AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಹೋರಾಟ: ಯತ್ನಾಳ್​ಗೆ ಕರೆ ಮಾಡಿ ಗುಡ್​ನ್ಯೂಸ್ ಕೊಟ್ಟ ಬಿಜೆಪಿ ಹೈಕಮಾಂಡ್

ಮಕರ ಸಂಕ್ರಾಂತಿಯಂದೇ ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕರೆ ಮಾಡಿ ಸಿಹಿ ಸುದ್ದಿ ಕೊಟ್ಟಿದೆ. ಹೈಕಮಾಂಡ್ ಜೊತೆಗಿನ ಮಾತುಕತೆಯನ್ನು ಯತ್ನಾಳ್ ಮಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಪಂಚಮಸಾಲಿ ಹೋರಾಟ: ಯತ್ನಾಳ್​ಗೆ ಕರೆ ಮಾಡಿ ಗುಡ್​ನ್ಯೂಸ್ ಕೊಟ್ಟ ಬಿಜೆಪಿ ಹೈಕಮಾಂಡ್
ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on: Jan 15, 2023 | 3:56 PM

Share

ವಿಜಯಪುರ: ಒಂದೆಡೆ 2ಎ ಮೀಸಲಾತಿಗೆ ಪಂಚಮಸಾಲಿ ಹೋರಾಟದ (panchamasali reservation Protest) ಕಿಚ್ಚು ಜೋರಾಗುತ್ತಿದ್ದರೆ, ಮತ್ತೊಂದೆಡೆ ಇದೇ ವಿಚಾರಕ್ಕೆ ಸಂಬಂಧ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹಾಗೂ ಸಚಿವ ಮುರುಗೇಶ್ ನಿರಾಣಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದರ ಮಧ್ಯೆ ಬಿಜೆಪಿ ಹೈಕಮಾಂಡ್​, ಯತ್ನಾಳ್​ಗೆ ಕರೆ ಮಾಡಿ ಗುಡ್​ನ್ಯೂಸ್​ ಕೊಟ್ಟಿದೆ. ಈ ಬಗ್ಗೆ  ಸ್ವತಃ ಯತ್ನಾಳ್ ಅವರೇ ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jaya Mruthyunjaya Swami: ಪಂಚಮಸಾಲಿ ಸಮುದಾಯದ ಹೋರಾಟ ಶಿಗ್ಗಾಂವಿ ಸಿಎಂ ಮನೆಯಿಂದ ಬೆಂಗಳೂರಿಗೆ ಶಿಫ್ಟ್,

ಹೈಕಮಾಂಡ್​ ಕರೆ ಮಾಡಿರುವುದರ ಬಗ್ಗೆ ವಿಜಯಪುರದಲ್ಲಿಂದು(ಜ.15) ಮಾಧ್ಯಮಗಳೊಂದಿಗೆ ಹಂಚಿಕೊಂಡ ಯತ್ನಾಳ್, ಮೀಸಲಾತಿ ವಿಚಾರವಾಗಿ ಸಭೆ ನಡೆಸುವುದಾಗಿ ವರಿಷ್ಠರು ಹೇಳಿದ್ದಾರೆ. ನಮ್ಮ ಪಕ್ಷದ ವರಿಷ್ಠರು ಬೆಳಗ್ಗೆ ಕರೆ ಮಾಡಿ ಸಭೆ ಬಗ್ಗೆ ಹೇಳಿದ್ದಾರೆ. ಮಕರ ಸಂಕ್ರಮಣದ ಉತ್ತರಾಯಣದ ಶುಭ ಪ್ರಸಂಗದಲ್ಲಿ ನಿಲುವು ತೆಗೆದುಕೊಂಡಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆಯ ಪ್ರತಿಫಲ. ಆದಷ್ಟು ಬೇಗ ಶ್ರೀಗಳ ನೇತೃತ್ವದ ಕೇಂದ್ರ ನಾಯಕರ ಭೇಟಿಯಾಗುತ್ತೇವೆ. ಶೀಘ್ರವೇ ಕೇಂದ್ರ ಸರ್ಕಾರ ಒಳ್ಳೆಯ ಸುದ್ದಿ ಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಕ್ರಮಣ ಹಬ್ಬದ ಸಂಭ್ರಮ ಇದೆ. ಇಂದು ಒಳ್ಳೆಯ ಸುದ್ದಿಗಳನ್ನು ಮಾತನಾಡೋ ಸಂಕ್ರಮಣ. ಬಹಳ ಸಂತೋಷವಾಗಿದೆ. ನಮ್ಮ ಪಕ್ಷದ ಹೈಕಮಾಂಡ್ ಬೆಳಿಗ್ಗೆ ಕರೆ ಮಾಡಿ ಮೀಸಲಾತಿ ವಿಚಾರದಲ್ಲಿ ಸಭೆ ಕರೆಯೋದಾಗಿ ಹೇಳಿದ್ದಾರೆ. ನಿಮ್ಮ ಬೇಡಿಕೆ ಈಡೇರಿಸಲು ಹೈಕಮಾಂಡ್ ಅಸ್ತು ಎಂದಿದೆ ಎಂದು ಹೇಳಿದರು.

ಚಿಲ್ಲರೇ ವ್ಯಕ್ತಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಬಾರದು ಎಂದು ಹೇಳಿದ್ದಾರೆ. ಹಾಗಾಗಿ ಚಿಲ್ಲರೆ ವ್ಯಕ್ತಿಗಳು, ಸಂಸ್ಕಾರ ಇಲ್ಲದ ವ್ಯಕ್ತಿಗಳ ಬಗ್ಗೆ ಇಂದು ಮಾತಾಡಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಗಮನಿಸಿ ಹೇಳಿದ್ದಾರೆ. ​ಹಬ್ಬವಿರುವ ಕಾರಣ ಒಳ್ಳೆಯದ್ದನ್ನು ಮಾತನಾಡೋಣ ಎಂದರು.

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ