AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜವಾಯ್ತು ಬಬಲಾದಿ ಸದಾಶಿವಮುತ್ಯಾರ ಮಠದ ಕಾಲಜ್ಞಾನ ಭವಿಷ್ಯ; 9 ತಿಂಗಳ ಹಿಂದಿನ ವಿಡಿಯೋ ಈಗ ವೈರಲ್​

500 ವರ್ಷಗಳ ಹಿಂದೆ ಚಿಕ್ಕಯ್ಯಪ್ಪ ಸ್ಚಾಮೀಜಿ ಬರೆದಿಟ್ಟಿರುವ ಕಾಲಜ್ಞಾನದ ಕುರಿತು 2021ರ ಶಿವರಾತ್ರಿಯಲ್ಲಿ ನಡೆದಿದ್ದ ಸದಾಶಿವ ಮುತ್ಯಾರ ಜಾತ್ರೆಯಲ್ಲಿ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಜಾತ್ರೆಯಲ್ಲಿ ಕಾಲಜ್ಞಾನವನ್ನು ಓದಲಾಗುತ್ತದೆ.

ನಿಜವಾಯ್ತು ಬಬಲಾದಿ ಸದಾಶಿವಮುತ್ಯಾರ ಮಠದ ಕಾಲಜ್ಞಾನ ಭವಿಷ್ಯ; 9 ತಿಂಗಳ ಹಿಂದಿನ ವಿಡಿಯೋ ಈಗ ವೈರಲ್​
ಬಬಲಾದಿ ಮಠದ ಪೀಠಾಧಿಪತಿ‌ ಸಿದ್ದರಾಮಯ್ಯ ಹೋಳಿಮಠ
TV9 Web
| Edited By: |

Updated on:Nov 29, 2021 | 4:49 PM

Share

ವಿಜಯಪುರ: ತಿರುಪತಿಯಲ್ಲಿ ಉಂಟಾದ ಜಲಪ್ರಳಯದ ಬಗ್ಗೆ 9 ತಿಂಗಳ ಮುಂಚೆಯೇ ಬಬಲಾದಿ ಸದಾಶಿವಮುತ್ಯಾರ ಮಠದ (Babaladi Sadashiv Mutya mutt) ಸ್ವಾಮೀಜಿ ಭವಿಷ್ಯ ನುಡಿದಿದ್ದರು. ಬಬಲಾದಿ ಮಠದ ಪೀಠಾಧಿಪತಿ‌ ಸಿದ್ದರಾಮಯ್ಯ ಹೋಳಿಮಠ ನುಡಿದ ಕಾಲಜ್ಞಾನ ಈಗ ನಿಜವಾಗಿದೆ. ಕಳೆದ ಶಿವರಾತ್ರಿ ಜಾತ್ರೆ ವೇಳೆ ಆಂಧ್ರ-ತೆಲಗು ರಾಜ್ಯಕ್ಕೆ ಕೇಡು ಎಂದು ಮೊದಲೇ ಸ್ವಾಮೀಜಿ ಕಾಲಜ್ಞಾನ ಭವಿಷ್ಯ ಹೇಳಿದ್ದರು. ಆಂಧ್ರ ಪ್ರದೇಶಕ್ಕೆ, ತೆಲಗು ಮಾತನಾಡುವ ರಾಜ್ಯಕ್ಕೆ ಜಲ‌ಕಂಟಕ ಇದೆ ಎಂದು ತಿಳಿಸಿದ್ದರು. ಸಾಮಾಜಿಕ ತಾಲ‌ತಾಣದಲ್ಲಿ ಸ್ವಾಮೀಜಿ ನುಡಿದಿರುವ ಕಾಲಜ್ಞಾನ ಈಗ ವೈರಲ್ ಆಗಿದೆ.

500 ವರ್ಷಗಳ ಹಿಂದೆ ಚಿಕ್ಕಯ್ಯಪ್ಪ ಸ್ಚಾಮೀಜಿ ಬರೆದಿಟ್ಟಿರುವ ಕಾಲಜ್ಞಾನದ ಕುರಿತು 2021ರ ಶಿವರಾತ್ರಿಯಲ್ಲಿ ನಡೆದಿದ್ದ ಸದಾಶಿವ ಮುತ್ಯಾರ ಜಾತ್ರೆಯಲ್ಲಿ ಸ್ವಾಮೀಜಿ ತಿಳಿಸಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಜಾತ್ರೆಯಲ್ಲಿ ಕಾಲಜ್ಞಾನವನ್ನು ಓದಲಾಗುತ್ತದೆ.

ಪುನೀತ್ ಸಾವಿನ ಬಗ್ಗೆಯೂ ಮುಂಚೆಯೇ ಭವಿಷ್ಯ ನುಡಿದಿತ್ತಾ ಬಬಲಾದಿ ಮಠ? ಓರ್ವ ಗಣ್ಯ ವ್ಯಕ್ತಿಯ ಏರಿಳಿತವಾಗುತ್ತದೆ ಎಂದು ಸ್ವಾಮೀಜಿ ಈ ಹಿಂದೆ ಭವಿಷ್ಯ ನುಡಿದಿದ್ದರು. ಅದರಂತೆ ನಟ ಪುನೀತ್ ರಾಜ್ ಕುಮಾರ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆಯೂ ಈಗ ಮಾತುಗಳು ಕೇಳಿಬರುತ್ತಿದೆ. ಇನ್ನು ಸಿಎಂ ಬದಲಾವಣೆ ಬಗ್ಗೆ, ರಾಜಕೀಯ ವ್ಯಕ್ತಿಯ ಏರಿಳಿತ ಎಂದು ಸ್ವಾಮೀಜಿ ಹೇಳಿದ್ದರು. ಅದರಂತೆ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಿ, ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜಕೀಯ ಪಕ್ಷಗಳಲ್ಲಿ ದ್ವೇಷ ಅಸೂಯೆ ಹೆಚ್ಚಾಗುತ್ತದೆ ಎಂದು ಬಬಲಾದಿ ಕಾಲಜ್ಞಾನದಲ್ಲಿ ಉಲ್ಲೇಖವಾಗಿತ್ತು. ಆ ಪ್ರಕಾರ ರಾಜಕೀಯದಲ್ಲಿ ಒಂದೇ ಪಕ್ಷದ ನಾಯಕರಗಳ ನಡುವೆ ದ್ವೇಷ ಅಸೂಯೆ ಹೆಚ್ಚಾಗುತ್ತದೆ ಎಂದು ಸ್ವಾಮೀಜಿ ಸಿದ್ದರಾಮಯ್ಯ ಹೋಳಿಮಠ ನುಡಿದಿದ್ದರು. ಈ ಭವಿಷ್ಯ ಕೂಡ ನಿಜವಾಗಿದೆ. ಅಲ್ಲದೇ ಅಮೇರಿಕಾ, ಇರಾನ್-ಇರಾಕ್ ದೇಶಗಳಿಗೆ ಕೇಡು ಎಂದು ಬಬಲಾದಿ ಶ್ರೀಗಳು ಹೇಳಿದ್ದರು. ಈಗಾಗಲೇ ತಾಲಿಬಾನ್ ಅಘ್ಪಾನಿಸ್ತಾನ್​ ಮತ್ತು ಅಮೇರಿಕಾಕ್ಕೆ ಸಂಚಲನ ಉಂಟುಮಾಡಿದೆ.  ಬಬಲಾದಿಯ ಕಾಲಜ್ಞಾನ ಎಂದೂ ಸುಳ್ಳಾಗಲ್ಲಾ ಎಂದು ಭಕ್ತರು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ತಿಕ ಮುಗಿಯುವವರೆಗೂ ಮಳೆ ನಿಲ್ಲೋದಿಲ್ಲ ಎಂದು ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ

ಕಾನೂನುಬಾಹಿರವಾಗಿ ಸರ್ಕಾರದಿಂದ ಅನುದಾನ ಪಡೆದಿದ್ದಾರೆ; ಪ್ರಸನ್ನಾನಂದಪುರಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ

Published On - 10:45 am, Fri, 26 November 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್