AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಎಫೆಕ್ಟ್: ಬಸ್​ ಬೇಕೆ ಬೇಕೆಂದ ವಿದ್ಯಾರ್ಥಿಗಳು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ಶಕ್ತಿ ಯೋಜನೆ ಜಾರಿ ಬಳಿಕ ಉಚಿತ ಬಸ್​ ಪ್ರಯಾಣದ ಬಿಸಿ ವಿದ್ಯಾರ್ಥಿಗಳಿಗೆ ತಟ್ಟಿದೆ. ಬಸ್ ಸಮಸ್ಯೆಯಿಂದ ರೋಸಿಹೋದ ವಿದ್ಯಾರ್ಥಿಗಳು ಇಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ಮಾಡಿದ್ದಾರೆ.

ಶಕ್ತಿ ಯೋಜನೆ ಎಫೆಕ್ಟ್: ಬಸ್​ ಬೇಕೆ ಬೇಕೆಂದ ವಿದ್ಯಾರ್ಥಿಗಳು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ
ಹೆದ್ದಾರಿ 52ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jul 05, 2023 | 8:18 PM

Share

ವಿಜಯಪುರ: ಶಕ್ತಿ ಯೋಜನೆ ಜಾರಿ ಬಳಿಕ ಉಚಿತ ಬಸ್​ ಪ್ರಯಾಣದ ಬಿಸಿ ವಿದ್ಯಾರ್ಥಿಗಳಿಗೆ (students) ತಟ್ಟಿದೆ. ಬಸ್ ಸಮಸ್ಯೆಯಿಂದ ರೋಸಿಹೋದ ವಿದ್ಯಾರ್ಥಿಗಳು ಇಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ (Protest) ಮಾಡಿದ್ದಾರೆ. ನಮಗೆ ಸಮರ್ಪಕ ಬಸ್ ಸೇವೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಬೇಕೆ ಬೇಕು ಬಸ್ ಬೇಕು

‘ಬೇಕೆ ಬೇಕು ಬಸ್ ಬೇಕೆಂದು’ ಹೆದ್ದಾರಿ ಮೇಲೆ ಕುಳಿತಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದ್ದಾರೆ.​ ಬಸ್ ಬಾರದೇ ತೊಂದರೆ ಅನುಭವಿಸುತ್ತಿದ್ದೇವೆ. ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲಾ ಎಂದು ವಿದ್ಯಾರ್ಥಿಗಳು ಅಸಮಾಧಾನ ಹೊರ ಹಾಕಿದ್ದಾರೆ.

ವಿದ್ಯಾರ್ಥಿಗಳ ಮನವೊಲಿಕೆಗೆ ಯತ್ನ

ಸ್ಥಳಕ್ಕೆ ಆಗಮಿಸಿದ ಪೊಲೀಸರು, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಬಾರದೆಂದು ಎಚ್ಚರಿಕೆ ನೀಡಿದ್ದಾರೆ. ಆದರೂ ಪೊಲೀಸರ ಎಚ್ಚರಿಕೆಗೆ ಜಗ್ಗದ ವಿದ್ಯಾರ್ಥಿಗಳು, ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ವಾಹನ ಸಂಚಾರ ಬಂದ್ ಮಾಡಿ ಪ್ರತಿಭಟನೆ ಮುಂದುವರೆಸಿದರು. ಬಳಿಕ ವಿಜಯಪುರ ಗ್ರಾಮೀಣ ಪೊಲೀಸರು ವಿದ್ಯಾರ್ಥಿಗಳ ಮನವೊಲಿಕೆಗೆ ಯತ್ನಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಬಸ್ ನೀಡಿದ ಸಾರಿಗೆ ಆಧಿಕಾರಿ

ಒಂದು ಕಡೆ ಬಸ್​ಗಾಗಿ ವಿದ್ಯಾರ್ಥಿಗಳು ಹೆದ್ದಾರಿ ತಡೆದು ಪ್ರತಿಭಟನೆ ಮಾಡುತ್ತಿದ್ದರೆ, ಇನ್ನೊಂದೆಡೆ ಕಳೆದ 9 ವರ್ಷಳಿಂದ ಬಸ್ ಸಮಸ್ಯೆ ಎದುರಿಸುತ್ತಿದ್ದ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಸ್ಯಾಳ ಗ್ರಾಮದ ಆದರ್ಶ ವಿದ್ಯಾಲಯ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಒದಗಿಸಲಾಗಿದೆ. ಬಸ್ ಸೌಲಭ್ಯ ಕಲ್ಪಿಸಿದ ಬಸ್ ಘಟಕದ ವ್ಯವಸ್ಥಾಪಕ ಪಿ ಕೆ ಜಾಧವ ಅವರಿಗೆ ವಿದ್ಯಾರ್ಥಿಗಳಿಂದ ಸನ್ಮಾನ ಮಾಡಲಾಗಿದೆ.

ಕಳೆದ 9 ವರ್ಷಳಿಂದ ವಿದ್ಯಾರ್ಥಿಗಳು ಬಸ್ ಸಮಸ್ಯೆ ಎದುರಿಸುತ್ತಿದ್ದರು. ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಮತ್ತಷ್ಟು ತೊಂದರೆ ಆಗಿತ್ತು. ಈ ಹಿನ್ನಲೆ ಸೂಕ್ತ ಬಸ್ ಸೌಲಭ್ಯಕ್ಕಾಗಿ ಪಿ ಕೆ ಜಾಧವ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಡಿಪೋ ಮ್ಯಾನೇಜರ್​ ಬಸ್ ಸೌಲಭ್ಯ ನೀಡಿದ್ದಾರೆ. ಶಾಲೆಗೆ ಪ್ರತ್ಯೇಕ ಬಸ್ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಂತಸಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ