ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಯತ್ನಾಳ್ ಒತ್ತಾಯ

ಇತ್ತೀಚೆಗೆ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಮಾಡಲಾಗಿತ್ತು. ಆಗ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಅವರು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಈಗ ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಇಡುವಂತೆ ಯತ್ನಾಳ್ ಒತ್ತಾಯಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಯತ್ನಾಳ್ ಒತ್ತಾಯ
ಬಸನಗೌಡ ಪಾಟೀಲ್ ಯತ್ನಾಳ್
Edited By: Rakesh Nayak Manchi

Updated on: Dec 16, 2023 | 10:47 AM

ವಿಜಯಪುರ, ಡಿ.16: ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ವಿಚಾರವಾಗಿ ಮೈಸೂರಿನ ವಿಮಾನ ನಿಲ್ದಾಣಕ್ಕೆ (Mysuru Airport) ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಎಕ್ಸ್​(ಟ್ವಿಟರ್​)ನಲ್ಲಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ, ಶಿವಮೊಗ್ಗ ಸೇರಿದಂತೆ ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ನಿರ್ಣಯ ಅಂಗೀಕಾರ

ಇತ್ತೀಚೆಗೆ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಮಾಡಲಾಗಿತ್ತು. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂಬಿ ಪಾಟೀಲ್ ಅವರು ಮಂಡಿಸಿದರು. ಈ ನಿರ್ಣಯವು ಅಂಗೀಕಾರ ಪಡೆಯಿತು.

ಅಲ್ಲದೆ, ಸದನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದ್ದರು. ಇದೇ ವೇಳೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಹುಬ್ಬಳ್ಳಿ-ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಅವರು ಒತ್ತಾಯಿಸಿದಾಗ ವಿಪಕ್ಷ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್​(ಟ್ವಿಟರ್​)ನಲ್ಲಿ ಟ್ವೀಟ್ ಮಾಡುವ ಮೂಲಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಇಡುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:38 am, Sat, 16 December 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us