ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಣೆ, ಸೆ.4ರ ಸಭೆ ಬಳಿಕ ಬರ ತಾಲೂಕುಗಳ ಹೆಸರು ಘೋಷಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ‌ ವಾಡಿಕೆಗಿಂತ ಕಡಿಮೆಯಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯದ ಬರ ಕುರಿತು ಚರ್ಚೆ ಮಾಡಲಾಗಿದೆ. ಜಂಟಿ‌ ಸರ್ವೆ ಮಾಡಲಾಗಿದೆ. 113 ತಾಲೂಗಳಲ್ಲಿ ಬರವಿದೆ. ಈ ಬಗ್ಗೆ ಸಪ್ಟೆಂಬರ್ 4 ರಂದು ಸಭೆ ನಡೆಯಲಿದೆ. ಸಭೆ ಬಳಿಕ ಎಷ್ಟು ತಾಲೂಕುಗಳಲ್ಲಿ ಬರ ಇದೆ ಎಂದು‌ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಜಯಪುರ, ಸೆಪ್ಟೆಂಬರ್​ 02: ‌ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಲಾಲ್​ಬಹದ್ದೂರ್ ಶಾಸ್ತ್ರಿ ಆಣೆಕಟ್ಟಿನ (Alamatti Dam) ಹಿನ್ನೀರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಸೆ.02) ಗಂಗಾ ಪೂಜೆ ನರೆವೇರಿಸಿ, ಬಾಗಿನ ಅಪರ್ಪಿಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇಂದು‌ ನಾನು, ನೀರಾವರಿ ಸಚಿವ ಡಿಕೆ ಶಿವಕುಮಾರ್​ ಹಾಗೂ ಇತರ ಸಚಿವರು, ಸಂಸದರು ಮತ್ತು ಶಾಸಕರು ಕೃಷ್ಣೆಗೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಣೆ ಮಾಡಿದ್ದೇವೆ. ಡ್ಯಾಂ 519.60 ಮೀಟರ್ ಇದ್ದು, 519.55 ಮೀಟರ್ ನೀರು ಸಂಗ್ರಹವಿದೆ ಎಂದರು.

ರಾಜ್ಯದಲ್ಲಿ ಮಳೆ‌ ವಾಡಿಕೆಗಿಂತ ಕಡಿಮೆಯಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯದ ಬರ ಕುರಿತು ಚರ್ಚೆ ಮಾಡಲಾಗಿದೆ. ಜಂಟಿ‌ ಸರ್ವೆ ಮಾಡಲಾಗಿದೆ. 113 ತಾಲೂಗಳಲ್ಲಿ ಬರವಿದೆ. ಈ ಬಗ್ಗೆ ಸಪ್ಟೆಂಬರ್ 4 ರಂದು ಸಭೆ ನಡೆಯಲಿದೆ. ಸಭೆ ಬಳಿಕ ಎಷ್ಟು ತಾಲೂಕುಗಳಲ್ಲಿ ಬರ ಇದೆ ಎಂದು‌ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.

ಬರ ವಿಚರಾದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ‌ ಸಲ್ಲಿಕೆ ಮಾಡಿದ್ದೇನೆ. ಎನ್​ಡಿಆರ್​ಎಫ್​ ನಿಮಯ‌ದ ಪ್ರಕಾರ ಬರ ಪರಿಹಾರ ಸಿಗಲಿದೆ. ಎನ್​ಡಿಆರ್​ಎಫ್ ನಿಯಮ ಬದಲಾವಣೆಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ. ನೀರಾವರಿಗಾಗಿ ಬಜೆಟ್‌ನಲ್ಲಿ 21000 ಕೋಟಿ ರೂ. ಮೀಸಲು ‌ಇಡಲಾಗಿದೆ. ಭದ್ರಾ ಯೋಜನೆಗೆ 5300 ಕೋಟಿ ರೂ. ಕೇಂದ್ರದಿಂದ ಬರಬೇಕು. ಆದರೆ ಕೇಂದ್ರ ಸರ್ಕಾರ ಈವರೆಗೂ ಹಣ ನೀಡಿಲ್ಲ. ಯುಕೆಪಿಗೆ 1200 ಕೋಟಿ ಮಾತ್ರ ಇಡಲಾಗಿದೆ. ಇನ್ನೂ ಹೆಚ್ಚಿನ ಮೊತ್ತ ನೀಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಚಿವರಷ್ಟೇ ಅಲ್ಲ; ಈಗ ಅಧಿಕಾರಿಗಳೂ ಕ್ಯಾರೇ ಅಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಮತ್ತೆ ಪತ್ರ ಬರೆದ ಶಾಸಕ ಬಸವರಾಜ ರಾಯರೆಡ್ಡಿ

ಕೃಷ್ಣಾನದಿ ಜಲ‌‌ವಿವಾದ ಕುರಿತು ತೆಲಂಗಾಣ, ಆಂದ್ರ ಕ್ಯಾತೆ ತೆಗೆದಿದೆ. ಇದೇ‌ ನೆಪದಿಂದ ಗೆಜೆಟ್ ನೋಟಿಫಿಕೇಶನ್ ‌ಮಾಡಿಲ್ಲ. ಹೀಗಾಗಿ ಮೂರನೇ ಹಂತದ ಯೋಜನೆಗೆ ಅಡ್ಡಿಯಾಗಿದೆ. ಇನ್ನು ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿ 5000 ಕ್ಯೂಸೆಕ್ ನೀರು ಬಿಡಲು ಆದೇಶ ಆಗಿದೆ. ತಮಿಳುನಾಡಿ 24000 ಕ್ಯೂಸೆಕ್ ಬಿಡಲು ಒತ್ತಾಯಿಸಿತ್ತು. ಹಾಗೇ ಮಹಾದಾಯಿ, ಮೇಕೆದಾಟು‌ ಯೋಜನೆ ಕಾಮಗಾರಿ ಶೀಘ್ರವೇ ಆರಂಭಿಸುತ್ತೇವೆ ಎಂದು ಭರವಸೆ ನೀಡಿದರು.

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ: ಡಿಕೆ ಶಿವಕುಮಾರ್​

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ. ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಿದೆ. ಅದನ್ನು ನಮ್ಮ ಅಧಿಕಾರಿಗಳ ತಂಡ, ತಾಂತ್ರಿಕ ತಂಡ ನಿರ್ವಹಿಸಲಿದೆ. ಕಂದಾಯ ಸಚಿವರು, ಶಾಸಕರ ಸಭೆ ಕರೆಯಲಾಗಿದೆ. ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆಯ ಬಳಿಕ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಕೃಷ್ಣ ಮೇಲ್ದಂಡೆ ಯೋಜನೆ 3ರ ಭೂಸ್ವಾಧೀನ, ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕುರಿತು ಸಭೆ ನಡೆಸಿದರು. ಕೆಬಿಜೆಎನ್​ಎಲ್​ ಎಂಡಿ ಶಿವಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Sat, 2 September 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us