ಹಿಂದೂಗಳ ರಕ್ತಪಾತಕ್ಕೆ ಪಂಡಿತ ಜವಾಹರಲಾಲ್ ನೆಹರು ಕಾರಣ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ

ಹಿಂದೂಗಳ ರಕ್ತಪಾತಕ್ಕೆ ಪಂಡಿತ ಜವಾಹರಲಾಲ್ ನೆಹರು ಕಾರಣ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ.

ಹಿಂದೂಗಳ ರಕ್ತಪಾತಕ್ಕೆ ಪಂಡಿತ ಜವಾಹರಲಾಲ್ ನೆಹರು ಕಾರಣ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ
Follow us
| Updated By: ವಿವೇಕ ಬಿರಾದಾರ

Updated on:Aug 15, 2022 | 8:55 PM

ವಿಜಯಪುರ: ಹಿಂದೂಗಳ (Hindu) ರಕ್ತಪಾತಕ್ಕೆ ಪಂಡಿತ ಜವಾಹರಲಾಲ್ ನೆಹರು (Jawaharlal Nehru)  ಕಾರಣ ಎಂದು ವಿಜಯಪುರ (Vijaypur) ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ (Basanagouda Patil Yatnal) ಹೇಳಿದ್ದಾರೆ. ನಗರದ ಸಿದ್ದೇಶ್ವರ ದೇವಸ್ಥಾನ ಬಳಿ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆಯ ಕಾರ್ಯಕ್ರಮದಲ್ಲಿ ಭಾಗಿಯಾದ‌ ಬಳಿಕ ಮಾತನಾಡಿದ ಅವರು ಸರ್ಕಾರಿ ಜಾಹೀರಾತಿನಲ್ಲಿ ನೆಹರು ಪೊಟೋ ಬಿಟ್ಟ ವಿಚಾರಚವಾಗಿ ಮಾತನಾಡಿದ ಅವರು ಪೊಟೋ ಬಿಟ್ಟಿದ್ದು ತಪ್ಪೇನಲ್ಲ, ನೆಹರು ಕೊಡುಗೆ ದೇಶಕ್ಕೇನಿದೆ ? ದೇಶದ ಮೊದಲ ಪ್ರಧಾನಿ ನೆಹರು ಇರಬಹುದು, ಆದರೆ ನಮ್ಮ ಲೆಕ್ಕದಲ್ಲಿ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷಚಂದ್ರ ಭೋಸ್ ಎಂದು ಹೇಳಿದರು.

ದೇಶದ ಈ‌ ಪರಿಸ್ಥಿತಿಗೆ ನೆಹರು ಕಾರಣ. ನೆಹರು ಕಾಶ್ಮೀರಕ್ಕೆ 370 ವಿಶೇಷ ಆರ್ಟಿಕಲ್ ಕೊಟ್ಟರು. ಭಾರತ ಪಾಕಿಸ್ತಾನ ದೇಶ ಒಡೆದದ್ದೇ ನೆಹರು ಸಲುವಾಗಿ. ನೆಹರುನ ಪ್ರಧಾನಿ ಮಾಡಲು ದೇಶ ಒಡೆಯಲಾಗಿದೆ. ದೇಶ ಇಬ್ಬಾಗವಾಗಲು ಪಂಡಿತ ಜವಾಹರಲಾಲ್ ನೆಹರು ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.

ಸರ್ದಾರ್ ವಲ್ಲಭಾಯಿ ಪಟೇಲ್ ಅಥವಾ ನೇತಾಜಿ ಸುಭಾಷ ಚಂದ್ರಭೋಸ ಪ್ರಧಾನಿಯಾಗಿದ್ದರೆ ದೇಶ ಇಬ್ಬಾಗ ಆಗುತ್ತಿರಲಿಲ್ಲ. ಗಾಂಧಿ ಅವರು ನೆಹರು ಪ್ರಧಾನಿಯಾಗಲಿ ಎಂದು ಹಠ ಹಿಡಿದರು, ಅದಕ್ಕಾಗಿ ದೇಶ ಇಬ್ಬಾಗ ಮಾಡಿ ಕೊಟ್ಟರು. ಪಾಕಿಸ್ತಾನಕ್ಕೆ ಅನುಕೂಲವಾಗಲು ಕಾಶ್ಮೀರಕ್ಕೆ 370 ಕೊಟ್ಟರು. ಒಂದು ವೇಳೆ ವಲ್ಲಭಭಾಯಿ ಪಟೇಲ್ ಇರದಿದ್ದರೆ ಹೈದ್ರಬಾದ್ ನಮ್ಮ ಭಾಗದಲ್ಲಿ ಇರತಿರಲಿಲ್ಲ ಎಂದು ತಿಳಿಸಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪಾಕಿಸ್ತಾನ ಇಬ್ಬಾಗಕ್ಕೆ ವಿರೋಧಿಸಿದ್ದರು ಭಾರತ ಒಡೆಯಬೇಡಿ ಎಂದು ಅಂಬೇಡ್ಕರ್ ಹೇಳಿದ್ದರು. ಒಂದು ವೇಳೆ ಅನಿವಾರ್ಯ ಬಂದರೆ ರಾಷ್ಟ್ರಾಂತರ ಮಾಡಿ ಎಂದಿದ್ದರು. ಪಾಕಿಸ್ತಾನದಲ್ಲಿನ ಹಿಂದುಗಳನ್ನು ಭಾರತಕ್ಕೆ ತನ್ನಿ, ಇಲ್ಲಿರುವ ಮುಸ್ಲಿಂ ಅವರನ್ನು ಪಾಕಿಸ್ತಾನ ಕಳುಹಿಸಿ ಎಂದಿದ್ದರು‌ ಅಂಬೇಡ್ಕರ್ ಎಂದು ತಿಳಿಸಿದರು.

ಇಸ್ಲಾಂ ಧರ್ಮದಲ್ಲಿ ಮತ್ತೊಂದು ಧರ್ಮದವರನ್ನು ಸಹೋದರರಂತೆ ನೋಡುವ ಸಂಸ್ಕೃತಿ ಇಲ್ಲ. ಪಾಕಿಸ್ತಾನದ ದಲಿತರಿಗೆ ಅಂಬೇಡ್ಕರ್ ಕರೆ ಕೊಟ್ಟರು. ನೀವೆಲ್ಲ ಭಾರತಕ್ಕೆ ಬನ್ನಿ ಅಲ್ಲಿ ನೀವು ಸುರಕ್ಷಿತರಿಲ್ಲ ಎಂದು ಹೇಳಿದ್ದರು. ಕೇವಲ ಪಂಡಿತ ಜವಾಹರಲಾಲ್ ನೆಹರು ಕಾರಣದಿಂದ ಭಾರತ ಇಭ್ಬಾಗವಾಯಿತು. ಇವರ ಕಾರಣದಿಂದಲೇ ಕೋಟ್ಯಾಂತರ ಹಿಂದುಗಳ ರಕ್ತಪಾತವಾಯಿತು ಎಂದು ವಾಗ್ದಾಳಿ ಮಾಡಿದರು.

ಹೀಗಾಗಿ ನೆಹರು ಅವರನ್ನು ಜಾಹಿರಾತಿನಿಂದ ಬಿಟ್ಟಿದ್ದು ಯಾವುದೇ ಬೇಸರವಿಲ್ಲ. ನಮ್ಮ ಆದರ್ಶ ಏನಿದ್ದರು ವಲ್ಲಭಾಯಿ ಪಟೇಲ್, ಲಾಲ್ ಬಹದ್ದೂರ್ ಶಾಸ್ತ್ರಿ, ಸುಭಾಷ ಚಂದ್ರ ಭೋಸ, ವಾಜಪೇಯಿ, ಮೋದಿ ಎಂದು ಮಾತನಾಡಿದರು.

ಲಾಲ್ ಸಿಂಗ್ ಚಡ್ಡಾ ಚಿತ್ರ ವಿವಾದ ವಿಚಾರ ಕುರಿತು ಮಾತನಾಡಿದ ಅವರು ನಟ ಅಮೀರ ಖಾನ್ ನಾಗರ ಹಾವಿಗೆ ಹಾಲು ಹಾಕುವದು ಅವಮಾನ ಎನ್ನುತ್ತಾನೆ. ಹಾಗಾದರೆ ಬಕ್ರೀದ ವೇಳೆ ಕುರಿ ಕೊಯ್ಯೋದು ಅದನ್ನೇಕೆ ಮೂಡ ನಂಬಿಕೆ ಅನ್ನಲ್ಲ ? ಹಿಂದುಗಳ ದೇವತೆಗಳನ್ನು ಅಸಹ್ಯಕರವಾಗಿ ಚಿತ್ರಿಸುತ್ತಾನೆ. ಹಿಂದು ಧರ್ಮದ ವಿರುದ್ದ ಅವನ ಚಿತ್ರಗಳು ಬರುತ್ತವೆ. ಶಾರುಕ ಖಾನ್, ಸಲ್ಮಾನ ಖಾನ್, ಸೈಫಲಿ ಖಾನ್, ಅಮೀರ್ ಖಾನ್ ಪಾಕಿಸ್ತಾನದ ಎಜೆಂಟರಾಗಿ ಕೆಲಸ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೇಶದ ಅನ್ನ ತಿಂದು, ಈ ದೇಶದ ಅಭಿಮಾನಿಗಳು ಚಿತ್ರ ನೋಡಿ ಹಣ ಕೊಟ್ಟಿರುತ್ತಾರೆ. ಹಿಂದುತ್ವಕ್ಕೆ ಅಪಮಾನ ಮಾಡಿದ್ದಾರೆ ಅದಕ್ಕೆ ತಕ್ಕ ಶಾಸ್ತಿ ಆಗಬೇಕು. ಅಮೀರ್ ಖಾನ್ ಚಡ್ಡಿ ತೊಯ್ಯೂವಂತೆ ದೇಶದ ಹಿಂದುಗಳು ಮಾಡಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಹುಟ್ಟಿರೋದೆ ಹಿಂದೂರಾಷ್ಟ್ರ ಮಾಡಲಿಕ್ಕೆ ಮತ್ತು ಅಖಂಡ ಭಾರತ ಮಾಡಲಿಕ್ಕೆ. ಹಿಂದೂಗಳು ಹೆಚ್ಚಿರೋದು ಹಿಂದು ರಾಷ್ಟ್ರ. ಮುಸ್ಲಿಂಮರು ಹೆಚ್ಚಿರೋದು ಪಾಕಿಸ್ತಾನ. ಮಹಾತ್ಮ ಗಾಂಧಿ ಇದೇ ರೀತಿ ದೇಶ ಒಡೆದುಕೊಟ್ಟಿದ್ದಾರೆ. ಪಾಕಿಸ್ತಾನ ಯಾಕೆ ಒಡೆದುಕೊಟ್ಟರು ಗೊತ್ತಿಲ್ಲ. ಆ ಪುಣ್ಯಾತ್ಮ (ಗಾಂಧಿಜಿ) ಮಾಡಿದ ತಪ್ಪಿನಿಂದ ಕೋಟ್ಯಾಂತರ ಹಿಂದೂಗಳು ಸತ್ತರು ಎಂದರು.

ಪಾಕಿಸ್ತಾನಕ್ಕೆ 50 ಕೋಟಿ ನೀಡುವಂತೆ ಗಾಂಧಿಜೀ ಉಪವಾಸ ಕುಳಿತರು. ಇವರು ದೊಡ್ಡವರಾಗೋಕೆ ಕೋಟ್ಯಾಂತರ ಹಿಂದೂಗಳ ರಕ್ತಪಾತವಾಯಿತು. ಮುಂದೇ ಪಾಕ್ ಆಕ್ರಮಿತ ಕಾಶ್ಮೀರ ಶೀಘ್ರವೇ ಭಾರತದ ವಶವಾಗಲಿದೆ. ಪ್ರಧಾನಿ ಮೋದಿ ಅಂತಹ ನಾಯಕರ ಇರುವಾಗ ಇದು ಸಾಧ್ಯವಿದೆ ಎಂದು ಮಾತನಾಡಿದರು.

Published On - 3:03 pm, Mon, 15 August 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು