ವಿಜಯಪುರ: ಗೂಡ್ಸ್​​ ವಾಹನ, ಕ್ರೂಸರ್​​ ಮಧ್ಯೆ ಡಿಕ್ಕಿ; ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಸಂಚಾರಿ ಪೊಲೀಸರು ಅಪಘಾತ ನಿಯಂತ್ರಣಕ್ಕೆ ಎಷ್ಟೇ ಕ್ರಮಕೈಗೊಂಡರು ಚಾಲಕನ ಅಜಾಗರೂಕತೆಯಿಂದ ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ. ಅದರಂತೆ ವಿಜಯಪುರ ಜಿಲ್ಲೆಯ ಬಬಲೇಶ್ವರ (Babaleshwar) ತಾಲೂಕಿನ ಮಧಬಾವಿ ಕ್ರಾಸ್​​ ಬಳಿ ಇಂದು ಗೂಡ್ಸ್​​ ವಾಹನ ಮತ್ತು ಕ್ರೂಸರ್​​ ಮಧ್ಯೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ವಿಜಯಪುರ: ಗೂಡ್ಸ್​​ ವಾಹನ, ಕ್ರೂಸರ್​​ ಮಧ್ಯೆ ಡಿಕ್ಕಿ; ಓರ್ವ ಮಹಿಳೆ ಸ್ಥಳದಲ್ಲೇ ಸಾವು
ಬಬಲೇಶ್ವರ ಗೂಡ್ಸ್​​ ವಾಹನ, ಕ್ರೂಸರ್​​ ಮಧ್ಯೆ ಡಿಕ್ಕಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 08, 2024 | 7:09 PM

ವಿಜಯಪುರ, ಫೆ.08: ಗೂಡ್ಸ್​​ ವಾಹನ ಮತ್ತು ಕ್ರೂಸರ್​​ ಮಧ್ಯೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ (Babaleshwar) ತಾಲೂಕಿನ ಮಧಬಾವಿ ಕ್ರಾಸ್​​ ಬಳಿ ನಡೆದಿದೆ. ಮಂಗಳೂರು ಗ್ರಾಮದ ಸುನಂದಾ ಹಾದಿಮನಿ (40) ಮೃತ ರ್ದುದೈವಿ. ಇನ್ನುಳಿದಂತೆ ಇತರರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಡ್ರೈವಿಂಗ್ ಕಲಿಸಲು ಹೋಗಿ ಅಪಘಾತ; ಅದೃಷ್ಟವಶಾತ್ ಬಚಾವ್​​

ಬೆಂಗಳೂರು: ಕಾರು ಡ್ರೈವಿಂಗ್ ಕಲಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಗುದ್ದಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಲ್​ಇ ಕಾನೂನು ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ವೇಳೆ ಬೇಕರಿ ಬಳಿ ನಿಂತಿದ್ದ 8 ಬೈಕ್​ಗಳು ಜಖಂ ಆಗಿವೆ. ಈ ಕುರಿತು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ರೈಲು ಅಪಘಾತದಲ್ಲಿ ತಾಯಿ ಜೊತೆಗೆ ಕಾಲು ಕಳ್ಕೊಂಡ ಕರುವಿಗೆ ಕೃತಕ ಕಾಲು ಜೋಡಣೆ

ರೈತನ ಬೆಳೆಗೆ ಕಿಡಿಗೇಡಿಗಳಿಂದ ಬೆಂಕಿ

ಧಾರವಾಡ: ನಗರದ ಚರಂತಿಮಠ ಗಾರ್ಡನ್​​​ ಹತ್ತಿರದ ರೈತನ ಸೊಯಾಬಿನ್​​ ಬಣವೆಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಗಂಗನಗೌಡ ಪಾಟೀಲ್​​ ಎಂಬುವರಿಗೆ ಸೇರಿದ ಬಣವೆ ಇದಾಗಿದ್ದು, ಕಿಡಿಗೇಡಿಗಳ ಕೃತ್ಯದಿಂದ 2 ಲಕ್ಷಕ್ಕೂ ಅಧಿಕ ಹಣ ನಷ್ಟವಾಗಿದೆ. ಮೊದಲೇ ಬರಗಾಲದಿಂದ ಬೇಸತ್ತಿದ್ದ ರೈತ, ಇದೀಗ ಕಿಡಿಗೇಡಿಗಳು ಮಾಡಿದ ತಪ್ಪಿನಿಂದ ಕಂಗಾಲಾಗಿದ್ದಾನೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಶಹರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Thu, 8 February 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us