AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಎತ್ತು 18 ಲಕ್ಷ 1 ಸಾವಿರಕ್ಕೆ ಮಾರಾಟ, ದಾಖಲೆ ಮೊತ್ತಕ್ಕೆ ಮಾರಾಟವಾದ ಬಬಲಾದಿ ರಾಸು: ವಿಶೇಷತೆ ಏನು?

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಗ್ರಾಮದ ರಾಮನಗೌಡ ಪಾಟೀಲ್ ಎಂಬುವರಿಗೆ ಸೇರಿದ ಎತ್ತು ಬರೊಬ್ಬರಿ 18 ಲಕ್ಷ 1 ಸಾವಿರಕ್ಕೆ ಮಾರಾಟವಾಗುವ ಮೂಲಕ ದಾಖಲೆ ನಿರ್ಮಿಸಿದೆ. ಈ ಎತ್ತು ತೆರಬಂಡಿ ಓಟ ಸ್ಪರ್ಧೆಯಲ್ಲಿ ಸಾಕಷ್ಟು ಹೆಸರು ಮಾಡಿತ್ತು.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 02, 2024 | 1:21 PM

Share

ವಿಜಯಪುರ, ಜುಲೈ 02: ರೈತ ದೇಶಕ್ಕೆ ಬೆನ್ನೆಲುಬು, ರೈತನಿಗೆ ಎತ್ತು (Bull) ಬೆನ್ನೆಲುಬು. ರೈತನ ಕೃಷಿ ಕಾರ್ಯದಲ್ಲಿ ಎತ್ತು ಸಾತ್​ ನೀಡುತ್ತದೆ. ರೈತನಿಗೆ ಎತ್ತು ಜೀವನಾಡಿ ಇದ್ದ ಹಾಗೆ. ರೈತ ಎತ್ತುಗಳನ್ನು ಮನೆ ಮಗನಂತೆ ಸಾಕುತ್ತಾನೆ. ಉತ್ತರ ಕರ್ನಾಟಕ ಭಾಗದಲ್ಲಿ ಕಾರ ಹುಣ್ಣಿಮೆ ಸಮಯದಲ್ಲಿ ಎತ್ತುಗಳ ಓಟ ಸ್ಪರ್ಧೆ ನಡೆಯುತ್ತದೆ. ಮತ್ತು ಬೇಸಿಗೆ ಕಾಲದಲ್ಲೂ ಎತ್ತುಗಳ ಓಟ ಸ್ಪರ್ಧೆ ಆಯೋಜಿಸಲಾಗಿರುತ್ತದೆ. ತೆರಬಂಡಿ ಓಟ ಸ್ಪರ್ಧೆ ಮೂಲಕ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಸಾಕಷ್ಟು ಪ್ರಖ್ಯಾತಿ ಗಳಿಸಿದ್ದ ಎತ್ತು ಇದೀಗ ಬರೊಬ್ಬರಿ ಎತ್ತು (Ox) 18 ಲಕ್ಷಕ್ಕೆ ಮಾರಾಟವಾಗುವ ಮೂಲಕ ದಾಖಲೆ ನಿರ್ಮಿಸಿದೆ.

ವಿಜಯಪುರ (Vijayapur) ಜಿಲ್ಲೆಯ ಬಬಲೇಶ್ವರ (Babaleshwar) ತಾಲೂಕಿನ ಬಬಲಾದಿ ಗ್ರಾಮದ ರಾಮನಗೌಡ ಪಾಟೀಲ್ ಎಂಬುವರಿಗೆ ಸೇರಿದ ಎತ್ತು, ತೆರಬಂಡಿ ಎಳೆಯುವುದರಲ್ಲಿ ನಿಸ್ಸೀಮ. ಉತ್ತರ ಕರ್ನಾಟಕ ಭಾಗದ ಯಾವುದೇ ಜಿಲ್ಲೆಯಲ್ಲಿ ತೆರಬಂಡಿ ಸ್ಪರ್ಧೆ ನಡೆದರೂ, ಈ ಎತ್ತು ಭಾಗವಹಿಸಿ ಬಹುಮಾನಗಳನ್ನು ಗೆಲ್ಲುತ್ತಿತ್ತು. ಎತ್ತು ಇಲ್ಲಿಯವರೆಗೆ 15 ಲಕ್ಷ ರೂ. ಹಣ, 40 ಗ್ರಾಂ ಚಿನ್ನ, ಎರಡು ಬೆಳ್ಳಿ ಗದೆ, 4 ಬೈಕ್ ಗೆದ್ದಿದೆ.

ಮಾಲೀಕ ರಾಮನಗೌಡ ಪಾಟೀಲ್ ಎತ್ತಿಗೆ ಹಿಂದೂಸ್ಥಾನ ಹೆಚ್​ಪಿ ಎಂದು ನಾಮಕರಣ ಮಾಡಿದ್ದಾರೆ. ಐದು‌ವರೆ ಅಡಿ ಎತ್ತರವಿರುವ ಎತ್ತಿಗೆ ಮಾಲಿಕ ನಿತ್ಯ ಪೌಷ್ಟಿಕಾಂಶ ಆಹಾರ ನೀಡುತ್ತಿದ್ದನು. ಹಾಲು, ಮೊಟ್ಟೆ ದವಸ ಧಾನ್ಯ ಆಹಾರವಾಗಿ ನೀಡುತ್ತಿದ್ದನು.

ಇದನ್ನೂ ಓದಿ: ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟದ ವಿಡಿಯೋ ನೋಡಿ

ಬಬಲಾದಿಯಲ್ಲಿ ನಡೆದ ತೆರಬಂಡಿ ಎತ್ತಿನ ಸ್ಪರ್ಧೆಗೆ ಬಂದಿದ್ದ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಿಟ್ನಾಳ ಗ್ರಾಮದ ರೈತ ಸದಾಶಿವ ಡಾಂಗೆ, ಈ ಎತ್ತನ್ನು ಕಂಡು ಮಾರು ಹೋಗಿದ್ದಾರೆ. ರೈತ ಸದಾಶಿವ ಡಾಂಗೆ ಈ ಎತ್ತನ್ನು ಕೊಂಡುಕೊಳ್ಳಲೇಬೇಕು ಎಂದು ನಿರ್ಧರಿಸಿದ್ದಾರೆ. ನಂತರ, ಎತ್ತಿನ ಮಾಲಿಕ ರಾಮನಗೌಡ ಪಾಟೀಲ್ ಅವರ ಬಳಿ ಹೋಗಿ ಎತನ್ನು ನಾನು ಕೊಂಡುಕೊಳ್ಳುವೆ ಎಂದಿದ್ದಾರೆ. ಅದಕ್ಕೆ ರಾಮನಗೌಡ ಪಾಟೀಲ್​ ನಾನು ಎತ್ತನ್ನು ಮಾರುವುದಿಲ್ಲ ಎಂದಿದ್ದಾರೆ. ಆದರೂ ಕೂಡ ಸದಾಶಿವ ಡಾಂಗೆ ನೀವು ಮಾರಲೇಬೇಕು ನಾನು ಕೊಂಡೇ ತೀರುವೆ ಎಂದು ಹಟ ಹಿಡಿದಿದ್ದಾರೆ.

ಆಗ, ರಾಮನಗೌಡ ಪಾಟೀಲ್​ “ಎತ್ತಿನ ಬೆಲೆಯನ್ನು ಹೆಚ್ಚಿಗೆ ಹೇಳಿದರೆ ಈತ ಕೊಂಡುಕೊಳ್ಳುವುದರಿಂದ ಹಿಂದೆ ಸರೆಯುತ್ತಾನೆ” ಎಂದು 18 ಲಕ್ಷದ 1 ಸಾವಿರ ಎಂದು ಬೆಲೆ ಹೇಳಿದ್ದಾರೆ. ಅದಕ್ಕೆ ಸದಾಶಿವ ಡಾಂಗೆ ಸರಿ ಅಂತ 18 ಲಕ್ಷದ 1 ಸಾವಿರ ಸ್ಥಳದಲ್ಲೇ ಎಣಿಸಿ ರಾಮನಗೌಡ ಪಾಟೀಲ್​ ಅವರ ಕೈಗೆ ನೀಡಿದ್ದಾರೆ. ರಾಮನಗೌಡ ಪಾಟೀಲ್​ ವಿಧಿ ಇಲ್ಲದೆ ಎತ್ತನ್ನು ಮಾರಿದ್ದಾರೆ. ಈ ಎತ್ತು ಹೊರತಾಗಿ ರಾಮನಗೌಡ ಪಾಟೀಲ್​ ಅವರ ಬಳಿ ಇನ್ನೂ 4-5 ಎತ್ತುಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​