AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವರು ಬ್ಲಾಕ್​ಮೇಲ್ ಮಾಡಿ, 50- 100 ಕೋಟಿ ಕೊಟ್ಟು ಸಚಿವರಾಗಿದ್ದಾರೆ; ನಿರಾಣಿ ವಿರುದ್ಧ ಯತ್ನಾಳ್ ಹೊಸ ಬಾಂಬ್

ಸಚಿವ ಸ್ಥಾನಕ್ಕೆ ನಾನು 50 ಕೋಟಿ , 100 ಕೋಟಿ ಎಲ್ಲಿಂದ ತಂದು ಕೊಡಲಿ? ಅದಕ್ಕಾಗಿ ಎಷ್ಟು ಲೂಟಿ ಮಾಡಬೇಕಾಗುತ್ತದೆ? ನಮ್ಮ ಪಕ್ಷದಲ್ಲಿ ಒಬ್ಬ ಇದ್ದಾನೆ, ಅವನು ಸಿಡಿ ಇಟ್ಟುಕೊಂಡು ಬ್ಲಾಕ್​​ಮೇಲ್ ಮಾಡಿ ಮಂತ್ರಿಯಾಗಿದ್ದಾನೆ ಎಂದ ಯತ್ನಾಳ್​ ಹೇಳಿಕೆ ನೀಡಿದ್ದಾರೆ.

ಕೆಲವರು ಬ್ಲಾಕ್​ಮೇಲ್ ಮಾಡಿ, 50- 100 ಕೋಟಿ ಕೊಟ್ಟು ಸಚಿವರಾಗಿದ್ದಾರೆ; ನಿರಾಣಿ ವಿರುದ್ಧ ಯತ್ನಾಳ್ ಹೊಸ ಬಾಂಬ್
ಬಸನಗೌಡ ಪಾಟೀಲ್ ಯತ್ನಾಳ್ (ಸಂಗ್ರಹ ಚಿತ್ರ)
TV9 Web
| Edited By: |

Updated on: May 08, 2022 | 6:29 PM

Share

ವಿಜಯಪುರ: ವಿವಾದಾತ್ಮಕ ಹೇಳಿಕೆಗಳಿಂದ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಇದೀಗ ಇನ್ನೊಂದು ಬಾಂಬ್ ಹಾಕಿದ್ದಾರೆ. ಸಿಎಂ ಪೋಸ್ಟ್​ಗೆ 2,500 ಕೋಟಿ ರೂ. ಬೇಡಿಕೆ ಇಟ್ಟಿದ್ದರು ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರ ಈಗಾಗಲೇ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಯತ್ನಾಳ್ ಅವರ ಹೇಳಿಕೆಯಿಂದ ಬಿಜೆಪಿ (BJP) ನಾಯಕರು ತಲೆತಗ್ಗಿಸುವಂತಾಗಿತ್ತು. ಅದರ ಬೆನ್ನಲ್ಲೇ ವಿಜಯಪುರದಲ್ಲಿ ಇಂದು ಮತ್ತೊಂದು ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಕೆಲವರು 50 ಕೋಟಿ – 100 ಕೋಟಿ ರೂ. ಕೊಟ್ಟು ಮಂತ್ರಿ ಆಗಿದ್ದಾರೆ. ನಮ್ಮ ಪಕ್ಷದಲ್ಲಿ ಒಬ್ಬ ಇದ್ದಾನೆ, ಅವನು ಅರ್ಹತೆ ಮೇಲೆ ಸಚಿವನಾಗಿಲ್ಲ. ಸಿಡಿ ಇಟ್ಟುಕೊಂಡು ಮಂತ್ರಿಯಾಗಿದ್ದಾನೆ ಎಂದ ಯತ್ನಾಳ್​ ಹೇಳಿಕೆ ನೀಡಿದ್ದಾರೆ.

ವಿಜಯಪುರ ತಾಲೂಕಿನ ಹಿಟ್ಟನಳ್ಳಿಯಲ್ಲಿ ಮುರುಗೇಶ್ ನಿರಾಣಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ ಬಸನಗೌಡ ಪಾಟೀಲ್ ಯತ್ನಾಳ್, ಅವರು ಸಚಿವ ಸ್ಥಾನಕ್ಕೋಸ್ಕರ ಬ್ಲ್ಯಾಕ್​ಮೇಲ್ ಮಾಡೋದು, ನಾವು ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ಕೇಳೋದು. ಸಮಾಜಕ್ಕೆ ಮೀಸಲಾತಿ ಕೇಳುವುದು ಬ್ಲ್ಯಾಕ್​ಮೇಲ್ ಅಲ್ಲ . ಆದರೆ, ಸಿಡಿ ಇಟ್ಟುಕೊಂಡು ಮಂತ್ರಿಗಿರಿ ಕೇಳುವುದು ಬ್ಲ್ಯಾಕ್​ಮೇಲ್ ಎಂದು ಪರೋಕ್ಷವಾಗಿ ಸಚಿವ ನಿರಾಣಿ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಿಡಿ ಇಟ್ಟುಕೊಂಡು, ಯಾರ್ಯಾರದೋ ವೀಕ್​ನೆಸ್ ಇಟ್ಟುಕೊಂಡು ಮಂತ್ರಿ ಪದವಿ ಪಡೆಯುವವನು ನಾನಲ್ಲ. ನಾನು ಯಾರಿಗೂ ರೊಕ್ಕ ಕೊಡುವ ಮಗನಲ್ಲ. ಸಚಿವ ಸ್ಥಾನಕ್ಕೆ ನಾನು 50 ಕೋಟಿ , 100 ಕೋಟಿ ಎಲ್ಲಿಂದ ತಂದು ಕೊಡಲಿ? ಅದಕ್ಕಾಗಿ ಎಷ್ಟು ಲೂಟಿ ಮಾಡಬೇಕಾಗುತ್ತದೆ? 50 ಕೋಟಿ ರೂಪಾಯಿ ಸಿದ್ದಸಿರಿ ಬ್ಯಾಂಕ್ ನಲ್ಲಿ ಡಿಪಾಸಿಟ್ ಇಟ್ಟರೆ ಎಷ್ಟು ಬಡ್ಡಿ ಬರುತ್ತದೆ ಅಂತ ಗೊತ್ತಿದೆಯೇನು? ಶೇ.1ರಷ್ಟು ಬಡ್ಡಿ ಬಂದರೂ ತಿಂಗಳಿಗೆ 50 ಲಕ್ಷ ಆಗುತ್ತದೆ. ಇದಕ್ಕೆಲ್ಲಾ ಸುಮ್ಮನೆ ನಿಮಗೆ ನಮಸ್ಕಾರ ಮಾಡ್ಕೋತಾ ಯಾರು ಕೂತ್ಕೊಳ್ತಾರೆ? ಆ ಬಡ್ಡಿಯಲ್ಲಿ ಬರುವ 50 ಲಕ್ಷದಿಂದ ಆರಾಮಾಗಿ ತಿಂದುಂಡು, ಐಷಾರಾಮಿ ಜೀವನವನ್ನೇ ಮಾಡಬಹುದು ಎಂದು ಯತ್ನಾಳ್ ಹೊಸ ಬಾಂಬ್ ಹಾಕಿದ್ದಾರೆ.

ತಮ್ಮದೇ ಪಕ್ಷದ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಿಡಿ ಕಾರಿದ್ದ ವಸತಿ ಸಚಿವ ವಿ.ಸೋಮಣ್ಣ, ಶಾಸಕ ಯತ್ನಾಳ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ತರುತ್ತಿದೆ. ಯತ್ನಾಳ್ ಅನುಭವಿಗಳು ಇಂಥ ಹೇಳಿಕೆಗಳನ್ನು ನೀಡಬಾರದು. ಯತ್ನಾಳ್ ಯಾಕೆ ಇಂಥ ಹೇಳಿಕೆ ನೀಡುತ್ತಿದ್ದಾರೋ ಗೊತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದರು.

ಸಿಎಂ ಪೋಸ್ಟ್​ಗೆ 2,500 ಕೋಟಿ ರೂ. ಬೇಡಿಕೆ ಇಟ್ಟಿದ್ದರು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಯಾರು ಹಣ ಕೇಳಿದ್ದಾರೆ ಎಂಬುದನ್ನು ಯತ್ನಾಳ್ ಹೇಳಬೇಕು. ಸಿಎಂ ಕುರ್ಚಿ 2,500 ಕೋಟಿಗೆ ಹರಾಜಿಗಿದೆ ಎಂದು ಹೇಳಿದ್ದಾರೆ. ಯಾರು ಹಣ ಕೇಳಿದ್ದಾರೆ ಎಂಬುದನ್ನು ಯತ್ನಾಳ್ ಹೇಳಬೇಕು. ಈ ಬಗ್ಗೆ ಯತ್ನಾಳ್ ಅವರೇ ಎಸಿಬಿಗೆ ದೂರು ನೀಡಲಿ ಎಂದು ವಿಜಯಪುರದಲ್ಲಿ ಕಾಂಗ್ರೆಸ್ MLC ಪ್ರಕಾಶ್ ರಾಥೋಡ್ ಹೇಳಿದ್ದಾರೆ. ಹಣ ಕೇಳಿದವರು ಯಾರು ಎಂಬುದನ್ನು ಬಹಿರಂಗಪಡಿಸಬೇಕು. ಇಲ್ಲವಾದರೆ ಯತ್ನಾಳ್​ರನ್ನು ವಿಚಾರಣೆ ನಡೆಸಿ. ರಾಜ್ಯದಲ್ಲಿನ ಭ್ರಷ್ಟಾಚಾರ ವಿಚಾರದಲ್ಲಿ ಪ್ರಧಾನಿ ಮೌನವಾಗಿದ್ದಾರೆ. ಭ್ರಷ್ಟಾಚಾರಕ್ಕೆ ಬಿಜೆಪಿ ಹೈಕಮಾಂಡ್ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದರು. ಅದರ ಬೆನ್ನಲ್ಲೇ ಇದೀಗ ಸಚಿವ ಸ್ಥಾನಕ್ಕೆ 100 ಕೋಟಿ ಕೇಳಿರುವ ಬಗ್ಗೆಯೂ ಯತ್ನಾಳ್ ಹೇಳಿಕೆ ನೀಡಿರುವುದು ಬಿಜೆಪಿ ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ