AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪೂರ್ಣ ಭರ್ತಿಯಾದ ಆಲಮಟ್ಟಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಂಪೂರ್ಣ ಭರ್ತಿಯಾದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ.

ಸಂಪೂರ್ಣ ಭರ್ತಿಯಾದ ಆಲಮಟ್ಟಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ
TV9 Web
| Edited By: |

Updated on:Aug 21, 2021 | 12:31 PM

Share

ವಿಜಯಪುರ: ಸಂಪೂರ್ಣ ಭರ್ತಿಯಾದ ಆಲಮಟ್ಟಿಯ ಲಾಲ್  ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಡ್ಯಾಂಗೆ ಸಿಎಂ ಪೂಜೆ ಸಲ್ಲಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಮುರುಗೇಶ‌ ನಿರಾಣಿ, ಉಮೇಶ ಕತ್ತಿ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎ. ಎಸ್. ಪಾಟೀಲ್ ನಡಹಳ್ಳಿ ಸೇರಿದಂತೆ ಇತರೆ ಜನಪ್ರತಿನಿಧಿಗಳು  ಸಾಥ್ ನೀಡಿದ್ದಾರೆ.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ಮೂಲಕ ಇಂದು ಆಗಮಿಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ‌ ಆಗಮಿಸಿದ್ದು, ಆಲಮಟ್ಟಿ ಬಳಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರದ ಆವರಣದಲ್ಲಿನ ಹೆಲಿಪ್ಯಾಡ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲುಪಿದ್ದಾರೆ. ಸಿಎಂಗೆ ಪೊಲೀಸ್ ಪಡೆ ಗೌರವ ವಂದನೆ ನೀಡಿದ್ದಾರೆ.

ಗಂಗಾ ಪೂಜೆ ಬಳಿಕ ಜನಪ್ರನಿಧಿಗಳ ಭೇಟಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ನಂತರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿ ವೀಕ್ಷಿಸಲಿದ್ದು, ಸೂಕ್ತ ಪರಿಹಾರ ಘೋಷಣೆ ಮಾಡುವ ನಿರೀಕ್ಷೆ ಇದೆ.

ಡ್ಯಾಂ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಬಂದೋ ಬಸ್ತ್ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಭರ್ತಿಯಾದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ. ಸಿಎಂ ಭೇಟಿ ಹಿನ್ನೆಲೆ ಡ್ಯಾಂ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಬಂದೋ ಬಸ್ತ್ ಮಾಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಡ್ಯಾಂಗೆ ಪ್ರವೇಶ ನೀಡಲಾಗಿದೆ. ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

ಉತ್ತರ ವಲಯ ಐಜಿಪಿ ಎನ್. ಸತೀಶಕುಮಾರ, ವಿಜಯಪುರ ಎಸ್​ಪಿ ಆನಂದಕುಮಾರ, ಬಾಗಲಕೋಟ ಎಸ್​ಪಿ ಲೊಕೇಶ ಜಗಲಾಸರ್, ವಿಜಯಪುರ ಎಎಸ್​ಪಿ ರಾಮ್ ಅರಸಿದ್ದಿ, 5 ಡಿಎಸ್​ಪಿ, 12 ಇನ್ಸಪೆಕ್ಟರ್,30 ಪಿಎಸ್ಐ, 250 ಇತರೆ ಸಿಬ್ಬಂದಿ, ಐಆರ್​ಬಿ 4 ತುಕಡಿ, ಡಿಎಆರ್ 5 ತುಕಡಿ, ಕೆಎಸ್ಆರ್​ಪಿ 4 ಅವರನ್ನು ನೇಮಿಸಲಾಗಿದೆ. ವಿಜಯಪುರ ಡಿಸಿಪಿ ಸುನೀಲಕುಮಾರ ಹಾಗೂ ಬಾಗಲಕೋಟೆ ಡಿಸಿ ಕ್ಯಾಪ್ಟನ್ ರಾಜೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಎಸ್​ವೈ ತಂದೆಯಂತೆ, ಬಸವರಾಜ ಬೊಮ್ಮಾಯಿ ಸಹೋದರನ ರೀತಿ, ಸಂಘಟನೆ ತಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ

CM Basavaraj Bommai: ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ

Published On - 11:59 am, Sat, 21 August 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ