AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಹೆಸರು ಘೋಷಣೆ

2018 ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂಸಿ ಮನಗೂಳಿ ವಿರುದ್ಧ ಸೋಲು ಕಂಡಿದ್ದರು. ನಾಲ್ಕನೇ ಬಾರಿಗೆ ಸ್ಪರ್ಧೆ ಮಾಡಲಿರುವ ಮಾಜಿ ಶಾಸಕ ರಮೇಶ ಭೂಸನೂರ ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತಾರೆ.

ಸಿಂದಗಿ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಭೂಸನೂರ ಹೆಸರು ಘೋಷಣೆ
ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ
TV9 Web
| Updated By: sandhya thejappa|

Updated on:Oct 07, 2021 | 11:04 AM

Share

ವಿಜಯಪುರ: ಸಿಂದಗಿ ಉಪ ಚುನಾವಣೆ (Sindagi By Election) ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ರಮೇಶ್ ಭೂಸನೂರ ಹೆಸರು ಘೋಷಣೆ ಮಾಡಲಾಗಿದೆ. 2008 ಹಾಗೂ 2013 ರಲ್ಲಿ ರಮೇಶ್ ಭೂಸನೂರ ಬಿಜೆಪಿ ಶಾಸಕರಾಗಿದ್ದರು. 2018ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂಸಿ ಮನಗೂಳಿ ವಿರುದ್ಧ ಸೋಲು ಕಂಡಿದ್ದರು. ನಾಲ್ಕನೇ ಬಾರಿ ಸ್ಪರ್ಧೆ ಮಾಡಲಿರುವ ಮಾಜಿ ಶಾಸಕ ರಮೇಶ್ ಭೂಸನೂರ ನಾಳೆ (ಅ.8) ನಾಮಪತ್ರ ಸಲ್ಲಿಕೆ ಮಾಡುತ್ತಾರೆ.

ಟಿಕೆಟ್​ಗಾಗಿ ತೀವ್ರ ಜಿದ್ದಾಜಿದ್ದಿ ನಡೆದು ಕೊನೆಗೆ ರಮೇಶ್ ಭೂಸನೂರಗೆ ಒಲಿದಿದೆ. ಇವರು ಎರಡು ಬಾರಿ ಸತತವಾಗಿ ಬಿಜೆಪಿ ಶಾಸಕರಾಗಿದ್ದರು. ಹಲವರು ಟಿಕೆಟ್ ಆಕಾಂಕ್ಷಿಗಳಿದ್ದರು. ಆದರೆ ಕೇಂದ್ರ ‌ನಾಯಕರು ರಮೇಶ್ ಭೂಸನೂರಗೆ ಟಿಕೆಟ್ ನೀಡಿದ್ದಾರೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ, ಸಿಂದಗಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ದೃಢ ವಿಶ್ವಾಸವಿತ್ತು. 2018ರ ಸೋಲಿನಿಂದಲೇ ಮುಂದಿನ ಚುನಾವಣೆಗೆ ಅಣಿಯಾಗಿದ್ದೆ. ಪ್ರವಾಹ‌, ಕೊರೊನಾ ವೇಳೆ ಜನಪರ ಸೇವೆ ಮಾಡಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ದಿ ಕಾರ್ಯಗಳೊಂದಿಗೆ ಮತ ಬೇಡುವೆ ಎಂದು ತಿಳಿಸಿದರು.

ಹಿಂದೆ ಎರಡು ಬಾರಿ ಶಾಸಕನಾಗಿ ಜನಪರ ಕೆಲಸ ಮಾಡಿದ್ದನ್ನು ಜನರ ಮುಂದಿಡುವೆ ಎಂದು ಹೇಳಿಕೆ ನೀಡಿದ ರಮೇಶ್ ಭೂಸನೂರ, ಈ ಬಾರಿಯ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸಹಜವಾಗಿ ಪಕ್ಷದಲ್ಲಿ ಟಿಕೆಟ್​ಗಾಗಿ ಬೇಡಿಕೆಯಿತ್ತು. ಕೇಂದ್ರ ಹಾಗೂ ರಾಜ್ಯ ನಾಯಕರು ನನ್ನ ಮೇಲೆ ಭರವಸೆ ನೀಡಿ ಟಿಕೆಟ್ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ಆಭ್ಯರ್ಥಿ ರಮೇಶ್ ಭೂಸನೂರ ನಾಳೆ ಮಧ್ಯಾಹ್ನ 12 ಕ್ಕೆ ನಾಮಪತ್ರ ಸಲ್ಲಿಸುತ್ತಾರೆ. ಈ ವೇಳೆ ಸಚಿವರಾದ ಗೋವಿಂದ ಕಾರಜೋಳ, ವಿ ಸೋಮಣ್ಣ, ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಲಕ್ಷ್ಮಣ ಸವದಿ ಸೇರಿದಂತೆ ಜಿಲ್ಲೆಯ ಶಾಸಕರು ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಉಪ ಚುನಾವಣೆ ಅಭ್ಯರ್ಥಿಗಳ ಪಟ್ಟಿ ರಾಜ್ಯಾಧ್ಯಕ್ಷರಿಗೆ, ಉಮೇದುವಾರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ: ಸಿಟಿ ರವಿ

‘ಪುಷ್ಪ’ ಚಿತ್ರದ ಒಂದೇ ಹಾಡಿನಲ್ಲಿ ಡ್ಯಾನ್ಸ್​ ಮಾಡಲು 2 ಕೋಟಿ ರೂ. ಸಂಬಳ ಕೇಳಿದ ನೋರಾ ಫತೇಹಿ

Published On - 10:49 am, Thu, 7 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ