AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು: ಶಾಸಕ‌ ಬಸನಗೌಡ ಪಾಟೀಲ್ ಯತ್ನಾಳ್

ಅಲ್ಪ ಸಂಖ್ಯಾತ ಹಾಗೂ 2ಎ ಎರಡೆರಡುವ ಮೀಸಲಾತಿ ಲಾಭವನ್ನು ಮುಸ್ಲೀಂ ಸಮುದಾಯದವರು ಪಡೆಯುತ್ತಿದ್ದಾರೆ. 2ಎ ಮೀಸಲಾತಿಯಿಂದ ತೆಗೆದುಹಾಕಲು ಎಲ್ಲ ತಯಾರಿ ನಡೆದಿದೆ.

ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು: ಶಾಸಕ‌ ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ಶಾಸಕ ಯತ್ನಾಳ
TV9 Web
| Edited By: |

Updated on: Oct 10, 2022 | 5:47 PM

Share

ವಿಜಯಪುರ: ಬ್ರಾಹ್ಮಣ ಸಮುದಾಯದವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಸಿಗಬೇಕು. ಜನಸಂಖ್ಯೆಯಲ್ಲಿ ಬ್ರಾಹ್ಮಣರು ಕೇವಲ ಶೇಕಡಾ 2ರಿಂದ 3ರಷ್ಟಿದ್ದಾರೆ. ದೇಶದಲ್ಲಿ ನಿಜವಾದ ಅಲ್ಪಸಂಖ್ಯಾತ ಸಮುದಾಯ ಅಂದರೆ ಬ್ರಾಹ್ಮಣರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಅಲ್ಪಸಂಖ್ಯಾತ ಪಟ್ಟಿಯಲ್ಲಿ ಬ್ರಾಹ್ಮಣರನ್ನು ಸೇರಿಸಬೇಕು. ಮುಸ್ಲಿಂ ಸಮುದಾಯದವರು ಅಲ್ಪಸಂಖ್ಯಾತರು ಅಲ್ಲವೇ ಅಲ್ಲ. ಒಂದು ಜನಾಂಗದಷ್ಟಿರುವ ಮುಸ್ಲಿಮರು ಹೇಗೆ ಅಲ್ಪ ಸಂಖ್ಯಾತರಾಗುತ್ತಾರೆ. ದೇಶದ್ರೋಹಿ ಕೆಲಸ ಮತ್ತು ಪಾಕಿಸ್ತಾನದ ಪರ ಅವರು ಮಾತನಾಡುತ್ತಾರೆ. ಅಂಥವರಿಗೆ ಮೀಸಲಾತಿ ಬೇಕು ಅಂದರೆ ಹೇಗೆ ಎಂದರು. ಬಹಳ ಸೌಲಭ್ಯ ಬೇಕಿದ್ದರೆ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಬಹುದು ಎಂದು ಹೇಳಿದರು.

ಮುಸ್ಲಿಮರಿಗೆ ನೀಡಿರುವ 2ಎ ಮೀಸಲಾತಿ ತೆಗೆದು ಹಾಕಬೇಕು ಎಂಬ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ಬೆಂಬಲಿಸಿದ ಯತ್ನಾಳ್

ಅಲ್ಪ ಸಂಖ್ಯಾತ ಹಾಗೂ 2ಎ ಎರಡೆರಡುವ ಮೀಸಲಾತಿ ಲಾಭವನ್ನು ಮುಸ್ಲೀಂ ಸಮುದಾಯದವರು ಪಡೆಯುತ್ತಿದ್ದಾರೆ. 2ಎ ಮೀಸಲಾತಿಯಿಂದ ತೆಗೆದುಹಾಕಲು ಎಲ್ಲ ತಯಾರಿ ನಡೆದಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆಯುತ್ತಿವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಬೆಲ್ಲದ್ ಮಾತಿನಲ್ಲಿ ಸತ್ಯವಿದೆ. ಮುಸ್ಲಿಮರಿಗೆ ನೀಡಿರುವ 2ಎ ಮೀಸಲಾತಿ ತೆಗೆದು ಹಾಕಬೇಕು ಎಂಬ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಹೇಳಿಕೆಗೆ ಯತ್ನಾಳ್ ಬೆಂಬಲಿಸಿದರು. ನಾವು ಕೂಡ ಪುನರ್ ಪರಿಶೀಲನೆಗೆ ಮುಖ್ಯಮಂತ್ರಿಗಳಿಗೆ ಹೇಳಿದ್ದೇವೆ. ಅವರನ್ನು ತೆಗೆದು ಹಿಂದುಳಿದವರಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂದು ಹೇಳಿದರು.

ಸಿಎಂ ಜತೆ ಚರ್ಚೆಯಾಗಿದೆ, ಪರಿವಾರದಿಂದಲೂ ಚರ್ಚೆ ಆಗಿದೆ. ಒಂದು ಸಮುದಾಯ 2 ಕಡೆ ಲಾಭ ಪಡೆಯೋದನ್ನು ತಡೆಯಬೇಕು. 2 ಕಡೆ ಲಾಭ ಪಡೆದು ದೇಶವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಾರೆ. ಆದಷ್ಟು ಬೇಗನೆ ಸರ್ಕಾರ ಕ್ರಮ ವಹಿಸಲಿದೆ ಎಂದು ಶಾಸಕ ಯತ್ನಾಳ್ ಆಗ್ರಹಿಸಿದರು.

ಬಿಜೆಪಿಯಲ್ಲಿ ಸಿಎಂ ಆಗಲು 2500 ಕೋಟಿ ರೂ. ನೀಡಬೇಕು!

ಬಿಜೆಪಿಯಲ್ಲಿ ಸಿಎಂ ಆಗಲು 2500 ಕೋಟಿ ರೂಪಾಯಿ ನೀಡಬೇಕು. ಹೀಗಂತಾ ಬಿಜೆಪಿ ಶಾಸಕ ಯತ್ನಾಳ ಈ ಹಿಂದೆ ಹೇಳಿದ್ದಾರೆಂದು ಆಪ್ ಮುಖಂಡ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದರು. ಮುಖ್ಯಮಂತ್ರಿ ಚಂದ್ರ ಆರೋಪಕ್ಕೆ ಯತ್ನಾಳ ತಿರುಗೇಟು ನೀಡಿದ್ದು, ನನ್ನ ಹೇಳಿಕೆ ಮತ್ತೊಮ್ಮೆ ತಿರುಗಿಸಿ ನೋಡಿ. ದೆಹಲಿ ಬೆಂಗಳೂರಿನಲ್ಲಿ ಕೆಲ ದಲ್ಲಾಲಿಗಳು ಇದ್ದಾರೆ. ದಲ್ಲಾಲಿಗಳು ಎಲ್ಲಾ ಪಕ್ಷದಲ್ಲಿದ್ದಾರೆ, ಅವರು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲಾ. ರಾಮದುರ್ಗದಲ್ಲಿ ಕೆಲ ಟಿಕೆಟ್ ಆಕಾಂಕ್ಷಿಗಳಿದ್ದರು. ದೆಹಲಿಯಲ್ಲಿ ಅವರಿವರನ್ನು ಭೇಟಿ ಮಾಡಿಸುತ್ತೇನೆ. 2 ಕೋಟಿ 3 ಕೋಟಿ ಕೊಡಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಕೆಲವರು ನಮಗೆ ಹೇಳಿದ್ದಾರೆ. ದೆಹಲಿ ಬೆಂಗಳೂರಿನವರು ಹೇಳಿದ್ದಾರೆ ಎಂದು ನನಗೆ ರಾಮದುರ್ಗದಲ್ಲಿ ಹೇಳಿದ್ದರು.

ಬಿಜೆಪಿಯಲ್ಲಿ ಅಂಥ ಪದ್ದತಿಯಿಲ್ಲಾ. ಬಿಜೆಪಿಯಲ್ಲಿ ಕಾರ್ಯತರ್ತರಿಂದ ಹಿಡಿದು ದಿಲ್ಲಿಗೆ ನೇರ ಸಂಪರ್ಕವಿದೆ. ನಾನು ಮೋದಿ ಅಮೀತ್ ಶಾ ಹಾಗೂ ನಡ್ಡಾ ಅವರನ್ನು ಭೇಟಿಯಾಗಲು ನೇರವಾಗೊ ಹೋಗುತ್ತೇನೆ. ನನಗೆ ದಲ್ಲಾಲಿಗಳ ಅವಶ್ಯಕತೆಯಿಲ್ಲಾ. ವಿಜಯೇಂದ್ರನ ಮಾತು ಕೇಳಿ ಮತ್ತೇ ಮತ್ತೇ ಅದನ್ನೇ ಕೇಳುತ್ತೀರಿ. ವಿಜಯೇಂದ್ರ ಕೆಲವರಿಗೆ ಏನೋ ಪ್ರಸಾದ ವ್ಯವಸ್ಥೆ ಮಾಡಿರಬೇಕು. ವಿಜಯೇಂದ್ರನ ಮಾತು ಕೇಳಿ ಹೇಗಾದರೂ ಮಾಡಿ ಬಸನಗೌಡನ್ನಾ ಕಂಡಮ್ ಮಾಡಬೇಕು. ಕೇಂದ್ರದವರು 2500 ಕೊಟಿ ಕೇಳಿದ್ದಾರೆಂದು ಹೇಳಿ ನನ್ನ ಝೀರೋ ಮಾಡಬೇಕೆಂದು ಕೆಲ ಮಧ್ಯಮ ವ್ಯವಸ್ಥಿತ ಪ್ರಚಾರ ಮಾಡಿದವು. ಸನ್ಮಾನ್ಯ ಉಪಾಧ್ಯಕ್ಷ ಬಿಜೆಪಿ ವಿಜಯೇಂದ್ರನ ಮುಖಾಂತರ ನನ್ನ ಮುಗಿಸಲು ಕೆಲ ಚಾನಲ್​ಗಳು ಪ್ರಯತ್ನ ಮಾಡಿದವು. ವಿಜಯೇಂದ್ರದ ಕೃಪಾರ್ಶಿವಾದ ಮಾಜಿ ಆಗಿದೆ, ಒಳ್ಳೆಯದನ್ನಾ ಪ್ರಚಾರ ಮಾಡಿ ಎಂದು ಹೇಳಿದರು.

ಶಾಸಕ‌ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್

ಇವತ್ತಿಗೂ ನನಗೆ ದೆಹಲಿಯಿಂದ ಕೆಲವರು ಕರೆ ಮಾಡುತ್ತಾರೆ. ದೆಹಲಿಯ ಓರ್ವ ಸ್ವಾಮೀ ಕರೆ ಮಾಡುತ್ತಾರೆ, 1500 ಕೋಟಿ ಹಣ ಕೂಡಿಸಿ ಎಂದು ಹೇಳುತ್ತಾರೆ. ನಡ್ಡಾ ಸೆ ಬಾತ್ ಕರೇಂಗೆ, ಆಪ್ ದೆಹಲಿ ಆಜಾವೋ. ಪಂದ್ರಾ ಸೌ ಕರೋಡ್ ತಯ್ಯಾರ ಕರ್ಕೆ ರಖೋ ಹಮ್ ಮೋದಿಜಿ ಕೋ ಅಪಾಯಿಂಟ್ಮೆಂಟ್ ದೇಂಗೆ. ಅದನ್ನೆಲ್ಲಾ ನಂಬಬೇಡಿ ಎಂದು ಹೇಳಿದ್ದೇನೆ. 30 ರಿಂದ 40 ವರ್ಷ ಕೆಲಸ ಮಾಡಿದ ನಮ್ಮಂತ ಸೀನಿಯರ್ ಲೀಡರ್​ಗೆ ಈ ಪರಸ್ಥಿತಿ ಇದೆ. ಎಷ್ಟೋ ಮಂದಿ ದೆಹಲಿಯಲ್ಲಿ ರೊಕ್ಕಾ (ಹಣ) ಕೊಟ್ಟು ಬಂದಿದ್ದಾರೆ, ಸಾಚಾ ಇಲ್ಲಾ.

ಬಿಜೆಪಿಯಲ್ಲೇ ಕೆಲವರು ರೊಕ್ಕಾ ಕೊಟ್ಟು ಬಂದವರು ಇದ್ದಾರೆ, ಅವು ಕೊಟ್ಟ ಹಣ ಮುಳುಗಡೆ ಆಗಿವೆ. ಈಗಾ ಅವರು ಮಂತ್ರಿಯೂ ಆಗಿದ್ದಾರೆಂದು ಯತ್ನಾಳ ಬಾಂಬ್ ಸಿಡಿಸಿದರು. ಪರೋಕ್ಷವಾಗಿ ಸ್ಪಕ್ಷೀಯ ಸಚಿವರ ಬಗ್ಗೆ  ಯತ್ನಾಳ ಮಾತನಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?