AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ: ಕಾರಣ ಇಲ್ಲಿದೆ

ಅಮಿತ್ ಶಾ ಅವರು ಬಿ.ಆರ್. ಅಂಬೇಡ್ಕರ್ ವಿರುದ್ಧದ ಹೇಳಿಕೆಯನ್ನು ಖಂಡಿಸಿ ವಿಜಯಪುರ ಕರೆ ನೀಡಲಾಗಿದ್ದ ಬಂದ್ ಅನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಮುಂದೂಡಲಾಗಿದೆ. ವಿವಿಧ ದಲಿತ ಮತ್ತು ಅಹಿಂದ ಸಂಘಟನೆಗಳು ಈ ಬಗ್ಗೆ ಮಾಹಿತಿ ನೀಡಿವೆ. ಡಿಸೆಂಬರ್ 30 ರಂದು ಬಂದ್​​ಗೆ ಕರೆ ನೀಡಲಾಗಿದೆ.

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ: ಕಾರಣ ಇಲ್ಲಿದೆ
ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ: ಕಾರಣ ಇಲ್ಲಿದೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Dec 27, 2024 | 3:56 PM

Share

ವಿಜಯಪುರ, ಡಿಸೆಂಬರ್​ 27: ಬಿಆರ್​ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವಮಾನಕಾರಿ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ನಾಳೆ ವಿಜಯಪುರ ಬಂದ್​ಗೆ ಕರೆ ನೀಡಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ವಿಜಯಪುರ ಬಂದ್​ ಅನ್ನು ಹೋರಾಟಗಾರರು ಮುಂದೂಡಿದ್ದಾರೆ. ನಾಳೆ ಬದಲಾಗಿ ಡಿಸೆಂಬರ್ 30ರಂದು ಬಂದ್​​ಗೆ ಕರೆ ನೀಡಿದ್ದಾರೆ.

ಮಾಜಿ ಶಾಸಕ ಪ್ರೊ. ರಾಜು ಅಲಗೂರು, ಸೋಮನಾಥ ಕಳ್ಳಿಮನಿ, ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ ಇತರರಿಂದ ನಗರದ ಪ್ರವಾಸಿ ತಾಣದಲ್ಲಿ ಸುದ್ದಿಗೋಷ್ಟಿ ಮಾಡಿದ್ದು, ಅಹಿಂದ, ಪ್ರಗತಿಪರ, ದಲಿತಪರ ಹಾಗೂ ವಿವಿಧ ಸಂಘಟನೆಗಳ‌ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿಜಯಪುರ ಬಂದ್​ಗೆ ಕರೆ ನೀಡಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡಿಕೆ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

ಬೃಹತ್ ಪ್ರತಿಭಟನಾ ಮೆರವಣಿಗೆ ರದ್ದು

ಇದೇ ರೀತಿಯಾಗಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆಯಬೇಕಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ಹೋರಾಟವನ್ನು ರದ್ದು ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ಪ್ರತಿಭಟನಾ ಹೋರಾಟವನ್ನು ಮುಂದೂಡಲಾಗಿದೆ ಎಂದು ದಲಿತ ಮುಖಂಡರಾದ ಅಶೋಕ ಚಲವಾದಿ ಹಾಗೂ ಅರವಿಂದ ಸಾಲವಾಡಗಿ ಹಾಗೂ ಇತರರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕಲಬುರಗಿ ಬಂದ್​ಗೆ ಕರೆ: ಶಾಲಾ, ಕಾಲೇಜುಗಳಿಗೆ ರಜೆ

ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾವಚಿತ್ರ ಹಾಕಿ ಸಂತಾಪ ಸೂಚಿಸಲಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರಲಾಗಿದೆ. ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಬಸವನಬಾಗೇವಾಡಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ಇಂದು ಹಮ್ಮಿಕೊಂಡಿದ್ದನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಪರಶುರಾಮ ದಿಂಡವಾರ, ಮಹಾಂತೇಶ ಸಾಸಾಬಾಳ, ತಮ್ಮಣ್ಣ ಕಾನಾಗಡ್ಡಿ, ಮಹಾಂತೇಶ ಚಕ್ರವರ್ತಿ, ಮುತ್ತುರಾಜ ಬಾಗೇವಾಡಿ ಸೇರಿದಂತೆ ಮುಂತಾದವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:54 pm, Fri, 27 December 24

ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
New Year 2026 Live: 2025ಕ್ಕೆ ಬೈಬೈ.. ಹೊಸ ವರ್ಷ 2026ಕ್ಕೆ ಹಾಯ್ ಹಾಯ್
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್