AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಪಂಚಾಯತ್ ಪಿಡಿಒಗೆ​ ಧಮ್ಕಿ; ಸದಸ್ಯನನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ಈ ಘಟನೆ ಆಗುತ್ತಿದ್ದಂತೆ ಗ್ರಾಮ ಪಂಚಾಯತಿ ಸದಸ್ಯ ಜಾಕೀರ್ ಮನಿಯಾರ್ ವಿರುದ್ಧ ಚಡಚಣ ಪೊಲೀಸ್ ಠಾಣೆಯಲ್ಲಿ ಪಿಡಿಒ ರಾಠೋಡ್ ಅವರು ಕೇಸ್ ದಾಖಲಿಸಿದ್ದರು. ಈ ಹಿನ್ನಲೆ ಸಂಘಟಿತರಾದ ಎಲ್ಲಾ ಪಂಚಾಯತ್​ ಪಿಡಿಒಗಳು ಇಂದು ಜಿಲ್ಲಾ ಪಂಚಾಯತ್​ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಿಇಒಗೆ ಮನವಿ ಸಲ್ಲಿಸಿದರು.

ಗನ್ ತೋರಿಸಿ ಪಂಚಾಯತ್ ಪಿಡಿಒಗೆ​ ಧಮ್ಕಿ; ಸದಸ್ಯನನ್ನು ವಜಾಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
ಗ್ರಾಮ ಪಂಚಾಯತಿ ಸದಸ್ಯನನ್ನ ವಜಾಗೊಳಿಸುವಂತೆ ಪಿಡಿಒಗಳ ಧರಣಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 19, 2023 | 4:39 PM

Share

ವಿಜಯಪುರ, ಅ.19: ಗ್ರಾ.ಪಂಚಾಯತಿ ಪಿಡಿಒ(PDO)ಗೆ ಗನ್ ತೋರಿಸಿ ಪಂಚಾಯತ್​ ಸದಸ್ಯ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಹಾಕಿದ್ದ ಸದಸ್ಯನನ್ನು ವಜಾಗೊಳಿಸುವಂತೆ ಆಗ್ರಹಿಸಿ ವಿಜಯಪುರ (Vijayapur) ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪಿಡಿಒಗಳು ಧರಣಿ ನಡೆಸಿದ್ದಾರೆ. ಹೌದು, ನಿನ್ನೆ(ಅ.18) ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ ಪಂಚಾಯತಿ ಪಿಡಿಒ ವಿಶ್ವನಾಥ ರಾಠೋಡ್​ಗೆ, ಸದಸ್ಯ ಜಾಕೀರ್ ಮನಿಯಾರ್ ಗನ್ ತೋರಿಸಿ ಬೆದರಿಕೆ ಹಾಕಲಾದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆ ಇಂದು(ಅ.19) ಪ್ರತಿಭಟನೆಗೆ ಮುಂದಾಗಿದ್ದಾರೆ.

ಚಡಚಣ ಪೊಲೀಸ್ ಠಾಣೆಯಲ್ಲಿ ನಿನ್ನೆ ಕೇಸ್ ದಾಖಲಿಸಿದ್ದ ಪಿಡಿಒ ರಾಠೋಡ್

ಹೌದು, ಈ ಘಟನೆ ಆಗುತ್ತಿದ್ದಂತೆ ಗ್ರಾಮ ಪಂಚಾಯತಿ ಸದಸ್ಯ ಜಾಕೀರ್ ಮನಿಯಾರ್ ವಿರುದ್ಧ ಚಡಚಣ ಪೊಲೀಸ್ ಠಾಣೆಯಲ್ಲಿ ಪಿಡಿಒ ರಾಠೋಡ್ ಅವರು ಕೇಸ್ ದಾಖಲಿಸಿದ್ದರು. ಈ ಹಿನ್ನಲೆ ಸಂಘಟಿತರಾದ ಎಲ್ಲಾ ಪಂಚಾಯತ್​ ಪಿಡಿಒಗಳು ಇಂದು ಜಿಲ್ಲಾ ಪಂಚಾಯತ್​ ಕಚೇರಿ ಎದುರು ಪ್ರತಿಭಟನೆ ನಡೆಸಿ ಸಿಇಒಗೆ ಮನವಿ ಸಲ್ಲಿಸಿದರು. ಜೊತೆಗೆ ಸದಸ್ಯ ಜಾಕೀರ್ ಮನಿಯಾರ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಪ್ರೇಮ ವಿವಾಹಕ್ಕೆ ಬ್ರೇಕ್ ಹಾಕಲು ಸರ್ಕಾರಕ್ಕೆ ಮನವಿ ಸಲ್ಲಿಸಲು ಮುಂದಾದ ಗ್ರಾಮ ಪಂಚಾಯತ್ ಸದಸ್ಯರು

ಹಣಕಾಸಿನ ವಿಚಾರದಲ್ಲಿ ಗಲಾಟೆ ಮಾಡಿ ಬೆದರಿಕೆ

ಇನ್ನು ಹಣಕಾಸಿನ ವಿಚಾರದಲ್ಲಿ ಗಲಾಟೆ ಹಿನ್ನಲೆ ದೇವರನಿಂಬರಗಿ ಗ್ರಾಮ ಪಂಚಾಯತಿ ಪಿಡಿಒ ಅಧಿಕಾರಿಗೆ ಸದಸ್ಯನೇ ಬೆದರಿಕೆ ಹಾಕಿದ್ದ. ಪರವಾನಿಗೆ ಹೊಂದಿದ ಪಿಸ್ತೂಲ್ ಸಹಿತ ಗ್ರಾಮಪಂಚಾಯತಿಗೆ ಆಗಮಿಸಿದ್ದ ಗ್ರಾಮ ಪಂಚಾಯತಿ ಸದಸ್ಯ ಜಾಕೀರ್ ಮನಿಯಾರ್, ಪಿಡಿಓಗೆ ಬೆದರಿಕೆ ಹಾಕಲಾಗಿತ್ತು. ಬಳಿಕ ಸದಸ್ಯ ಜಾಕೀರ್ ಮನಿಯಾರ್ ಬೆದರಿಕೆವೊಡ್ಡಿದ ವಿಡಿಯೋ ವೈರಲ್​ ಆಗಿತ್ತು. ಇದೀಗ ಆತನನ್ನು ಸದಸ್ಯತ್ವದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?