AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪರಿಂದ 10 ಕೋಟಿ ರೂ ವಸೂಲಿ: ಅಧಿವೇಶನದಲ್ಲಿ ವಚನಾನಂದ ಸ್ವಾಮಿ ಬಣ್ಣ ಬಯಲು ಮಾಡುತ್ತೇನೆ ಎಂದ ಯತ್ನಾಳ್

ವಚನಾನಂದ ಸ್ವಾಮಿ ಮಠದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುವುದಾಗಿ ಯಡಿಯೂರಪ್ಪರಿಂದ 10 ಕೋಟಿ ರೂ. ವಸೂಲಿ ಮಾಡಿದ್ದಾರೆ. ಮಠದ ಹಣದ ವಿಚಾರದಲ್ಲಿ ಬಹಳ ಅವ್ಯವಹಾರ ನಡೆದಿದೆ ಎಂದು

ಯಡಿಯೂರಪ್ಪರಿಂದ 10 ಕೋಟಿ ರೂ ವಸೂಲಿ: ಅಧಿವೇಶನದಲ್ಲಿ ವಚನಾನಂದ ಸ್ವಾಮಿ ಬಣ್ಣ ಬಯಲು ಮಾಡುತ್ತೇನೆ ಎಂದ ಯತ್ನಾಳ್
ವಚನಾನಂದ ಸ್ವಾಮಿ, ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on: Dec 04, 2022 | 3:05 PM

Share

ವಿಜಯಪುರ: ಹರಿಹರ ಪೀಠದ ವಚನಾನಂದ ಸ್ವಾಮಿ (Vachanananda Swamiji) ಮಠದಲ್ಲಿ ಅಭಿವೃದ್ಧಿ ಕಾಮಗಾರಿ ಮಾಡುವುದಾಗಿ ಯಡಿಯೂರಪ್ಪ (Yediyurappa) ರಿಂದ 10 ಕೋಟಿ ರೂ. ವಸೂಲಿ ಮಾಡಿದ್ದಾರೆ. ಮಠದ ಹಣದ ವಿಚಾರದಲ್ಲಿ ಬಹಳ ಅವ್ಯವಹಾರ ನಡೆದಿದ್ದು, ಅಧಿವೇಶನದಲ್ಲಿ ಈ ಕುರಿತು ಚರ್ಚಿಸುತ್ತೇನೆ. ಮುಂದಿನ ದಿನದಲ್ಲಿ ವಚನಾನಂದ ಸ್ವಾಮಿ ಬಣ್ಣ ಬಯಲು ಮಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದರು. ನಗರದಲ್ಲಿ ಅವರು ಮಾತನಾಡಿ, ಹರಿಹರ ಪೀಠದ ವಚನಾನಂದ ಸ್ವಾಮಿ ಬ್ರೋಕರ್ ಆಗಿದ್ದಾರೆ. ಮಂತ್ರಿ ಸ್ಥಾನ ಕೊಡಿಸುವುದಾಗಿ ಹಣ ಕೇಳುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಪಂಚಮಸಾಲಿ ಮೂರನೇ ಪೀಠ ಸ್ಥಾಪನೆ ಮಾಡಿದ್ದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯಾವ ಮಠ ಕಟ್ಟಿದ್ದಾರೆ, ಯಾಕೆ ಕಟ್ಟಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಯಾರು ಮಠ ಕಟ್ಟಿದ್ದರು, ಯಾರು ಬೆನ್ನಿಗೇ ಚೂರು ಹಾಕಿದರು ಎಲ್ಲವೂ ಗೊತ್ತಿದೆ. ಯಾವ ಕಾರಣಕ್ಕೆ ಮಠ ಕಟ್ಟಿದ್ದಾರೆ ಎಂದು ಜನರಿಗೆ ಗೊತ್ತಾಗಿದೆ. ಮಠ ಕಟ್ಟಿದ್ದು ಸಮಾಜದ ಉದ್ದಾರಕ್ಕಲ್ಲ, ಮಂತ್ರಿ ಸ್ಥಾನಕ್ಕಾಗಿ. ಮುಂದಿನ ದಿನಗಳಲ್ಲಿ ಜನರೇ ಅದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಇದನ್ನೂ ಓದಿ: ಕುಕ್ಕರ್​ ಬಾಂಬ್​ ಸ್ಫೋಟದ ಹಿಂದೆ ದೇವಸ್ಥಾನಗಳನ್ನು ನಾಶ ಮಾಡುವ ಹುನ್ನಾರವಿದೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​

ಇನ್ನು ಯತ್ನಾಳ್-ಎಂ.ಬಿ.ಪಾಟೀಲ್ ಒಳ ಒಪ್ಪಂದ ರಾಜಕೀಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್​​ ಪಕ್ಷದಲ್ಲಿ ಎಂ.ಬಿ.ಪಾಟೀಲ್ ಮಾತನಾಡಬೇಕಾಗುತ್ತದೆ. ಅವರಿಗೆ ನನ್ನನ್ನು ಸೋಲಿಸಬೇಕು ಅಂತಾ ಹೇಳಿದ್ದಾರೆ. ಎಂ.ಬಿ.ಪಾಟೀಲ್ ಕಾಂಗ್ರೆಸ್​ನಲ್ಲಿದ್ದಾರೆ, ನಾನು ಬಿಜೆಪಿಯಲ್ಲಿದ್ದೇನೆ. 10 ಜನ ಎಂ.ಬಿ.ಪಾಟೀಲ್ ಬಂದರೂ ಸೋಲಿಸಲು ಸಾಧ್ಯವಿಲ್ಲ. ನನ್ನನ್ನು ಸೋಲಿಸುವುದು ಎಂ.ಬಿ.ಪಾಟೀಲ್ ಅಲ್ಲ ಎಂದು ಯತ್ನಾಳ್ ಕಿಡಿಕಾರಿದರು. ವಿಜಯಪುರ ಕ್ಷೇತ್ರದ ಜನರು ಅದನ್ನು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಇನ್ನು ‘ಯತ್ನಾಳ್-ಎಂ.ಬಿ.ಪಾಟೀಲ್ ಒಂದೇ ನಾಣ್ಯದ ಎರಡು ಮುಖ’ ಇತ್ತೀಚಿಗೆ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ಆರೋಪಿಸಿದ್ದರು.

ಇದನ್ನೂ ಓದಿ: ಕೇವಲ ಬಾಯಿ ಮಾತಲ್ಲಿ ಕಠಿಣ ಕ್ರಮ ಎಂದು ಹೇಳಿದ್ರೆ ಸಾಕಾಗಲ್ಲ, ಎನ್​​ಕೌಂಟರ್​ ಮಾಡಿ ಬುದ್ಧಿ ಕಲಿಸಿ: ಯತ್ನಾಳ್​

ಕೊತ್ವಾಲ್ ರಾಮಚಂದ್ರನ ಶಿಷ್ಯರಿಂದ ನಾವು ಪಾಠ ಕಲಿಯಬೇಕಿಲ್ಲ. ಕೊತ್ವಾಲ್ ರಾಮಚಂದ್ರ ಬೆಂಗಳೂರಿನ ದೊಡ್ಡ ರೌಡಿಯಾಗಿದ್ದ. ಕೊತ್ವಾಲ್​ಗೆ ಸಿಗರೇಟ್ ತಂದು ಕೊಡುತ್ತಿದ್ದವರು ಪಾಠ ಮಾಡ್ತಿದ್ದಾರೆ. ಬ್ಲೂಫಿಲ್ಮ್​ ಫ್ಯಾಕ್ಟರಿ ನಡೆಸೋರು BJP ಬಗ್ಗೆ ಮಾತಾಡುವ ನೈತಿಕತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರಗೆ ಶಾಸಕ ಯತ್ನಾಳ್ ತಿರುಗೇಟು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ