ಯತ್ನಾಳ್​ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಕಾರು ಅಪಘಾತದಲ್ಲಿ ಸಾವು

ಬಿಜೆಪಿಯಿಂದ ಯತ್ನಾಳ್​​ರನ್ನು ಉಚ್ಚಾಟನೆಯ ನಂತರ, ಅವರನ್ನು ಬೆಂಬಲಿಸಿ ರಾಜೀನಾಮೆ ನೀಡಿದ್ದ ವಿಜಯಪುರದ ಬಿಜೆಪಿ ನಗರ ಎಸ್​ಟಿ ಮೋರ್ಚಾ ಪದಾಧಿಕಾರಿ ಕಾರು ಅಪಘಾತದಲ್ಲಿ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಜೊತೆಗೆ ಯತ್ನಾಳ್​ ಉಚ್ಛಾಟನೆ ಖಂಡಿಸಿ ಪಕ್ಷದ ವಿವಿಧ ಪದಾಧಿಕಾರಿಗಳ ರಾಜೀನಾಮೆ ಪರ್ವ ಕೂಡ ಮುಂದುವರೆದಿದೆ.

ಯತ್ನಾಳ್​ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಕಾರು ಅಪಘಾತದಲ್ಲಿ ಸಾವು
ಯತ್ನಾಳ್​, ಮೃತ ಸಂತೋಷ್ ತಟಗಾರ
Edited By:

Updated on: Mar 27, 2025 | 2:45 PM

ವಿಜಯಪುರ, ಮಾರ್ಚ್​ 27: ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ (Basanagouda Patil Yatnal) ಬಿಜೆಪಿ ಗೇಟ್‌ಪಾಸ್ ನೀಡಿದೆ. ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್‌ರನ್ನ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಛಾಟನೆ ಮಾಡಿ ನಿನ್ನೆ ಆದೇಶ ಹೊರಡಿಸಿತ್ತು. ಆ ಮೂಲಕ ಫೈರ್‌ಬ್ರ್ಯಾಂಡ್‌ಗೆ ಬಿಜೆಪಿ ಹೈಕಮಾಂಡ್ ಶಾಕ್​ ನೀಡಿತ್ತು. ಅತ್ತ ಅವರನ್ನು ಉಚ್ಚಾಟನೆ ಮಾಡುತ್ತಿದ್ದಂತೆ ಇತ್ತ ಯತ್ನಾಳ್​ರನ್ನು ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಅಪಘಾತದಲ್ಲಿ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ.

ಬಿಜೆಪಿ ನಗರ ಎಸ್​ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ್​ ತಟಗಾರ ಮೃತ ಪದಾಧಿಕಾರಿ. ಸಂತೋಪ್​​ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಉಚ್ಟಾಟನೆಯಿಂದ ಯತ್ನಾಳ್ ಮೇಲಾಗುವ ಪರಿಣಾಮಗಳೇನು? ಶಾಸಕ ಸ್ಥಾನದ ಕಥೆ ಏನು?

ಯತ್ನಾಳ್​ರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು. ಆದರೆ ಜನರ‌ ಮನಸ್ಸಿನಿಂದ ಉಚ್ಛಾಟನೆ ಮಾಡುವುದಕ್ಕೆ ಆಗಲ್ಲ. ವೇಟ್ ಆ್ಯಂಡ್ ಸಿ. ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಸಾವಿಗೂ ಮುನ್ನ ಸಂತೋಷ್​ ತಟಗಾರ ಪೋಸ್ಟ್ ಹಂಚಿಕೊಂಡಿದ್ದರು.

ಯತ್ನಾಳ್​ ಉಚ್ಛಾಟನೆ ಬೆನ್ನಲ್ಲೆ ರಾಜೀನಾಮೆ ಪರ್ವ

ಇನ್ನು ಮಧ್ಯೆ ಯತ್ನಾಳ್​ ಉಚ್ಛಾಟನೆ ಖಂಡಿಸಿ ಪಕ್ಷದ ವಿವಿಧ ಪದಾಧಿಕಾರಿಗಳ ರಾಜೀನಾಮೆ ಪರ್ವ ಮುಂದುವರೆದಿದೆ. ಬಿಜೆಪಿ ನಗರದ ಮಂಡಳ ಅಧ್ಯಕ್ಷ ಶಂಕರ ಹೂಗಾರ, ಕಾರ್ಯದರ್ಶಿ ಸಿದ್ದನಗೌಡ ಬಿರಾದಾರ್, ಬಿಜೆಪಿ ನಗರ ಓಬಿಸಿ ಮೋರ್ಚಾ ಸ್ಥಾನಕ್ಕೆ ಭೀಮು ಮಾಶ್ಯಾಳ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಚು ಬಿರಾದಾರ ರಾಜೀನಾಮೆ ನೀಡಿದ್ದಾರೆ.

ಜೊತೆಗೆ ಪದಾಧಿಕಾರಿಗಳು ಸಹ ಯತ್ನಾಳ್ ಬೆಂಬಲಕ್ಕೆ ನಿಂತ್ತಿದ್ದು, ಪದಾಧಿಕಾರಿಗಳ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಶಂಕರ ಹೂಗಾರ, ಯತ್ನಾಳ್ ಉಚ್ಛಾಟನೆಯನ್ನು ಹೈಕಮಾಂಡ್ ಹಿಂಪಡೆಯಬೇಕೆಂದು ಒತ್ತಾಯ ಮಾಡಿದರು. ಇದು ಹಿಂದುತ್ವಕ್ಕೆ ಮಾಡಿದ ಅಪಮಾನವಾಗಿದೆ. ಯತ್ನಾಳ್ ಹತ್ತಿಕ್ಕೊ ಕೆಲಸ ಮಾಡಲಾಗಿದೆ. ಬಿಜೆಪಿಯ ನಿಷ್ಠಾವಂತ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿದ್ದಾರೆ. ಕಾರಣ ನಾನೂ ನಗರ ಮಂಡಳ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಯತ್ನಾಳ್​ಗೆ ಈ ಉಚ್ಛಾಟನೆ ಶಿಕ್ಷೆ ಇದೇನು ಮೊದಲಲ್ಲ…2 ಬಾರಿ ಅಮಾನತುಗೊಂಡು ವಾಪಸ್ ಪಕ್ಷಕ್ಕೆ ಬಂದವರು

ನಗರ ಶಾಸಕ ಯತ್ನಾಳ್​ ಅಭಿವೃದ್ದಿ ಹರಿಕಾರರಾಗಿದ್ದಾರೆ. ಯತ್ನಾಳ್ ಭ್ರಷ್ಠಾಚಾರದ ವಿರುದ್ದ ಮಾತನಾಡಿದ್ದು ತಪ್ಪಾ? ಕುಟುಂಬ ರಾಜಕಾರಣದ ವಿರುದ್ದ ಮಾತನಾಡಿದ್ದು ತಪ್ಪಾ? ಈ ಕೂಡಲೆ ಹಿಂಪಡೆಯಬೇಕೆಂದು ಒತ್ತಾಯಿಸಿ ಕಣ್ಣೀರು ಹಾಕಿದ್ದಾರೆ. ಇಲ್ಲವಾದರೆ ಸಾಮೂಹಿಕ ರಾಜಿನಾಮೆ ನೀಡಲಿದ್ದೇವೆಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:37 pm, Thu, 27 March 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us