AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಹೆಸರು ಘೋಷಣೆ

2018 ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂಸಿ ಮನಗೂಳಿ ವಿರುದ್ಧ ಸೋಲು ಕಂಡಿದ್ದರು. ನಾಲ್ಕನೇ ಬಾರಿಗೆ ಸ್ಪರ್ಧೆ ಮಾಡಲಿರುವ ಮಾಜಿ ಶಾಸಕ ರಮೇಶ ಭೂಸನೂರ ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತಾರೆ.

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಹೆಸರು ಘೋಷಣೆ
ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ
TV9 Web
| Edited By: sandhya thejappa|

Updated on:Oct 07, 2021 | 11:04 AM

Share

ವಿಜಯಪುರ: ಸಿಂದಗಿ ಉಪ ಚುನಾವಣೆ (Sindagi By Election) ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ರಮೇಶ್ ಭೂಸನೂರ ಹೆಸರು ಘೋಷಣೆ ಮಾಡಲಾಗಿದೆ. 2008 ಹಾಗೂ 2013 ರಲ್ಲಿ ರಮೇಶ್ ಭೂಸನೂರ ಬಿಜೆಪಿ ಶಾಸಕರಾಗಿದ್ದರು. 2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂಸಿ ಮನಗೂಳಿ ವಿರುದ್ಧ ಸೋಲು ಕಂಡಿದ್ದರು. ನಾಲ್ಕನೇ ಬಾರಿ ಸ್ಪರ್ಧೆ ಮಾಡಲಿರುವ ಮಾಜಿ ಶಾಸಕ ರಮೇಶ್ ಭೂಸನೂರ ನಾಳೆ (ಅ.8) ನಾಮಪತ್ರ ಸಲ್ಲಿಕೆ ಮಾಡುತ್ತಾರೆ.

ಟಿಕೆಟ್​ಗಾಗಿ ತೀವ್ರ ಜಿದ್ದಾಜಿದ್ದಿ ನಡೆದು ಕೊನೆಗೆ ರಮೇಶ್ ಭೂಸನೂರಗೆ ಒಲಿದಿದೆ. ಇವರು ಎರಡು ಬಾರಿ ಸತತವಾಗಿ ಬಿಜೆಪಿ ಶಾಸಕರಾಗಿದ್ದರು. ಹಲವರು ಟಿಕೆಟ್ ಆಕಾಂಕ್ಷಿಗಳಿದ್ದರು. ಆದರೆ ಕೇಂದ್ರ ‌ನಾಯಕರು ರಮೇಶ್ ಭೂಸನೂರಗೆ ಟಿಕೆಟ್ ನೀಡಿದ್ದಾರೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ, ಸಿಂದಗಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ದೃಢ ವಿಶ್ವಾಸವಿತ್ತು. 2018ರ ಸೋಲಿನಿಂದಲೇ ಮುಂದಿನ ಚುನಾವಣೆಗೆ ಅಣಿಯಾಗಿದ್ದೆ. ಪ್ರವಾಹ‌, ಕೊರೊನಾ ವೇಳೆ ಜನಪರ ಸೇವೆ ಮಾಡಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಗಳೊಂದಿಗೆ ಮತ ಬೇಡುವೆ ಎಂದು ತಿಳಿಸಿದರು.

ಹಿಂದೆ ಎರಡು ಬಾರಿ ಶಾಸಕನಾಗಿ ಜನಪರ ಕೆಲಸ ಮಾಡಿದ್ದನ್ನು ಜನರ ಮುಂದಿಡುವೆ ಎಂದು ಹೇಳಿಕೆ ನೀಡಿದ ರಮೇಶ್ ಭೂಸನೂರ, ಈ ಬಾರಿಯ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಹಜವಾಗಿ ಪಕ್ಷದಲ್ಲಿ ಟಿಕೆಟ್​ಗಾಗಿ ಬೇಡಿಕೆಯಿತ್ತು. ಕೇಂದ್ರ ಹಾಗೂ ರಾಜ್ಯ ನಾಯಕರು ನನ್ನ ಮೇಲೆ ಭರವಸೆ ನೀಡಿ ಟಿಕೆಟ್ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ಆಭ್ಯರ್ಥಿ ರಮೇಶ್ ಭೂಸನೂರ ನಾಳೆ ಮಧ್ಯಾಹ್ನ 12 ಕ್ಕೆ ನಾಮಪತ್ರ ಸಲ್ಲಿಸುತ್ತಾರೆ. ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ವಿ ಸೋಮಣ್ಣ, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯ ಶಾಸಕರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಉಪ ಚುನಾವಣೆ ಅಭ್ಯರ್ಥಿಗಳ ಪಟ್ಟಿ ರಾಜ್ಯಾಧ್ಯಕ್ಷರಿಗೆ, ಉಮೇದುವಾರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಟಿ ರವಿ

‘ಪುಷ್ಪ’ ಚಿತ್ರದ ಒಂದೇ ಹಾಡಿನಲ್ಲಿ ಡ್ಯಾನ್ಸ್​ ಮಾಡಲು 2 ಕೋಟಿ ರೂ. ಸಂಬಳ ಕೇಳಿದ ನೋರಾ ಫತೇಹಿ

Published On - 10:49 am, Thu, 7 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ