AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ: ಕಾರಣ ಇಲ್ಲಿದೆ

ಅಮಿತ್ ಶಾ ಅವರು ಬಿ.ಆರ್. ಅಂಬೇಡ್ಕರ್ ವಿರುದ್ಧದ ಹೇಳಿಕೆಯನ್ನು ಖಂಡಿಸಿ ವಿಜಯಪುರ ಕರೆ ನೀಡಲಾಗಿದ್ದ ಬಂದ್ ಅನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆ ಮುಂದೂಡಲಾಗಿದೆ. ವಿವಿಧ ದಲಿತ ಮತ್ತು ಅಹಿಂದ ಸಂಘಟನೆಗಳು ಈ ಬಗ್ಗೆ ಮಾಹಿತಿ ನೀಡಿವೆ. ಡಿಸೆಂಬರ್ 30 ರಂದು ಬಂದ್​​ಗೆ ಕರೆ ನೀಡಲಾಗಿದೆ.

ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ: ಕಾರಣ ಇಲ್ಲಿದೆ
ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ: ಕಾರಣ ಇಲ್ಲಿದೆ
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 27, 2024 | 3:56 PM

Share

ವಿಜಯಪುರ, ಡಿಸೆಂಬರ್​ 27: ಬಿಆರ್​ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವಮಾನಕಾರಿ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ನಾಳೆ ವಿಜಯಪುರ ಬಂದ್​ಗೆ ಕರೆ ನೀಡಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ವಿಜಯಪುರ ಬಂದ್​ ಅನ್ನು ಹೋರಾಟಗಾರರು ಮುಂದೂಡಿದ್ದಾರೆ. ನಾಳೆ ಬದಲಾಗಿ ಡಿಸೆಂಬರ್ 30ರಂದು ಬಂದ್​​ಗೆ ಕರೆ ನೀಡಿದ್ದಾರೆ.

ಮಾಜಿ ಶಾಸಕ ಪ್ರೊ. ರಾಜು ಅಲಗೂರು, ಸೋಮನಾಥ ಕಳ್ಳಿಮನಿ, ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ ಇತರರಿಂದ ನಗರದ ಪ್ರವಾಸಿ ತಾಣದಲ್ಲಿ ಸುದ್ದಿಗೋಷ್ಟಿ ಮಾಡಿದ್ದು, ಅಹಿಂದ, ಪ್ರಗತಿಪರ, ದಲಿತಪರ ಹಾಗೂ ವಿವಿಧ ಸಂಘಟನೆಗಳ‌ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿಜಯಪುರ ಬಂದ್​ಗೆ ಕರೆ ನೀಡಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡಿಕೆ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.

ಬೃಹತ್ ಪ್ರತಿಭಟನಾ ಮೆರವಣಿಗೆ ರದ್ದು

ಇದೇ ರೀತಿಯಾಗಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆಯಬೇಕಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆ ಹೋರಾಟವನ್ನು ರದ್ದು ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ಪ್ರತಿಭಟನಾ ಹೋರಾಟವನ್ನು ಮುಂದೂಡಲಾಗಿದೆ ಎಂದು ದಲಿತ ಮುಖಂಡರಾದ ಅಶೋಕ ಚಲವಾದಿ ಹಾಗೂ ಅರವಿಂದ ಸಾಲವಾಡಗಿ ಹಾಗೂ ಇತರರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕಲಬುರಗಿ ಬಂದ್​ಗೆ ಕರೆ: ಶಾಲಾ, ಕಾಲೇಜುಗಳಿಗೆ ರಜೆ

ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾವಚಿತ್ರ ಹಾಕಿ ಸಂತಾಪ ಸೂಚಿಸಲಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರಲಾಗಿದೆ. ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಬಸವನಬಾಗೇವಾಡಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ಇಂದು ಹಮ್ಮಿಕೊಂಡಿದ್ದನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ಪರಶುರಾಮ ದಿಂಡವಾರ, ಮಹಾಂತೇಶ ಸಾಸಾಬಾಳ, ತಮ್ಮಣ್ಣ ಕಾನಾಗಡ್ಡಿ, ಮಹಾಂತೇಶ ಚಕ್ರವರ್ತಿ, ಮುತ್ತುರಾಜ ಬಾಗೇವಾಡಿ ಸೇರಿದಂತೆ ಮುಂತಾದವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:54 pm, Fri, 27 December 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ