AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ -ಈಶ್ವರ ಖಂಡ್ರೆ

ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ತೇವೆ. ಒಮ್ಮತದ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಯನ್ನು ಆಯ್ಕೆ ಮಾಡಿದ್ದೇವೆ.-ಈಶ್ವರ ಖಂಡ್ರೆ

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ -ಈಶ್ವರ ಖಂಡ್ರೆ
ಈಶ್ವರ್​ ಖಂಡ್ರೆ
TV9 Web
| Edited By: ಆಯೇಷಾ ಬಾನು|

Updated on: Oct 04, 2021 | 6:44 PM

Share

ವಿಜಯಪುರ: ಅಕ್ಟೋಬರ್ 30ರಂದು ನಡೆಯುವ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ(Sindagi By Election) ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ ಎಂದು ಸಿಂದಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ(Eshwar Khandre) ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ತೇವೆ. ಒಮ್ಮತದ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಯನ್ನು ಆಯ್ಕೆ ಮಾಡಿದ್ದೇವೆ. ಅಕ್ಟೋಬರ್ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುತ್ತೆ. ಬಿಜೆಪಿ ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಈಶ್ವರ ಖಂಡ್ರೆ ಹೇಳಿದ್ರು.

ಹಾನಗಲ್ ಉಪಚುನಾವಣಾ ಉಸ್ತುವಾರಿ ಪಟ್ಟಿಯಲ್ಲಿ ಬಿ.ವೈ.ವಿಜಯೇಂದ್ರಗೆ ಸ್ಥಾನ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಹಾನಗಲ್ ಉಪಚುನಾವಣಾ ಉಸ್ತುವಾರಿ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. 13 ಉಸ್ತುವಾರಿಗಳ ಪಟ್ಟಿಯಲ್ಲಿ ಕೊನೆಯವರಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರರ ಹೆಸರನ್ನು ಸೂಚಿಸಲಾಗಿದೆ.

ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಟ್ಟಿ ಸಿದ್ಧವಾಗಿತ್ತು. ಆದ್ರೆ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಇರಲಿಲ್ಲ. ಆದ್ರೆ ಇಂದು ಉಸ್ತುವಾರಿಗಳ ಪಟ್ಟಿಗೆ ವಿಜಯೇಂದ್ರ ಹೆಸರು ಸೇರ್ಪಡೆ ಮಾಡಲಾಗಿದೆ.

ಏಕಾಏಕಿ ವಿಜಯೇಂದ್ರ ಹೆಸರು ಕೈಬಿಟ್ಟರೆ ಚುನಾವಣೆಯಲ್ಲಿ ಯಡಿಯೂರಪ್ಪ ಬೆಂಬಲಿಗರ ವಿರೋಧ ಜೋರಾಗುವ ಆತಂಕ ವಿದೆ. ಹಾಗೂ ಚುನಾವಣೆಯಲ್ಲಿ ಯಡಿಯೂರಪ್ಪ ವೋಟ್ ಬ್ಯಾಂಕ್ ಬೌನ್ಸ್ ಆಗುವ ಭೀತಿ ಇದೆ. ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾವೇರಿ ಜಿಲ್ಲೆಯಲ್ಲಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದ್ದಾರೆ ಮತ್ತೊಂದೆಡೆ ವಿಜಯೇಂದ್ರಗೆ ಉಸ್ತುವಾರಿ ನಿರಾಕರಿಸುವ ಮೂಲಕ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿದರು ಎಂಬ ಸಂದೇಶ ರವಾನೆಯಾಗುವ ಆತಂಕ ವಿದೆ. ಇದು ಉಪಚುನಾವಣೆಯಲ್ಲಿ ವ್ಯತಿರಿಕ್ತವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಇಂದು ಉಪಚುನಾವಣಾ ಉಸ್ತುವಾರಿ ಪಟ್ಟಿಗೆ ವಿಜಯೇಂದ್ರ ಹೆಸರು ಸೇರ್ಪಡೆ ಮಾಡಲಾಗಿದೆ.

ಇದನ್ನೂ ಓದಿ: DC vs CSK Live Score, IPL 2021: ಗುರು – ಶಿಷ್ಯರ ಕದನ: ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ?

ದುನಿಯಾ ವಿಜಯ್​ ‘ಸಲಗ’ಕ್ಕೆ ಸಿದ್ದರಾಮಯ್ಯ ಬೆಂಬಲ; ತಂಡಕ್ಕೆ ಒಳ್ಳೆಯದಾಗಲಿ ಎಂದ ಮಾಜಿ ಸಿಎಂ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​