AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ದೇಶವಿರೋಧಿ ಹುಳುಗಳು ಈಗ ಹೊರಗೆ ಬರ್ತಿವೆ: ಹಿಜಾಬ್ ವಿವಾದ ಕುರಿತು ಬಸನಗೌಡ ಯತ್ನಾಳ್

Basanagouda Yatnal: ಕಾಲೇಜು ಆವರಣದಲ್ಲಿ ಅಲ್ಲಾಹು ಅಕ್ಬರ್ ಎಂದ ವಿದ್ಯಾರ್ಥಿನಿಗೆ ಬಹುಮಾನ ಘೋಷಣೆ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಯತ್ನಾಳ ಆಗ್ರಹಿಸಿದರು.

ಎಲ್ಲ ದೇಶವಿರೋಧಿ ಹುಳುಗಳು ಈಗ ಹೊರಗೆ ಬರ್ತಿವೆ: ಹಿಜಾಬ್ ವಿವಾದ ಕುರಿತು ಬಸನಗೌಡ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 10, 2022 | 4:06 PM

Share

ವಿಜಯಪುರ: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿರುವ ಹಿಜಾಬ್-ಕೇಸರಿಶಾಲು ವಿವಾದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಹಾಗೂ ಶಾಸಕ ಬಸನಗೌಡ ಯತ್ನಾಳ ಹಿಜಾಬ್ ವಿವಾದದ ಬಳಿಕ ಯಾವ ಬೆದರಿಕೆ ಕರೆಗಳೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಂಡ್ಯದ ಕಾಲೇಜು ಆವರಣದಲ್ಲಿ ಅಲ್ಲಾಹು ಅಕ್ಬರ್ ಎಂದ ವಿದ್ಯಾರ್ಥಿನಿಗೆ ಬಹುಮಾನ ಘೋಷಣೆ ವಿಚಾರವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. ಇದರ ಹಿಂದೆ ಯಾರಿದ್ದಾರೆ, ಯಾವ ಘಟನೆ ಇದೆ ಹಾಗೂ ಬಹುಮಾನ ಘೋಷಣೆಗಳ ಬಗ್ಗೆ ಸಮಗ್ರ ತನಿಖೆ ಆಗಬೇಕು. ಗೃಹ ಇಲಾಖೆಯು ಈ ಪ್ರಕಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿನಿಗೆ ಇಮ್ರಾನ್ ಪಾಷಾ ₹1 ಲಕ್ಷದ ಚೆಕ್ ಕೊಟ್ಟ ವಿಚಾರ ಪ್ರತಿಕ್ರಿಯಿಸಿದ ಅವರು, ಟಿಂಚರ್ ಹಾಕಿದಾಗ ಗಾಯದಿಂದ ಹುಳುಗಳು ಹೊರಗೆ ಬಂದಂತೆ ಎಲ್ಲ ದೇಶ ವಿರೋಧಿ ಹುಳುಗಳು ಈಗ ಹೊರಗೆ ಬೀಳುತ್ತಿವೆ ಎಂದು ಹೇಳಿದರು. ಯತ್ನಾಳ್‌ ಮೇಲೆ ಹಲ್ಲೆ ನಡೆಸಲಾಗುವುದು ಎಂಬ ಬೆದರಿಕೆ ಕುರಿತು ಪ್ರಸ್ತಾಪಿಸಿದ ಅವರು, ಚಿಲ್ಲರೆ ಜನರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ವಿಚಾರಗಳನ್ನು ಗಮನಿಸುತ್ತಿದೆ. ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುತ್ತದೆ. ಇಂಥವರು ಬಹಳ ಜನರಿದ್ದಾರೆ ಎಂದರು.

ಕಾಂಗ್ರೆಸ್​ನಿಂದ ಎಂದಿಗೂ ದೇಶದ ರಕ್ಷಣೆ ಸಾಧ್ಯವಿಲ್ಲ. ಅವರು ಸದಾ ತುಕ್​ಡೆ ತುಕ್​ಡೆ ಗ್ಯಾಂಗ್​ಗಳಿಗೆ ಬೆಂಬಲ ಕೊಡುತ್ತಾರೆ. ಈ ಗ್ಯಾಂಗ್​ಗಳು ಪಾಕಿಸ್ತಾನದ ಐಎಸ್‌ಐ ಜೊತೆಗೆ ಸಂಪರ್ಕ ಹೊಂದಿವೆ. ಹಿಜಾಬ್ ವಿವಾದ ಬಳಿಕ ಇವರ ಬಣ್ಣ ಬಯಲಾಗುತ್ತಿದೆ. ಹಿಜಾಬ್ ಗದ್ದಲ ಎಬ್ಬಿಸಿದವರು ದೇಶಕ್ಕೆ ಒಂದಿಲ್ಲ ಒಂದು ದಿನ ಮಾರಕ ಆಗುತ್ತಾರೆ. ಇಂಥವರನ್ನು ಬಗ್ಗು ಬಡಿಯಲೇ ಬೇಕು. ಈ ವಿವಾದದಲ್ಲಿ ಇರುವವರು ಪಡೆಯುತ್ತಿರುವ ಸರ್ಕಾರಿ ಸೌಲಭ್ಯ ಕಟ್ ಮಾಡಬೇಕು ಎಂದರು.

ಗೃಹ ಇಲಾಖೆ ಹಲವು ಮಾಹಿತಿಗಳನ್ನು ಕಲಲೆಹಾಕಿದೆ. ಹೈಕೋರ್ಟ್ ತೀರ್ಮಾನದ ಬಳಿಕ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು. ಹಿಜಾಬ್ ಪರ ವಿದ್ಯಾರ್ಥಿನಿಯರಿಗೆ ಟ್ರೇನಿಂಗ್ ನೀಡಿದ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಕುರಿತು ಉಡುಪಿ ಶಾಸಕರು ಸಾಕಷ್ಟು ವಿಷಯ ಬಹಿರಂಗಪಡಿಸಿದ್ದಾರೆ. ಇಷ್ಟು ದಿನ ಯುವತಿಯರು ಹಿಜಾಬ್ ಹಾಕುತ್ತಿರಲಿಲ್ಲ. ಶಾಸಕರು ಸಹ ದಾಖಲೆಗಳನ್ನು ಒದಗಿಸಿದ್ದಾರೆ ಎಂದರು.

ಕರ್ನಾಟಕದ ಕರಾವಳಿ ಭಾಗದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಸುವ ಸಂಘಟನೆಗಳು ಚುರುಕಾಗುತ್ತಿವೆ. ವ್ಯವಸ್ಥಿತವಾಗಿ ಟ್ರೇನಿಂಗ್ ಕೊಡಲಾಗುತ್ತಿದೆ. ಹೀಗಾಗಿ ಈ ಪ್ರದೇಶಕ್ಕೆ ಗೃಹ ಇಲಾಖೆಯು ಅತ್ಯುತ್ತಮ ಅಧಿಕಾರಿಗಳನ್ನು ನೇಮಿಸಲು ಮುಂದಾಗಿದೆ ಎಂದು ಹೇಳಿದರು.

ಅಧಿಕಾರಕ್ಕಾಗಿ ಗುರುಪೀಠ ಬಳಕೆ: ನಿರಾಣಿ ವಿರುದ್ಧ ವಾಗ್ದಾಳಿ

ಸದಾ ಅಧಿಕಾರದ ಚಿಂತೆ ಮಾಡುವ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರ ಸಿಗದೆ ಇದ್ದಾಗ ಧಾರ್ಮಿಕ ಪೀಠಗಳನ್ನು ಬಳಸಿಕೊಳ್ಳುತ್ತಾರೆ. ಇಡೀ ಸಮುದಾಯವನ್ನು ತಮ್ಮ ಕಪಿಮುಷ್ಟಿಯಲ್ಲಿ ಇರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ಈಗ ಆ ಕಾಲ ಬದಲಾಗಿದೆ, ಜನ ಜಾಗೃತರಾಗಿದ್ದಾರೆ. ಮುಂದಿನ ದಿನಗಳಲ್ಲಿ ಜನರು ಇವರಿಗೆ ಸರಿಯಾಗಿ ಉತ್ತರ ಕೊಡುತ್ತಾರೆ ಎಂದರು.

ಇದನ್ನೂ ಓದಿ: ಮತಕ್ರೋಢೀಕರಣಕ್ಕಾಗಿ ಹಿಜಾಬ್ ವಿವಾದ, ಭ್ರಷ್ಟಾಚಾರ ಮುಚ್ಚಿಟ್ಟುಕೊಳ್ಳಲು ಗಲಾಟೆ: ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಇದನ್ನೂ ಓದಿ: ಹಿಜಾಬ್ V/S ಕೇಸರಿ ಶಾಲು ಸಂಘರ್ಷ! ಹೊರಗಡೆಯವರು ಪ್ರಚೋದನೆ ನೀಡುತ್ತಿದ್ದಾರೆ; ಸಿಎಂ ಬೊಮ್ಮಾಯಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ