AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಮೀಸಲಾತಿ: ಸಿಎಂ ಭರವಸೆ ಒಪ್ಪಿದ ಬಸವ ಜಯಮೃತ್ಯುಂಜಯಶ್ರೀ

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯಾದ ಮೂರು ತಿಂಗಳ ಒಳಗೆ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು ಎಂದು ಸ್ವಾಮೀಜಿ ಹೇಳಿದರು.

ಪಂಚಮಸಾಲಿ ಮೀಸಲಾತಿ: ಸಿಎಂ ಭರವಸೆ ಒಪ್ಪಿದ ಬಸವ ಜಯಮೃತ್ಯುಂಜಯಶ್ರೀ
ಬಸವಜಯ ಮೃತ್ಯುಂಜಯಶ್ರೀ ಸ್ವಾಮೀಜಿ
TV9 Web
| Edited By: |

Updated on: Dec 06, 2021 | 5:41 PM

Share

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ರಾಜ್ಯದಲ್ಲಿ ನಡೆಸಲು ಉದ್ದೇಶಿಸಿದ್ದ ಸತ್ಯಾಗ್ರಹವನ್ನು ಕೈಬಿಡಲಾಗಿದೆ. ಅದರ ಬದಲಿಗೆ ಗ್ರಾಮ ಪಂಚಾಯಿತಿ ಮಟ್ಟದಿಂದ ಹೋರಾಟ ಸಂಘಟಿಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಕಲ್ಪಿಸಲು ಅಕ್ಟೋಬರ್ 1ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದು ನಿಜ. ಅಂದೇ ಮುಖ್ಯಮಂತ್ರಿ ಬೊಮ್ಮಾಯಿ ನಮ್ಮನ್ನು ಕರೆದು ಮಾತಾಡಿದ್ದರು ಎಂದು ಹೇಳಿದರು. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯಾದ ಮೂರು ತಿಂಗಳ ಒಳಗೆ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು. ಸತ್ಯಾಗ್ರಹ ಮಾಡಬೇಡಿ, ಹೋರಾಟ ಮಾಡಿ ಎಂದು ಹೇಳಿದ್ದರು. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಿಂದ ನಮ್ಮ ಹೋರಾಟ ನಡೆಯುತ್ತಿದೆ ಎಂದು ತಿಳಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಸಾಧ್ಯವಾದಷ್ಟೂ ಬೇಗ ಮೀಸಲಾತಿ ಘೋಷಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ. ಮುಂದಿನ ದಿನಗಳಲ್ಲಿ ಸಮಾಜದ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತದೆ. ವಿಜಯಪುರ, ಬೆಳಗಾವಿ ಅಥವಾ ಬಾಗಲಕೋಟೆಯಲ್ಲಿ ಸಭೆ ನಡೆಸಲಾಗುವುದು ಎಂದು ವಿಜಯಪುರದಲ್ಲಿ ಬಸವ ಜಯಮೃತ್ಯುಂಜಯ ಶ್ರೀ ಹೇಳಿದರು.

ಮೀಸಲಾತಿಗೆ ವಿರೋಧ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಬಗ್ಗೆ ಈಚೆಗೆ ನಡೆದ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ವಿರೋಧ ಕೇಳಿಬಂದಿದೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು (ಅಕ್ಟೋಬರ್ 26) ನಡೆದ ಸಭೆಯಲ್ಲಿ ವಿರೋಧ ಅಭಿಪ್ರಾಯ ಕೇಳಿಬಂದಿದೆ. ಙರಿಷತ್​ನ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ದ್ವಾರಕನಾಥ್ ಸೇರಿದಂತೆ ಇತರರು ಸಭೆಯಲ್ಲಿ ಭಾಗಿ ಆಗಿದ್ದರು. ಈ ಸಭೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರಕ್ಕೆ ವಿರೋಧ ವ್ಯಕ್ತವಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ನೀಡದಂತೆ ಆಗ್ರಹ ಕೇಳಿಬಂದಿದೆ. ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಅವೈಜ್ಞಾನಿಕ ಎಂಬ ನಿಲುವನ್ನು ಸಭೆ ವ್ಯಕ್ತಪಡಿಸಿದೆ. ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಳಪಡಿಸುವುದನ್ನು ವಿರೋಧಿಸಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: ಪಂಚಮಸಾಲಿ 3ನೇ ಪೀಠ ರಚನೆಗಾಗಿ ಜಮಖಂಡಿಯಲ್ಲಿ ಟ್ರಸ್ಟ್​ ನೋಂದಣಿ ಇದನ್ನೂ ಓದಿ: ಹಾಸನದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಧಿಕ್ಕಾರ; ಸಭೆ ಮೊಟಕುಗೊಳಿಸಿ ತೆರಳಿದ ಸ್ವಾಮೀಜಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ