AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕೇಂದ್ರೀಯ ಶಿಸ್ತುಸಮಿತಿ ನೋಟಿಸ್ ವಿಚಾರ: ವದಂತಿ ಹಬ್ಬಿಸಿದ್ದಾರೆ ಎಂದ ಶಾಸಕ ಯತ್ನಾಳ್​​

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಮತ್ತು ಬಿಜೆಪಿ ಸಚಿವ ಮುರುಗೇಶ್​ ನಿರಾಣಿ ನಡುವೆ ವಾಕ್​ ಸಮರ ನಡೆಯುತ್ತಿರುವುದು ಗೊತ್ತಿರುವ ವಿಚಾರ ಆದರೆ ಈ ವಿಚಾರವಾಗಿ ಬಿಜೆಪಿ ಕೇಂದ್ರೀಯ ಶಿಸ್ತುಸಮಿತಿ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗುತ್ತಿದೆ.

ಬಿಜೆಪಿ ಕೇಂದ್ರೀಯ ಶಿಸ್ತುಸಮಿತಿ ನೋಟಿಸ್ ವಿಚಾರ: ವದಂತಿ ಹಬ್ಬಿಸಿದ್ದಾರೆ ಎಂದ ಶಾಸಕ ಯತ್ನಾಳ್​​
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on:Jan 16, 2023 | 7:44 PM

Share

ವಿಜಯಪುರ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಬಿಜೆಪಿ ಸಚಿವ ಮುರುಗೇಶ್​ ನಿರಾಣಿ (Murugesh Nirani) ನಡುವಿನ ವಾಕ್​ ಸಮರ ತಾರಕಕ್ಕೇರಿತ್ತು. ಇಬ್ಬರೂ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು. ಇದು ಬಿಜೆಪಿ ಸರ್ಕಾರಕ್ಕೂ ಮುಜುಗುರ ಉಂಟುಮಾಡಿತ್ತು. ಈ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಕೇಂದ್ರೀಯ ಶಿಸ್ತುಸಮಿತಿ ನೋಟಿಸ್ ಜಾರಿ ಮಾಡಲಾಗಿದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಜಿಲ್ಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ನೋಟಿಸ್ ಬಂದಿಲ್ಲ, ಸುಮ್ಮನೇ ವದಂತಿ ಹಬ್ಬಿಸಿದ್ದಾರೆ. ನನಗೆ ನೋಟಿಸ್​ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು ರಾಜಕೀಯ ಮುಂದುವರಿಸುವವರ ಬಗ್ಗೆ ಮಾತನಾಡಿದ್ದೇನೆ. ನನಗೆ ನೋಟಿಸ್​ ನೀಡಿದ್ದರೆ ಇಷ್ಟೊತ್ತಿಗೆ ಬಂದಿರುತ್ತಿತ್ತು ಎಂದು ಹೇಳಿದರು.

​ಇನ್ನೂ ಯಾಕೆ ನೋಟಿಸ್​ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ. ಇದೆಲ್ಲವೂ ರಾಜಕೀಯ ವಿರೋಧಿಗಳ ಷಡ್ಯಂತ್ರ ಅಷ್ಟೇ. ವಾಜಪೇಯಿ ಪ್ರಧಾನಿ ಆಗಿದ್ದಾಗಲೂ ನನಗೆ ನೋಟಿಸ್ ನೀಡಿದ್ದರು. ನೋಟಿಸ್ ನೀಡಿದ ಮೂರೇ ತಿಂಗಳಲ್ಲಿ ನಾನು ಕೇಂದ್ರ ಸಚಿವನಾಗಿದ್ದೆ ಎಂದು ಶಾಸಕ ಯತ್ನಾಳ್ ತಿಳಿಸಿದರು.

ಇದನ್ನೂ ಓದಿ: ನಾಲಿಗೆ ಹರಿದು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ : ಯತ್ನಾಳ್​ಗೆ, ಮುರುಗೇಶ್ ನಿರಾಣಿ ಖಡಕ್ ಎಚ್ಚರಿಕೆ

ನಾನು ಯಾವುದೇ ನೋಟಿಸ್​ಗೆ ಅಂಜುವ ಮಗನಲ್ಲ

ನಾನು ಯಾವುದೇ ನೋಟಿಸ್​ಗೆ ಅಂಜುವ ಮಗನಲ್ಲ. ನಿನ್ನೆ ಭಾರತೀಯ ಜನತಾ ಪಕ್ಷದ ವರಿಷ್ಠರೇ ನನ್ನ ಜತೆ ಮಾತಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ದೊಡ್ಡ ನಿರ್ಣಯ ಸಾಧ್ಯತೆಯಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಬಹಳಷ್ಟು ಬದಲಾವಣೆ ಸಾಧ್ಯತೆಯಿದೆ. ನನ್ನ ಪರವಾಗಿ ಒಳ್ಳೆಯ ನಿರ್ಣಯ ಆಗಲಿದೆ. ವಿಜಯಪುರಕ್ಕೆ ಬಂದಿದ್ದಾಗ ಅರುಣ್ ಸಿಂಗ್​ ನನ್ನ ಜತೆ ಮಾತಾಡಿದ್ದಾರೆ. ಅವರ ಬಳಿ ನಾನು ಮುಖ್ಯಮಂತ್ರಿ ಅಥವಾ ಮಂತ್ರಿಗಿರಿ ಕೇಳಿಲ್ಲ. ಕರ್ನಾಟಕದಲ್ಲಿ ನಾನು ಮಂತ್ರಿಗಿಂತಲೂ ಪವರ್​ಫುಲ್ ಆಗಿದ್ದೀನಿ. ಎಲ್ಲಾ ಮಂತ್ರಿಗಳು ನನ್ನ ಗೆಳೆಯರಿದ್ದಾರೆ, ನನ್ನ ಮಾತು ಕೇಳುತ್ತಾರೆ. ನಾನು ಕೂಡ ಸಿಎಂ ಇದ್ದಂತೆ, ಶಾಸಕನಾಗಿಯೇ ಸಚಿವರ ಮೇಲಿದ್ದೇನೆ ಎಂದರು.

ಅವರ ಅಪ್ಪಂಗೆ ಹುಟ್ಟಿದ್ರೆ ಸಿಡಿ ಬಿಡುಗಡೆ ಮಾಡಲಿ

ತಾಕತ್ತಿದ್ದರೆ ನಿಜವಾಗಿಯೂ ಅವರ ಅಪ್ಪಂಗೆ ಹುಟ್ಟಿದ್ದರೆ ಸಿಡಿ ಬಿಡುಗಡೆ ಮಾಡಲಿ ಎಂದು ಈ ಹಿಂದೆ ಯತ್ನಾಳ ಸವಾಲ್ ಹಾಕಿದ್ದರು. ನಮ್ಮ ಬಳಿಯೂ ಭಂಡಾರ ಇದೆ. ಮುರುಗೇಶ್ ನಿರಾಣಿ ಕೂಡ ಸಿಡಿ ವಿಚಾರದಲ್ಲಿ ಸ್ಟೇ ತಂದಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್​​ನಲ್ಲಿ ಸಿಡಿ ಫ್ಯಾಕ್ಟರಿ ಇವೆ ಅಂತಾ ಹೇಳಿದ್ದೇನೆ. ಯಾರದ್ದೋ ಸಿಡಿ ಇಟ್ಟುಕೊಂಡು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಸಿಡಿ ಇಟ್ಟುಕೊಂಡೇ ಮಂತ್ರಿ ಆಗ್ತಾರೆ, ನಾನು ಅಂತಹ ಕೆಲಸ ಮಾಡಲ್ಲ. ಇವೆಲ್ಲಾ ಮೀಸಲಾತಿ ಹೋರಾಟದ ಮೇಲೆ ಪರಿಣಾಮ ಬೀರುವುದಿಲ್ಲ. ಯಾರು ಒಳ್ಳೆಯವರು, ಕೆಟ್ಟವರೆಂದು ಸಮಾಜದ ಜನರಿಗೆ ಗೊತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದರು.

ಇದನ್ನೂ ಓದಿ: ನನ್ನನ್ನು ಸೋಲಿಸಲು ನಿರಾಣಿ ಕಳಿಸುವ ದುಡ್ಡು ತೆಗೆದುಕೊಂಡು ವಿಜಯಪುರದ ಮತದಾರ ನನಗೆ ವೋಟು ಹಾಕುತ್ತಾನೆ: ಬಸನಗೌಡ ಯತ್ನಾಳ್

ಜನರು ನನಗೆ ಈತನನ್ನು ಕೇಳಿ ಮತ ಹಾಕುತ್ತಾರಾ?

ಮುಂದಿನ 2023ರ ಚುನಾವಣೆಯಲ್ಲಿ ಯತ್ನಾಳಗೆ ಟಿಕೆಟ್ ಸಿಗುತ್ತಾ ಇಲ್ವೋ ಎಂದ ಸಚಿವ ನಿರಾಣಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಜನರು ನನಗೆ ಈತನನ್ನು ಕೇಳಿ ಮತ ಹಾಕುತ್ತಾರಾ? ಆತನಿಗೆ ಬೀಳಗಿಯಲ್ಲಿ ಮತ ಹಾಕುತ್ತಾರಾ ಎಂದು ನೋಡಿಕೊಳ್ಳಲಿ. ಎಷ್ಟು ಜನ ಅಣ್ಣ ತಮ್ಮಂದಿರರು ಚುನಾವಣೆಗೆ ಕಾಂಗ್ರೆಸ್​, ಜೆಡಿಎಸ್​​ನಿಂದ ನಿಲ್ಲಲಿದ್ದಾರೆ ಎಂಬುದನ್ನ ನಿರಾಣಿ ಮೊದಲು ಹೇಳಲಿ. ನಮ್ಮ ಮನೆಯಲ್ಲಿ ನಾನೊಬ್ಬನೇ ಚುನಾವಣೆಗೆ ನಿಲ್ಲುತ್ತೇನೆ ಎಂದು ನೇರವಾಗಿ ಮುರಗೇಶ ನಿರಾಣಿಗೆ ಯತ್ನಾಳ ಎಚ್ಚರಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:26 pm, Mon, 16 January 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​