AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!

ವಿಜಯಪುರದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬ್ಲಾಕ್‌ಮೇಲ್ ವಿವಾದದಲ್ಲಿ ಸಿಲುಕಿದ್ದಾರೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿ, ಹಣಕ್ಕಾಗಿ ಬೆದರಿಕೆ ಹಾಕಲಾಗಿದೆ ಎಂದು ಶಿಷ್ಯರೊಬ್ಬರು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ ಎಂದು ಆರೋಪಿಸಲಾಗಿದ್ದು, 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆದಿದೆ ಎಂದು ಹೇಳಲಾಗಿದೆ. ಮಹಿಳೆಯೊಬ್ಬರು ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನೂ ಮಾಡಿದ್ದಾರೆ.

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!
ಸಾಂದರ್ಭಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 07, 2026 | 9:05 PM

Share

ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು ಕಾರು ತಡೆದು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಆಗ ಭಕ್ತರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ಆದರೆ, ಈ ಘಟನೆಯ ನಂತರ ಮಹಿಳೆಯು ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಮೀಜಿಗಳ ವಿರುದ್ಧ ಅಪಪ್ರಚಾರ ಆರಂಭಿಸಿ, ರಾಜಕುಮಾರ್ ಎಂಬುವವರ ಮೂಲಕ 3 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಟಿವಿ9 ಜೊತೆಗೆ ಮಾತನಾಡಿರುವ ಸಂತೋಷ ಮಂಜಣ್ಣಿ, ಈ ಇಡೀ ಪ್ರಕರಣದ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡವಿದೆ ಎಂದು ಗಂಭೀರವಾಗಿ ಹೇಳಿದ್ದಾರೆ. “ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಸ್ವಾಮೀಜಿಗಳಿಂದ ಎಲ್ಲ ಕೆಲಸ ಮಾಡಿಸಿಕೊಂಡು ಈಗ ಪೀಠದಿಂದ ಉಚ್ಛಾಟನೆ ಮಾಡಲು ಸಂಚು ರೂಪಿಸುತ್ತಿದ್ದಾರೆ. ಇದು 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಹುನ್ನಾರ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಸವಜಯಮೃತ್ಯುಂಜಯ ವಿರುದ್ಧ ಮಹಿಳೆ ಲೈಂಗಿಕ ದೌರ್ಜುನ್ಯ ಆರೋಪ:ಸ್ಫೋಟಕ ವಿಚಾರ ಬಿಚ್ಚಿಟ್ಟ ಕೈ ಶಾಸಕ

ಇದೇ ವೇಳೆ, ಮಹಿಳೆಯು ಸ್ವಾಮೀಜಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಂತೋಷ, “ಇಷ್ಟು ದಿನ ಸುಮ್ಮನಿದ್ದ ಮಹಿಳೆ, ಸ್ವಾಮೀಜಿಗಳು ದೂರು ನೀಡಿದ ಬಳಿಕವಷ್ಟೇ ಯಾಕೆ ದೂರು ನೀಡಿದ್ದಾರೆ? ಇದು ಕೇವಲ ಹಣಕ್ಕಾಗಿ ಮಾಡುತ್ತಿರುವ ಬೆದರಿಕೆ” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
‘ಪಲ್ಲಿಚಟ್ಟಂಬಿ’ ಸಿನಿಮಾ: ‘ಮುಗಿಲ್ ಪೇಟೆ’ ಚೆಲುವೆಯ ಮುದ್ದಾದ ಮಾತು
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಪ್ರತಿದಿನ ನ್ಯೂಸ್‌ನಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿಗೆ ಫ್ರೀ ಹೆಲ್ತ್ ಚೆಕಪ್
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಹೈಕಮಾಂಡ್​​ ಅಂಗಳದಲ್ಲಿದ್ಯಾ BJP, JDS ಮೈತ್ರಿ ಭವಿಷ್ಯ?
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ