AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಪಂಚಾಯತ್ ಪಿಡಿಒಗೆ​ ಧಮ್ಕಿ; ಸದಸ್ಯನನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಈ ಘಟನೆ ಆಗುತ್ತಿದ್ದಂತೆ ಗ್ರಾಮ ಪಂಚಾಯತಿ ಸದಸ್ಯ ಜಾಕೀರ್ ಮನಿಯಾರ್ ವಿರುದ್ಧ ಚಡಚಣ ಪೊಲೀಸ್ ಠಾಣೆಯಲ್ಲಿ ಪಿಡಿಒ ರಾಠೋಡ್ ಅವರು ಕೇಸ್ ದಾಖಲಿಸಿದ್ದರು. ಈ ಹಿನ್ನಲೆ ಸಂಘಟಿತರಾದ ಎಲ್ಲಾ ಪಂಚಾಯತ್​ ಪಿಡಿಒಗಳು ಇಂದು ಜಿಲ್ಲಾ ಪಂಚಾಯತ್​ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಿಇಒಗೆ ಮನವಿ ಸಲ್ಲಿಸಿದರು.

ಗನ್ ತೋರಿಸಿ ಪಂಚಾಯತ್ ಪಿಡಿಒಗೆ​ ಧಮ್ಕಿ; ಸದಸ್ಯನನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
ಗ್ರಾಮ ಪಂಚಾಯತಿ ಸದಸ್ಯನನ್ನ ವಜಾಗೊಳಿಸುವಂತೆ ಪಿಡಿಒಗಳ ಧರಣಿ
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 19, 2023 | 4:39 PM

Share

ವಿಜಯಪುರ, ಅ.19: ಗ್ರಾ.ಪಂಚಾಯತಿ ಪಿಡಿಒ(PDO)ಗೆ ಗನ್ ತೋರಿಸಿ ಪಂಚಾಯತ್​ ಸದಸ್ಯ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಹಾಕಿದ್ದ ಸದಸ್ಯನನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿಜಯಪುರ (Vijayapur) ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪಿಡಿಒಗಳು ಧರಣಿ ನಡೆಸಿದ್ದಾರೆ. ಹೌದು, ನಿನ್ನೆ(ಅ.18) ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ ಪಂಚಾಯತಿ ಪಿಡಿಒ ವಿಶ್ವನಾಥ ರಾಠೋಡ್​ಗೆ, ಸದಸ್ಯ ಜಾಕೀರ್ ಮನಿಯಾರ್ ಗನ್ ತೋರಿಸಿ ಬೆದರಿಕೆ ಹಾಕಲಾದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಇಂದು(ಅ.19) ಪ್ರತಿಭಟನೆಗೆ ಮುಂದಾಗಿದ್ದಾರೆ.

ಚಡಚಣ ಪೊಲೀಸ್ ಠಾಣೆಯಲ್ಲಿ ನಿನ್ನೆ ಕೇಸ್ ದಾಖಲಿಸಿದ್ದ ಪಿಡಿಒ ರಾಠೋಡ್

ಹೌದು, ಈ ಘಟನೆ ಆಗುತ್ತಿದ್ದಂತೆ ಗ್ರಾಮ ಪಂಚಾಯತಿ ಸದಸ್ಯ ಜಾಕೀರ್ ಮನಿಯಾರ್ ವಿರುದ್ಧ ಚಡಚಣ ಪೊಲೀಸ್ ಠಾಣೆಯಲ್ಲಿ ಪಿಡಿಒ ರಾಠೋಡ್ ಅವರು ಕೇಸ್ ದಾಖಲಿಸಿದ್ದರು. ಈ ಹಿನ್ನಲೆ ಸಂಘಟಿತರಾದ ಎಲ್ಲಾ ಪಂಚಾಯತ್​ ಪಿಡಿಒಗಳು ಇಂದು ಜಿಲ್ಲಾ ಪಂಚಾಯತ್​ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಿಇಒಗೆ ಮನವಿ ಸಲ್ಲಿಸಿದರು. ಜೊತೆಗೆ ಸದಸ್ಯ ಜಾಕೀರ್ ಮನಿಯಾರ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಪ್ರೇಮ ವಿವಾಹಕ್ಕೆ ಬ್ರೇಕ್ ಹಾಕಲು ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದ ಗ್ರಾಮ ಪಂಚಾಯತ್ ಸದಸ್ಯರು

ಹಣಕಾಸಿನ ವಿಚಾರದಲ್ಲಿ ಗಲಾಟೆ ಮಾಡಿ ಬೆದರಿಕೆ

ಇನ್ನು ಹಣಕಾಸಿನ ವಿಚಾರದಲ್ಲಿ ಗಲಾಟೆ ಹಿನ್ನಲೆ ದೇವರನಿಂಬರಗಿ ಗ್ರಾಮ ಪಂಚಾಯತಿ ಪಿಡಿಒ ಅಧಿಕಾರಿಗೆ ಸದಸ್ಯನೇ ಬೆದರಿಕೆ ಹಾಕಿದ್ದ. ಪರವಾನಿಗೆ ಹೊಂದಿದ ಪಿಸ್ತೂಲ್ ಸಹಿತ ಗ್ರಾಮಪಂಚಾಯತಿಗೆ ಆಗಮಿಸಿದ್ದ ಗ್ರಾಮ ಪಂಚಾಯತಿ ಸದಸ್ಯ ಜಾಕೀರ್ ಮನಿಯಾರ್, ಪಿಡಿಓಗೆ ಬೆದರಿಕೆ ಹಾಕಲಾಗಿತ್ತು. ಬಳಿಕ ಸದಸ್ಯ ಜಾಕೀರ್ ಮನಿಯಾರ್ ಬೆದರಿಕೆವೊಡ್ಡಿದ ವಿಡಿಯೋ ವೈರಲ್​ ಆಗಿತ್ತು. ಇದೀಗ ಆತನನ್ನು ಸದಸ್ಯತ್ವದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ