ವಿಜಯಪುರ: ಇಸ್ಲಾಂ ಧರ್ಮದಂತೆ ಮೌಲ್ವಿ ಪ್ರಾರ್ಥನೆ ಬಳಿಕ ವಿಜಯಪುರ ಮೇಯರ್ ಆಗಿ ಅಧಿಕಾರ ಸ್ವೀಕಾರ

ವಿಜಯಪುರ ಮಹಾನಗರ ಪಾಲಿಕೆಯನ್ನು ಕಾಂಗ್ರೆಸ್ ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಅದರಂತೆ ಇಂದು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್​ನ ಮಾಹೇಜಬೀನ್ ಹೊರ್ತಿ ಅಧಿಕಾರ ಸ್ವೀಕರಿಸಿದ್ದಾರೆ. ಆದ್ರೆ, ಇಸ್ಲಾಂ ಧರ್ಮದಂತೆ ಮೌಲ್ವಿ ಪ್ರಾರ್ಥನೆ ಮಾಡಿದ ಅಧಿಕಾರ ಸ್ವೀಕಾರ ಮಾಡಿದ್ದ ಆಕ್ರೋಶಕ್ಕೆ ಕಾರಣವಾಗಿದೆ.

ವಿಜಯಪುರ, (ಜನವರಿ 12): ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ ವಿಜಯಪುರ (Vijayapura) ಮಹಾನಗರ ಪಾಲಿಕೆ ಕಾಂಗ್ರೆಸ್​ ತೆಕ್ಕೆಗೆ ಹೋಗಿದೆ. ಕಾಂಗ್ರೆಸ್​ ಮಾಹೇಜಬೀನ್ ಹೊರ್ತಿ ಅವರು ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅದರಂತೆ ಇಂದು(ಜನವರಿ 12) ಮಾಹೇಜಬೀನ್ ಹೊರ್ತಿ ಅವರು  ಕಚೇರಿಯಲ್ಲಿ 21ನೇ ಮೇಯರ್ ಆಗಿ ಅಧಿಕಾರ ಸ್ವೀಕರಿಸಿದರು. ಆದ್ರೆ, ಇಸ್ಲಾಂ ಧರ್ಮದಂತೆ ಮೌಲ್ವಿ ಪ್ರಾರ್ಥನೆ ಮಾಡಿದ ಬಳಿಕ ಅಧಿಕಾರ ಸ್ವೀಕರಿಸಿದ್ದು ಕೆಲವರ ಆಕ್ರೋಶಕ್ಕೆ ಕಾರಣವಾಗಿದೆ.

21 ನೇ ಅವಧಿಯ ಮಹಾನಗರ ಪಾಲಿಕೆಯ ಮೇಯರ್ ಪದಗ್ರಹದ ವೇಳೆ ಮುಸ್ಲಿಂ ಮೌಲ್ವಿಯೋರ್ವರು, ಇಸ್ಲಾಂ ಧರ್ಮದ ಪ್ರಾರ್ಥನೆ ಮಾಡಿದರು. ಎಲ್ಲ ಧರ್ಮಗಳ ಜನರಿಗೂ ಒಳ್ಳೆಯ ಕೆಲಸ ಮಾಡಬೇಕೆಂದು ಪ್ರಾರ್ಥಿಸಿದರು. ಬಳಿಕ ಮಾಹೇಜಬೀನ್ ಹೊರ್ತಿ ಅವರು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಉಪ ಮೇಯರ್ ದಿನೇಶ ಹಳ್ಳಿ, ಕಾಂಗ್ರೆಸ್ ಕಾರ್ಪೋರೇಟರ್ಸ್ ಹಾಗೂ ಇತರರು ಭಾಗಿಯಾಗಿದ್ದರು.

ಇದನ್ನೂ ಓದಿ: ವಿಜಯಪುರ ಮಹಾನಗರ ಪಾಲಿಕೆ ಕೊನೆಗೂ ಕಾಂಗ್ರೆಸ್​ ತೆಕ್ಕೆಗೆ, ಯತ್ನಾಳ್​ಗೆ ಮುಖಭಂಗ

ಜನವರಿ 09 ನಡೆದಿದ್ದ ನಡೆದ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮಹೆಜಬೀನ್ ಹೊರ್ತಿ ಅವರು ಒಟ್ಟು 22 ಮತ ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದರೆ, ಎಸ್ ಟಿಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ಸಿನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದರು.

10 ಕಾಂಗ್ರೆಸ್ ಸದಸ್ಯರು ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಥೋಡ್ ಮತಗಳ ಬೆಂಬಲದೊಂದಿಗೆ ಕಾಂಗ್ರೆಸ್​ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿತ್ತು. ಆದ್ರೆ, ಬಿಜೆಪಿ ಬಹುಮತ ಇದ್ದರೂ ಸಹ ಚುನಾವಣೆ ಬಹಿಷ್ಕರಿಸಿ ಅಧಿಕಾರ ಕಳೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us