AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೂ ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸನ್ನೆ ಮಾಡಿ, ಸಂದೇಶ ನೀಡಿದ್ದಾರೆ ರಾಹುಲ್ ಗಾಂಧಿ -ಶಾಸಕ ಯತ್ನಾಳ್

ಕರ್ನಾಟಕದಲ್ಲಿ ರಾಹುಲ್ ಗಾಂಧಿ  ಇಷ್ಟು ಜನರನ್ನು ನೋಡಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯರನ್ನ ಅಪ್ಪಿಕೊಳ್ಳುವಂತೆ ಡಿಕೆಶಿಗೆ ಹೇಳಿದ್ದಾರೆ. ಇಬ್ಬರೂ ಅಪ್ಪಿಕೊಂಡು ನಾಶವಾಗಿ ಅಂತಾ ಸಂದೇಶ ನೀಡಿದ್ದಾರೆ -ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 

ನಾನೂ ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸನ್ನೆ ಮಾಡಿ, ಸಂದೇಶ ನೀಡಿದ್ದಾರೆ ರಾಹುಲ್ ಗಾಂಧಿ -ಶಾಸಕ ಯತ್ನಾಳ್
ನಾನೂ ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸನ್ನೆ ಮಾಡಿ, ಸಂದೇಶ ನೀಡಿದ್ದಾರೆ ರಾಹುಲ್ ಗಾಂಧಿ -ಶಾಸಕ ಯತ್ನಾಳ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 08, 2022 | 2:44 PM

ವಿಜಯಪುರ: ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ (siddaramotasava) ಕಾಂಗ್ರೆಸ್​ ನಾಯಕರಾದ ಸಿದ್ದರಾಮಯ್ಯ (siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar)​ ಅವರ ಆಲಿಂಗನ ವಿಚಾರ ಪ್ರಸ್ತಾಪಿಸಿ, ವಿಜಯಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda patil yatnal) ಅವರು ಕರ್ನಾಟಕದಲ್ಲಿ ರಾಹುಲ್ ಗಾಂಧಿ (rahul gandhi) ಇಷ್ಟು ಜನರನ್ನು ನೋಡಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯರನ್ನ ಅಪ್ಪಿಕೊಳ್ಳುವಂತೆ ಡಿಕೆಶಿಗೆ ಹೇಳಿದ್ದಾರೆ. ಇಬ್ಬರೂ ಅಪ್ಪಿಕೊಂಡು (hug) ನಾಶವಾಗಿ ಅಂತಾ ಸಂದೇಶ ನೀಡಿದ್ದಾರೆ. ನಾನು ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸಂದೇಶ ನೀಡಿ, ಸನ್ನೆ ಮಾಡಿದಾರೆ ಎಂದು ಲೇವಡಿ ಮಾಡಿದ್ದಾರೆ.

ಇನ್ನು ತಮ್ಮ ಪಕ್ಷದ ಸರ್ಕಾರದ ಬಗ್ಗೆ ಮಾತನಾಡಿದ ಶಾಸಕ ಬಸನಗೌಡ ಯತ್ನಾಳ್ ರಾಜ್ಯ ಗೃಹ ಸಚಿವರ ಕಾರ್ಯ ವೈಖರಿ ಬಗ್ಗೆ ಕೇಂದ್ರ ಅಸಮಾಧಾನ ವಿಚಾರದಲ್ಲಿ ಕೇಂದ್ರ ನಾಯಕರು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ತಾರೆ. ಒಂದು ಒಳ್ಳೆಯ ನಿರ್ಣಯ ತೆಗೆದುಕೊಳ್ತಾರೆ. ಪ್ರಧಾನಿ ನರೇಂದ್ರ ಮೋದಿ ಮೇಲೆ ನಮಗೆಲ್ಲ ವಿಶ್ವಾಸ ಇದೆ ಎಂದೂ ಸೂಕ್ಷ್ಮವಾಗಿ ಹೇಳಿದರು.

ಕಾರ್ಯಕರ್ತರು ಎಂದರೆ ನಮ್ಮ ಪಕ್ಷದ ದೇವರಿದ್ದಂಗೆ- ಶಾಸಕ ಯತ್ನಾಳ

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ಬಳಿಕ ಬಿಜೆಪಿ ಪದಾಧಿಕಾರಿಗಳು ಸರಣಿ ರಾಜೀನಾಮೆ ವಿಚಾರವಾಗಿ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿದರು. ಹಿಂದೂವಾದಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಯತ್ನಾಳ ಹಾಗೂ ಸಿ ಟಿ ರವಿ ಪೋಟೋಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿರೋ ವಿಚಾರ ಪ್ರಸ್ತಾಪಿಸಿ ಕಾರ್ಯಕರ್ತರು ಬಿಜೆಪಿ ಪಕ್ಷದ ಮೂಲಬೇರು. ದೇಶದಲ್ಲಿ ಬಿಜೆಪಿ ಈ ಮಟ್ಟಿಗೆ ಬೆಳೆಯಲು ಕಾರ್ಯಕರ್ತರು ಮೂಲ ಕಾರಣ. ಕಾರ್ಯಕರ್ತರು ಎಂದರೆ ನಮ್ಮ ಪಕ್ಷದ ದೇವರಿದ್ದಂಗೆ. ಕಾರ್ಯಕರ್ತರಿಂದಲೇ ನಾವು ಎಂಎಲ್ಎ, ಎಂಪಿ ಆಗಿದ್ದೇವೆ. ಮೋದಿ ಅವರು ಪ್ರಧಾನಿಯಾಗಿದ್ದಾರೆ ಎಂದರು. ಬಿಜೆಪಿ ಕಾರ್ಯಕರ್ತರ ಬಗ್ಗೆ ತೇಜಸ್ವಿ ಸೂರ್ಯ ಹಗುರವಾಗಿ ಹೇಳಿಕೆ ವಿಚಾರ ತೇಜಸ್ವಿ ಸೂರ್ಯಾಗೆ ಟಾಂಗ್ ಕೊಟ್ಟ ಯತ್ನಾಳ್ ನಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆ ಹಗುರವಾಗಿ ಮಾತನಾಡುವುದು ಗೌರವ ತರುವಂಥದ್ದಲ್ಲಾ. ತಮ್ಮ ಭಾವನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳೋ ಹಕ್ಕು ಕಾರ್ಯಕರ್ತರಿಗಿದೆ. ಕಾರ್ಯಕರ್ತರು ಏನು ಬಯಸುತ್ತಿದ್ದಾರೆ ಎಂಬುದನ್ನು ನಮ್ಮ ಪಕ್ಷದ ಹಿರಿಯರು ಗಮನಿಸುತ್ತಿರುತ್ತಾರೆ. ಪ್ರವೀಣ ನೆಟ್ಟಾರು ಕೊಲೆಯಾದ ಮೇಲೆ ಕಾರ್ಯಕರ್ತರಿಗೆ ಸಾಕಷ್ಟು ನೋವಾಗಿದೆ. ಕಾರ್ಯಕರ್ತರಿಗೆ ಅಭದ್ರತೆಯ ಭಯವಾಗಿದೆ ಎಂಬುದನ್ನು ನಮ್ಮ ಪಕ್ಷದ ಹಿರಿಯರು ಗಮನಿಸಿದ್ದಾರೆ. ಈ ಕುರಿತು ಕೇಂದ್ರ ಹೈಕಮಾಂಡ್ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ ಯತ್ನಾಳ ಎಲ್ಲರಿಗೂ ರಕ್ಷಣೆ ಕೊಡೋಕಾಗುತ್ತಾ ಎಂದು ಕಾರ್ಯಕರ್ತರ ಬಗ್ಗೆ ಯಾರೂ ಹೇಳಿಕೆ ಕೊಡಬಾರದು ಎಂದು ಎಚ್ಚರಿಸಿದರು.

Published On - 2:28 pm, Mon, 8 August 22

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್