AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೂ ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸನ್ನೆ ಮಾಡಿ, ಸಂದೇಶ ನೀಡಿದ್ದಾರೆ ರಾಹುಲ್ ಗಾಂಧಿ -ಶಾಸಕ ಯತ್ನಾಳ್

ಕರ್ನಾಟಕದಲ್ಲಿ ರಾಹುಲ್ ಗಾಂಧಿ  ಇಷ್ಟು ಜನರನ್ನು ನೋಡಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯರನ್ನ ಅಪ್ಪಿಕೊಳ್ಳುವಂತೆ ಡಿಕೆಶಿಗೆ ಹೇಳಿದ್ದಾರೆ. ಇಬ್ಬರೂ ಅಪ್ಪಿಕೊಂಡು ನಾಶವಾಗಿ ಅಂತಾ ಸಂದೇಶ ನೀಡಿದ್ದಾರೆ -ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 

ನಾನೂ ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸನ್ನೆ ಮಾಡಿ, ಸಂದೇಶ ನೀಡಿದ್ದಾರೆ ರಾಹುಲ್ ಗಾಂಧಿ -ಶಾಸಕ ಯತ್ನಾಳ್
ನಾನೂ ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸನ್ನೆ ಮಾಡಿ, ಸಂದೇಶ ನೀಡಿದ್ದಾರೆ ರಾಹುಲ್ ಗಾಂಧಿ -ಶಾಸಕ ಯತ್ನಾಳ್
TV9 Web
| Edited By: |

Updated on:Aug 08, 2022 | 2:44 PM

Share

ವಿಜಯಪುರ: ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವದಲ್ಲಿ (siddaramotasava) ಕಾಂಗ್ರೆಸ್​ ನಾಯಕರಾದ ಸಿದ್ದರಾಮಯ್ಯ (siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar)​ ಅವರ ಆಲಿಂಗನ ವಿಚಾರ ಪ್ರಸ್ತಾಪಿಸಿ, ವಿಜಯಪುರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda patil yatnal) ಅವರು ಕರ್ನಾಟಕದಲ್ಲಿ ರಾಹುಲ್ ಗಾಂಧಿ (rahul gandhi) ಇಷ್ಟು ಜನರನ್ನು ನೋಡಿರಲಿಲ್ಲ. ಹೀಗಾಗಿ ಸಿದ್ದರಾಮಯ್ಯರನ್ನ ಅಪ್ಪಿಕೊಳ್ಳುವಂತೆ ಡಿಕೆಶಿಗೆ ಹೇಳಿದ್ದಾರೆ. ಇಬ್ಬರೂ ಅಪ್ಪಿಕೊಂಡು (hug) ನಾಶವಾಗಿ ಅಂತಾ ಸಂದೇಶ ನೀಡಿದ್ದಾರೆ. ನಾನು ನಾಶವಾಗಿದ್ದೇನೆ, ರಾಜ್ಯದಲ್ಲಿ ನೀವಿಬ್ಬರೂ ನಾಶವಾಗಿ ಅಂತಾ ಸಂದೇಶ ನೀಡಿ, ಸನ್ನೆ ಮಾಡಿದಾರೆ ಎಂದು ಲೇವಡಿ ಮಾಡಿದ್ದಾರೆ.

ಇನ್ನು ತಮ್ಮ ಪಕ್ಷದ ಸರ್ಕಾರದ ಬಗ್ಗೆ ಮಾತನಾಡಿದ ಶಾಸಕ ಬಸನಗೌಡ ಯತ್ನಾಳ್ ರಾಜ್ಯ ಗೃಹ ಸಚಿವರ ಕಾರ್ಯ ವೈಖರಿ ಬಗ್ಗೆ ಕೇಂದ್ರ ಅಸಮಾಧಾನ ವಿಚಾರದಲ್ಲಿ ಕೇಂದ್ರ ನಾಯಕರು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ತಾರೆ. ಒಂದು ಒಳ್ಳೆಯ ನಿರ್ಣಯ ತೆಗೆದುಕೊಳ್ತಾರೆ. ಪ್ರಧಾನಿ ನರೇಂದ್ರ ಮೋದಿ ಮೇಲೆ ನಮಗೆಲ್ಲ ವಿಶ್ವಾಸ ಇದೆ ಎಂದೂ ಸೂಕ್ಷ್ಮವಾಗಿ ಹೇಳಿದರು.

ಕಾರ್ಯಕರ್ತರು ಎಂದರೆ ನಮ್ಮ ಪಕ್ಷದ ದೇವರಿದ್ದಂಗೆ- ಶಾಸಕ ಯತ್ನಾಳ

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ಬಳಿಕ ಬಿಜೆಪಿ ಪದಾಧಿಕಾರಿಗಳು ಸರಣಿ ರಾಜೀನಾಮೆ ವಿಚಾರವಾಗಿ ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮಾತನಾಡಿದರು. ಹಿಂದೂವಾದಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಎಂದು ಯತ್ನಾಳ ಹಾಗೂ ಸಿ ಟಿ ರವಿ ಪೋಟೋಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕಿರೋ ವಿಚಾರ ಪ್ರಸ್ತಾಪಿಸಿ ಕಾರ್ಯಕರ್ತರು ಬಿಜೆಪಿ ಪಕ್ಷದ ಮೂಲಬೇರು. ದೇಶದಲ್ಲಿ ಬಿಜೆಪಿ ಈ ಮಟ್ಟಿಗೆ ಬೆಳೆಯಲು ಕಾರ್ಯಕರ್ತರು ಮೂಲ ಕಾರಣ. ಕಾರ್ಯಕರ್ತರು ಎಂದರೆ ನಮ್ಮ ಪಕ್ಷದ ದೇವರಿದ್ದಂಗೆ. ಕಾರ್ಯಕರ್ತರಿಂದಲೇ ನಾವು ಎಂಎಲ್ಎ, ಎಂಪಿ ಆಗಿದ್ದೇವೆ. ಮೋದಿ ಅವರು ಪ್ರಧಾನಿಯಾಗಿದ್ದಾರೆ ಎಂದರು. ಬಿಜೆಪಿ ಕಾರ್ಯಕರ್ತರ ಬಗ್ಗೆ ತೇಜಸ್ವಿ ಸೂರ್ಯ ಹಗುರವಾಗಿ ಹೇಳಿಕೆ ವಿಚಾರ ತೇಜಸ್ವಿ ಸೂರ್ಯಾಗೆ ಟಾಂಗ್ ಕೊಟ್ಟ ಯತ್ನಾಳ್ ನಮ್ಮ ಪಕ್ಷದ ಕಾರ್ಯಕರ್ತರ ಬಗ್ಗೆ ಹಗುರವಾಗಿ ಮಾತನಾಡುವುದು ಗೌರವ ತರುವಂಥದ್ದಲ್ಲಾ. ತಮ್ಮ ಭಾವನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹೇಳೋ ಹಕ್ಕು ಕಾರ್ಯಕರ್ತರಿಗಿದೆ. ಕಾರ್ಯಕರ್ತರು ಏನು ಬಯಸುತ್ತಿದ್ದಾರೆ ಎಂಬುದನ್ನು ನಮ್ಮ ಪಕ್ಷದ ಹಿರಿಯರು ಗಮನಿಸುತ್ತಿರುತ್ತಾರೆ. ಪ್ರವೀಣ ನೆಟ್ಟಾರು ಕೊಲೆಯಾದ ಮೇಲೆ ಕಾರ್ಯಕರ್ತರಿಗೆ ಸಾಕಷ್ಟು ನೋವಾಗಿದೆ. ಕಾರ್ಯಕರ್ತರಿಗೆ ಅಭದ್ರತೆಯ ಭಯವಾಗಿದೆ ಎಂಬುದನ್ನು ನಮ್ಮ ಪಕ್ಷದ ಹಿರಿಯರು ಗಮನಿಸಿದ್ದಾರೆ. ಈ ಕುರಿತು ಕೇಂದ್ರ ಹೈಕಮಾಂಡ್ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಹೇಳಿದ ಯತ್ನಾಳ ಎಲ್ಲರಿಗೂ ರಕ್ಷಣೆ ಕೊಡೋಕಾಗುತ್ತಾ ಎಂದು ಕಾರ್ಯಕರ್ತರ ಬಗ್ಗೆ ಯಾರೂ ಹೇಳಿಕೆ ಕೊಡಬಾರದು ಎಂದು ಎಚ್ಚರಿಸಿದರು.

Published On - 2:28 pm, Mon, 8 August 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು