AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sindagi By Election Winner: ಸಿಂದಗಿ ಅಸೆಂಬ್ಲಿ ಗದ್ದುಗೆ ಬಿಜೆಪಿಗೆ, ರಮೇಶ ಭೂಸನೂರ ಜಯಭೇರಿ- ಫಲಿತಾಂಶ ಅಧಿಕೃತ ಘೋಷಣೆ ಬಾಕಿ

Ramesh Bhusanur: ನಿರಂತರವಾಗಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ರಮೇಶ ಭೂಸನೂರ ಅವರು ಪ್ರತಿ ಹಂತದ ಮತ ಎಣಿಕೆಯಲ್ಲೂ ಮತ ಅಂತರವನ್ನು ಹಿಗ್ಗಿಸಿಕೊಳ್ಳುತ್ತಾ ಮುನ್ನಡೆದರು.

Sindagi By Election Winner: ಸಿಂದಗಿ ಅಸೆಂಬ್ಲಿ ಗದ್ದುಗೆ ಬಿಜೆಪಿಗೆ, ರಮೇಶ ಭೂಸನೂರ ಜಯಭೇರಿ- ಫಲಿತಾಂಶ ಅಧಿಕೃತ ಘೋಷಣೆ ಬಾಕಿ
ಸಿಂದಗಿ ಅಸೆಂಬ್ಲಿ ಗದ್ದಿಗೆ ಆಡಳಿತಾರೂಢ ಬಿಜೆಪಿಗೆ, ರಮೇಶ ಭೂಸನೂರ ಜಯಭೇರಿ
TV9 Web
| Updated By: ಸಾಧು ಶ್ರೀನಾಥ್​|

Updated on:Nov 02, 2021 | 6:38 PM

Share

ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಜಯಭೇರಿ ಬಾರಿಸಿದ್ದಾರೆ, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. 63 ವರ್ಷದ ರಮೇಶ್ ಭೂಸನೂರ (Bhusanur Ramesh Balappa) ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಠೇವಣಿಯನ್ನೂ ವಾಪಸ್​ ಗಳಿಸದೆ, ಸೋಲನ್ನೊಪ್ಪಿದ್ದಾರೆ. ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಫಲಿತಾಂಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಸಮಾಧಾನಕರ ಅಂತರದಲ್ಲಿ ಗೆದ್ದಿದ್ದಾರೆ. ಕರ್ನಾಟಕ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆದಿತ್ತು.

ನಿರಂತರವಾಗಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ರಮೇಶ ಭೂಸನೂರ ಅವರು ಪ್ರತಿ ಹಂತದ ಮತ ಎಣಿಕೆಯಲ್ಲೂ ಮತ ಅಂತರವನ್ನು ಹಿಗ್ಗಿಸಿಕೊಳ್ಳುತ್ತಾ ಮುನ್ನಡೆದರು. ರಮೇಶ ಭೂಸನೂರ ಪಡೆದಿರುವ ಮತಗಳು 93,380. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಬಹುತೇಕ ಖಚಿತವಾಗಿದ್ದು, ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ.

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು; ಗಳಿಸಿದ ಮತ ವಿವರ 30,836 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಜಯ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರಗೆ 93,380 ಮತ. ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಮನಗೂಳಿಗೆ 62,292 ಮತ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,321 ಮತ ದೊರೆತಿದೆ.

ಇದನ್ನೂ ಓದಿ:

ಸಿಂದಗಿಯಲ್ಲಿ ಬಿಜೆಪಿ ರಮೇಶ ಭೂಸನೂರ ಜಯಭೇರಿ: ಬಿಜೆಪಿ ಗೆಲುವಿಗೆ ಕಾರಣಗಳು- ಕಾಂಗ್ರೆಸ್ ಹಿನ್ನಡೆಗೆ ಕಾರಣ ಹೀಗಿದೆ

ByElection Sindagiಯಲ್ಲಿ BJP ಅಭ್ಯರ್ಥಿ ರಮೇಶ್​ ಭರ್ಜರಿ ಗೆಲುವು, ಬೆಂಬಲಿಗರ ಸಂಭ್ರಮ |Tv9kannada (bjp candidate Bhusanur Ramesh Balappa win sindagi assembly by election in karnataka)

Published On - 11:46 am, Tue, 2 November 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ