AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ನಿಷೇಧ ಹೇಳಿಕೆಯೇ ದೊಡ್ಡ ದುರ್ದೈವ: ಸಿಎಂ ಬೊಮ್ಮಾಯಿ

ಪಿಎಫ್​ಐ ಮೇಲಿದ್ದ ಪ್ರಕರಣಗಳನ್ನು ಇವರೇ ಹಿಂಪಡೆದಿದ್ದರು. ಅದನ್ನು ಮರೆಮಾಚಲು ಆರ್​ಎಸ್​ಎಸ್​ ನಿಷೇಧಿಸಿ ಎಂದು ಹೇಳುತ್ತಿದ್ದಾರೆ.

ಆರ್​ಎಸ್​ಎಸ್​ ನಿಷೇಧ ಹೇಳಿಕೆಯೇ ದೊಡ್ಡ ದುರ್ದೈವ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Sep 30, 2022 | 10:31 AM

Share

ವಿಜಯಪುರ: ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯೇ ದೊಡ್ಡ ದುರ್ದೈವ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲಾ ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿರುವ ಅವರು, ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯಬಾರದಿತ್ತು ಎಂದು ಅಭಿಪ್ರಾಯಪಟ್ಟರು. ಪಿಎಫ್​ಐ ಏಕೆ ನಿಷೇಧಿಸಿದ್ರಿ ಎಂದು ಕೇಳಲು ಇವರಿಗೆ ಆಧಾರವಿಲ್ಲವೇ? ಪಿಎಫ್​ಐ ಮೇಲಿದ್ದ ಪ್ರಕರಣಗಳನ್ನು ಇವರೇ ಹಿಂಪಡೆದಿದ್ದರು. ಅದನ್ನು ಮರೆಮಾಚಲು ಆರ್​ಎಸ್​ಎಸ್​ ನಿಷೇಧಿಸಿ ಎಂದು ಹೇಳುತ್ತಿದ್ದಾರೆ. ದೇಶಪ್ರೇಮಿಗಳು ಹಾಗೂ ಬಡವರಿಗೆ ನೆರವಾಗುತ್ತಿರುವ ಸಂಘಟನೆ ಆರ್​ಎಸ್​ಎಸ್​ ಎಂದು ವಿವರಿಸಿದರು. ದೇಶವು ಸಮಸ್ಯೆಗಳಿಗೆ ಸಿಲುಕಿದಾಗ ಆರ್​ಎಸ್​ಎಸ್​ ಹಲವು ರೀತಿಯಲ್ಲಿ ನೆರವಿಗೆ ಬಂದಿದೆ. ದೇಶದಲ್ಲಿ ದೇಶಪ್ರೇಮ ಜಾಗೃತಿ ಮಾಡುತ್ತಿರುವ ಸಂಘಟನೆಯನ್ನು ನಿಷೇಧಿಸಬೇಕು ಎನ್ನುವುದು ದುರ್ದೈವ ಎಂದರು.

ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿಗಳು ಆಲಮಟ್ಟಿ ಜಲಾಶಯಕ್ಕೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಲಿದ್ದಾರೆ. ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಿದರು. ಸೈನಿಕ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಹಾಕಿ ಕ್ರೀಡಾಂಗಣವನ್ನು ಅವರು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೇರಿದಂತೆ ಹಲವು ಸಚಿವರು ಹಾಗೂ ಮುಖಂಡರು ಮುಖ್ಯಮಂತ್ರಿಯ ಜೊತೆಗೆ ಇರುತ್ತಾರೆ.

ಮುಸ್ಲಿಮರನ್ನು ಓಲೈಸುತ್ತಿರುವ ಸಿದ್ದರಾಮಯ್ಯ

ಆರ್​ಎಸ್​ಎಸ್​ ನಿಷೇಧಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಯನ್ನು ಬಲವಾಗಿ ವಿರೋಧಿಸಿರುವ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ, ಗಾಂಧಿ ವಂಶವೇ ಮನಸ್ಸು ಮಾಡಿದರೂ ಆರ್​ಎಸ್​ಎಸ್​ನ ಒಂದು ಕೂದಲು ಅಲ್ಲಾಡಿಸಲು ಆಗಲಿಲ್ಲ. ಮುಸ್ಲಿಮರನ್ನು ತೃಪ್ತಿಪಡಿಸಲು ಸಿದ್ದರಾಮಯ್ಯ ಇಂಥ ಹೇಳಿಕೆ ಕೊಡುತ್ತಿದ್ದಾರೆ. ಆರ್​ಎಸ್​ಎಸ್​ ಸಂಘಟನೆ ಜಗಕ್ಕೆ ಬೆಳಕು ನೀಡುವ ಸೂರ್ಯನಿದ್ದಂತೆ. ಆರ್​ಎಸ್​ಎಸ್​ ಇರದಿದ್ದರೆ ಈ ದೇಶ ಎಲ್ಲಿರುತ್ತಿತ್ತು? ಆರ್​ಎಸ್​ಎಸ್​ನ ದೇಶಭಕ್ತ ಕೂಸು ಭಾರತೀಯ ಜನತಾ ಪಾರ್ಟಿ ಎಂದು ಹೇಳಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ