AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲಿಗೆ ಹರಿಬಿಟ್ಟ SDPI ನಾಯಕನಿಗೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಖಡಕ್​​ ಕೌಂಟರ್​​

ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ SDPI ನಾಯಕ ಮೌಲಾನಾ ನೂರುದ್ದೀನ್ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಡಿಯೋ ವೈರಲ್​​ ಆಗಿದೆ. ಟಿಪ್ಪು ಸುಲ್ತಾನ್ ಬಗ್ಗೆ ಪ್ರಸ್ತಾಪಿಸಿ ಹೊಸ ವಿವಾದ ಸೃಷ್ಟಿಸಿದ್ದಾರೆ. ಇದಕ್ಕೆ ಶಾಸಕ ಯತ್ನಾಳ್​ರಿಂದಲೂ ಕೌಂಟರ್​​ ಹೇಳಿಕೆ ವ್ಯಕ್ತವಾಗಿದ್ದು, ಟಿಪ್ಪು ಪರ ಇರುವವರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ.

ನಾಲಿಗೆ ಹರಿಬಿಟ್ಟ SDPI ನಾಯಕನಿಗೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ಖಡಕ್​​ ಕೌಂಟರ್​​
SDPI ನಾಯಕನಿಗೆ ಯತ್ನಾಳ್​ ಖಡಕ್​​ ಕೌಂಟರ್​​
ಪ್ರಸನ್ನ ಹೆಗಡೆ
|

Updated on:Nov 28, 2025 | 11:35 AM

Share

ರಾಮನಗರ/ ವಿಜಯಪುರ, ನವೆಂಬರ್​​ 28: ಮಾಜಿ ಸಂಸದ ಪ್ರತಾಪ್​​ ಸಿಂಹ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ ವಿರುದ್ಧ SDPI ನಾಯಕ ಮೌಲಾನಾ ನೂರುದ್ದೀನ್ ನಾಲಿಗೆ ಹರಿಬಿಟ್ಟಿರುವ ವಿಡಿಯೋವೊಂದು ವೈರಲ್​​ ಆಗಿದೆ. ರಾಮನಗರದ ರೈಲ್ವೇ ಸ್ಪೇಷನ್ ಸರ್ಕಲ್ ಬಳಿ ನಡೆದ ಕನ್ನಡ ರಾಜೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮೌಲಾನಾ ನೂರುದ್ದೀನ್, ಮಾಜಿ ಸಂಸದ ಪ್ರತಾಪ್​​ ಸಿಂಹ ವಿರುದ್ಧವೂ ವಾಗ್ದಾಳಿ ನಡೆಸಿದ್ದರು.

ಮೌಲಾನಾ ನೂರುದ್ದೀನ್ ಹೇಳಿದ್ದೇನು?

ಬಸನಗೌಡ ಪಾಟೀಲ್​ ಯತ್ನಾಳ್​​ ಒಬ್ಬ ಭಯೋತ್ಪಾದಕ ಎಂದಿರುವ ಮೌಲಾನಾ ನೂರುದ್ದೀನ್, ಪ್ರತಾಪ್​​ ಸಿಂಹ ಬಗ್ಗೆಯೂ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅಲ್ಲದೆ, ಟಿಪ್ಪು ಸುಲ್ತಾನ್​​ ಇಲ್ಲದಿದ್ದರೆ ಪ್ರತಾಪ್​​ ಸಿಂಹ ಬ್ರಿಟಿಷರ ನಾಯಿ ತೊಳೆಯಬೇಕಿತ್ತು ಎಂದಿದ್ದಾರೆ.

ಯತ್ನಾಳ್​​ ಖಡಕ್​ ಕೌಂಟರ್​​

ಮೌಲಾನಾ ನೂರುದ್ದೀನ್ ಹೇಳಿಕೆಗೆ ಇತ್ತ ಶಾಸಕ ಯತ್ನಾಳ್​​ರಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಗ್ಗೆ ತೀಕ್ಷ್ಣವಾಗಿ ಹೇಳಿಕೆ ನೀಡಿರುವ ಶಾಸಕರು, ಟಿಪ್ಪು ಪರ ಇರುವವರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ. ಟಿಪ್ಪು ಸುಲ್ತಾನ್ ಕಾಲದಲ್ಲಿ ಲಕ್ಷಾಂತರ ಹಿಂದೂಗಳ ಕೊಲೆಯಾಗಿದೆ. ಅದೆಲ್ಲ ಇತಿಹಾಸದಲ್ಲಿ ದಾಖಲಾಗಿ, ಸಾಕ್ಷಿಯಾಗಿದೆ. ಕರ್ನಾಟಕ ಹಾಗೂ ಕೇರಳ ಸೇರಿ 3,500 ದೇವಸ್ಥಾನಗಳನ್ನ ಟಿಪ್ಪು ನಾಶ ಮಾಡಿದ್ದಾನೆ. ಲಕ್ಷಾಂತರ ಕೊಡವ ಸಮಾಜದವರ ನೆರಮೇಧ ನಡೆಸಿದ್ದಾನೆ. ಹೀಗಾಗಿ ನಮಗೆ ಟಿಪ್ಪು ಆದರ್ಶವಲ್ಲ, ಆತ ಹಿಂದೂ ಧರ್ಮದ ದ್ರೋಹಿಯಾಗಿದ್ದ. ಇಸ್ಲಾಮೀಕರಣ ಮಾಡಲು ಬಯಸಿದ್ದ, ಆದರೆ ಅದು ಆಗಲಿಲ್ಲ. ಅಂತವನಿಂದ ನಾವು ಆದರ್ಶ ಕಲಿಯಬೇಕಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಅಧಿಕಾರ ಹಂಚಿಕೆ ಕಿತ್ತಾಟದಲ್ಲಿ ಬಿದ್ದೋಯ್ತು ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ

ಇದೇ ವೇಳೆ ದೆಹಲಿಯಲ್ಲಿ ನಡೆದ ಸ್ಫೋಟದ ವಿಚಾರವನ್ನೂ ಪ್ರಸ್ತಾಪಿಸಿರುವ ಯತ್ನಾಳ್​​, ಘಟನೆಯನ್ನು ಯಾವುದೇ ಮುಸ್ಲಿಂ ಧರ್ಮಗುರುಗಳು, ಮುಖಂಡರು ಖಂಡಿಸಿಲ್ಲ. ಇಲ್ಲಿ ಶಾಂತಿ ಸಭೆ ಮಾಡಿ ಹಿಂದೂ-ಮುಸ್ಲಿಂ ಭಾಯಿ ಭಾಯಿ ಎನ್ನುತ್ತಾರೆ ಅಷ್ಟೇ. ಅವರಿಗೆ ಏನಾದರೂ ಆದರೆ ಸಿದ್ದರಾಮಯ್ಯ ಮೊದಲು ಮಾತನಾಡುತ್ತಾರೆ. ಮುಸ್ಲಿಮರ ನಿಷ್ಟೆ ದೇಶಕ್ಕಲ್ಲ, ಬದಲು ಅವರ ಧರ್ಮಕ್ಕೆ ಎಂದು ಅಂಬೇಡ್ಕರ್​​ ಅಂದೇ ಹೇಳಿದ್ದರು ಎಂದು ಯತ್ನಾಳ್​​ ವಾಗ್ದಾಳಿ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:32 am, Fri, 28 November 25

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್