Updated on:Nov 29, 2021 | 4:49 PM

Share

ವಿಜಯಪುರ: ತಿರುಪತಿಯಲ್ಲಿ ಉಂಟಾದ ಜಲಪ್ರಳಯದ ಬಗ್ಗೆ 9 ತಿಂಗಳ ಮುಂಚೆಯೇ ಬಬಲಾದಿ ಸದಾಶಿವಮುತ್ಯಾರ ಮಠದ (Babaladi Sadashiv Mutya mutt) ಸ್ವಾಮೀಜಿ ಭವಿಷ್ಯ ನುಡಿದಿದ್ದರು. ಬಬಲಾದಿ ಮಠದ ಪೀಠಾಧಿಪತಿ‌ ಸಿದ್ದರಾಮಯ್ಯ ಹೋಳಿಮಠ ನುಡಿದ ಕಾಲಜ್ಞಾನ ಈಗ ನಿಜವಾಗಿದೆ. ಕಳೆದ ಶಿವರಾತ್ರಿ ಜಾತ್ರೆ ವೇಳೆ ಆಂಧ್ರ-ತೆಲಗು ರಾಜ್ಯಕ್ಕೆ ಕೇಡು ಎಂದು ಮೊದಲೇ ಸ್ವಾಮೀಜಿ ಕಾಲಜ್ಞಾನ ಭವಿಷ್ಯ ಹೇಳಿದ್ದರು. ಆಂಧ್ರ ಪ್ರದೇಶಕ್ಕೆ, ತೆಲಗು ಮಾತನಾಡುವ ರಾಜ್ಯಕ್ಕೆ ಜಲ‌ಕಂಟಕ ಇದೆ ಎಂದು ತಿಳಿಸಿದ್ದರು. ಸಾಮಾಜಿಕ ತಾಲ‌ತಾಣದಲ್ಲಿ ಸ್ವಾಮೀಜಿ ನುಡಿದಿರುವ ಕಾಲಜ್ಞಾನ ಈಗ ವೈರಲ್ ಆಗಿದೆ.

500 ವರ್ಷಗಳ ಹಿಂದೆ ಚಿಕ್ಕಯ್ಯಪ್ಪ ಸ್ಚಾಮೀಜಿ ಬರೆದಿಟ್ಟಿರುವ ಕಾಲಜ್ಞಾನದ ಕುರಿತು 2021ರ ಶಿವರಾತ್ರಿಯಲ್ಲಿ ನಡೆದಿದ್ದ ಸದಾಶಿವ ಮುತ್ಯಾರ ಜಾತ್ರೆಯಲ್ಲಿ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಜಾತ್ರೆಯಲ್ಲಿ ಕಾಲಜ್ಞಾನವನ್ನು ಓದಲಾಗುತ್ತದೆ.

ಪುನೀತ್ ಸಾವಿನ ಬಗ್ಗೆಯೂ ಮುಂಚೆಯೇ ಭವಿಷ್ಯ ನುಡಿದಿತ್ತಾ ಬಬಲಾದಿ ಮಠ? ಓರ್ವ ಗಣ್ಯ ವ್ಯಕ್ತಿಯ ಏರಿಳಿತವಾಗುತ್ತದೆ ಎಂದು ಸ್ವಾಮೀಜಿ ಈ ಹಿಂದೆ ಭವಿಷ್ಯ ನುಡಿದಿದ್ದರು. ಅದರಂತೆ ನಟ ಪುನೀತ್ ರಾಜ್ ಕುಮಾರ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆಯೂ ಈಗ ಮಾತುಗಳು ಕೇಳಿಬರುತ್ತಿದೆ. ಇನ್ನು ಸಿಎಂ ಬದಲಾವಣೆ ಬಗ್ಗೆ, ರಾಜಕೀಯ ವ್ಯಕ್ತಿಯ ಏರಿಳಿತ ಎಂದು ಸ್ವಾಮೀಜಿ ಹೇಳಿದ್ದರು. ಅದರಂತೆ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿ, ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜಕೀಯ ಪಕ್ಷಗಳಲ್ಲಿ ದ್ವೇಷ ಅಸೂಯೆ ಹೆಚ್ಚಾಗುತ್ತದೆ ಎಂದು ಬಬಲಾದಿ ಕಾಲಜ್ಞಾನದಲ್ಲಿ ಉಲ್ಲೇಖವಾಗಿತ್ತು. ಆ ಪ್ರಕಾರ ರಾಜಕೀಯದಲ್ಲಿ ಒಂದೇ ಪಕ್ಷದ ನಾಯಕರಗಳ ನಡುವೆ ದ್ವೇಷ ಅಸೂಯೆ ಹೆಚ್ಚಾಗುತ್ತದೆ ಎಂದು ಸ್ವಾಮೀಜಿ ಸಿದ್ದರಾಮಯ್ಯ ಹೋಳಿಮಠ ನುಡಿದಿದ್ದರು. ಈ ಭವಿಷ್ಯ ಕೂಡ ನಿಜವಾಗಿದೆ. ಅಲ್ಲದೇ ಅಮೇರಿಕಾ, ಇರಾನ್-ಇರಾಕ್ ದೇಶಗಳಿಗೆ ಕೇಡು ಎಂದು ಬಬಲಾದಿ ಶ್ರೀಗಳು ಹೇಳಿದ್ದರು. ಈಗಾಗಲೇ ತಾಲಿಬಾನ್ ಅಘ್ಪಾನಿಸ್ತಾನ್​ ಮತ್ತು ಅಮೇರಿಕಾಕ್ಕೆ ಸಂಚಲನ ಉಂಟುಮಾಡಿದೆ.  ಬಬಲಾದಿಯ ಕಾಲಜ್ಞಾನ ಎಂದೂ ಸುಳ್ಳಾಗಲ್ಲಾ ಎಂದು ಭಕ್ತರು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲ ಎಂದು ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ

ಕಾನೂನುಬಾಹಿರವಾಗಿ ಸರ್ಕಾರದಿಂದ ಅನುದಾನ ಪಡೆದಿದ್ದಾರೆ; ಪ್ರಸನ್ನಾನಂದಪುರಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ

Published On - 10:45 am, Fri, 26 November 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ