AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆಗೆ ವ್ಯಾಪಕ ವಿರೋಧ: ಸರ್ಕಾರದ ಸ್ಪಷ್ಟನೆ ಹೀಗಿದೆ ನೋಡಿ

ವಿಜಯಪುರದ ವಸತಿ ಶಾಲೆಗಳ ಪ್ರವೇಶ ದ್ವಾರಗಳಲ್ಲಿ ಕುವೆಂಪು ಅವರ ಕವಿತೆಯ ಬರಹವನ್ನು ಬದಲಾಯಿಸಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಪಕ್ಷ ಬಿಜೆಪಿ ನಾಯಕರು ಈ ವಿಷಯವಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ ಸಾಹಿತಿಗಳು, ಬುದ್ಧಿಜೀವಿಗಳೂ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶದಕ ಪುಂಡಲೀಕ ಮಾನವರ ನೀಡಿದ ಸ್ಪಷ್ಟನೆ ಇಲ್ಲಿದೆ.

ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆಗೆ ವ್ಯಾಪಕ ವಿರೋಧ: ಸರ್ಕಾರದ ಸ್ಪಷ್ಟನೆ ಹೀಗಿದೆ ನೋಡಿ
ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆಗೆ ವ್ಯಾಪಕ ವಿರೋಧ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 19, 2024 | 11:47 AM

Share

ವಿಜಯಪುರ, ಫೆಬ್ರವರಿ 19: ಸಮಾಜ ಕಲ್ಯಾಣ ಇಲಾಖೆಯ (Department of Social Welfare, Karnataka) ವ್ಯಾಪ್ತಿಯಲ್ಲಿ ಬರುವ, ವಿಜಯಪುರ  (Vijayapura)  ಜಿಲ್ಲೆಯಲ್ಲಿರುವ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿರುವುದಕ್ಕೆ ಸಾಹಿತಿಗಳು, ರಾಜಕಾರಣಿಗಳು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಜಯಪುರ ‌ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ‘ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ’ ಎಂಬ ಬರಹದ ಬದಲು, ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹವನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶದಕ ಪುಂಡಲೀಕ ಮಾನವರ ಸ್ಪಷ್ಟನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಒಟ್ಟು 23 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿವೆ. ಈ ಪೈಕಿ ಘಾಳಪೂಜಿ ಹಾಗೂ ಮತ್ತೊಂದು ಶಾಲೆಯಲ್ಲಿ ಮಾತ್ರ ಬರಹ ಬದಲಾವಣೆಯಾಗಿದೆ. ಇತರೆ ಶಾಲೆಗಳಲ್ಲಿ ಬದಲಾವಣೆ ಮಾಡಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರು ಬರಹ ಬದಲಾವಣೆ ಮಾಡಲು ಟೆಲಿಗ್ರಾಂ ಗ್ರೂಪ್​​ನಲ್ಲಿ ಸೂಚನೆ ನೀಡಿದ್ದರು. ಆದರೆ ಕುವೆಂಪು ಅವರ ಬರಹ ಬದಲಾವಣೆಗೆ ಸರ್ಕಾರದ ಸುತ್ತೋಲೆ ಹಾಗೂ ಆದೇಶ ಇಲ್ಲ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಟೆಲಿಗ್ರಾಂ ಗ್ರೂಪ್​ನಲ್ಲಿ ಬಂದಿರೋ ಸೂಚನೆ ಮೇರೆಗೆ ವಸತಿ ಶಾಲೆಯ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ನಮಗೆ ಕುವೆಂಪು ಅವರ ಕುರಿತು ಅವರ ಸಾಹಿತ್ಯದ ಕುರಿತು ಅಪಾರ ಗೌರವವಿದೆ. ಕುವೆಂಪು ಅವರಿಗೆ ಅಗೌರವ ತರುವ ಉದ್ದೇಶ ನಮ್ಮದಲ್ಲ ಎಂದು ಪುಂಡಲೀಕ ಮಾನವರ ಹೇಳಿದ್ದಾರೆ.

ಇದನ್ನೂ ಓದಿ: ವಿಜಯಪುರ: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆ! ಚರ್ಚೆಗೆ ಗ್ರಾಸವಾಯ್ತು ಸರ್ಕಾರದ ನಡೆ

ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಧೈರ್ಯವಾಗಿ‌ ಪ್ರಶ್ನೆ ಮಾಡಲಿ ಎಂಬ ಉದ್ದೇಶದಿಂದ ಬರಹ ಬದಲಾವಣೆ ಮಾಡಲಾಗಿದೆ. ಪ್ರಶ್ನೆ ಮಾಡುವ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಬೇಕು. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲು ಪೋಷಕರು ಧೈರ್ಯವಾಗಿ ಮಾತನಾಡಲಿ ಎಂಬ ಉದ್ದೇಶವಷ್ಟೇ ಬರಹ ಬದಲಾವಣೆ ಹಿಂದಿದೆ ಎಂದು ಪುಂಡಲೀಕ ಮಾನವರ ಸ್ಪಷ್ಟಪಡಿಸಿದ್ದಾರೆ.

ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ಬರಹ ಬರೆದಿದ್ದು ತಪ್ಪು ಎಂದು ಸಾಹಿತಿಗಳು, ಬುದ್ಧಿ ಜೀವಿಗಳು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜ್ಞಾನಪೀಠ ಪ್ರಶಸ್ತಿ ವಿಜೇತ ಕುವೆಂಪು ಅವರಿಗೆ ಮಾಡಿದ ಅವಮಾನವೆಂದು ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ