AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಅಯ್ಯಪ್ಪ ಸ್ವಾಮಿ ಹುಟ್ಟಿನ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ವಿರುದ್ಧ ಕ್ರಮಕ್ಕೆ ಮಾಲಾಧಾರಿಗಳ ಪ್ರತಿಭಟನೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ಬಗ್ಗೆ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾನೆ. ಈತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಇಂದು ಅಯ್ಯಪ್ಪ ಮಾಲಾಧಾರಿಗಳು ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇಂತಹದ್ದೇ ಪ್ರಕರಣದಲ್ಲಿ ಈ ಹಿಂದೆ ಈತ ಅರೆಸ್ಟ್ ಆಗಿದ್ದ.

ವಿಜಯಪುರ: ಅಯ್ಯಪ್ಪ ಸ್ವಾಮಿ ಹುಟ್ಟಿನ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ವಿರುದ್ಧ ಕ್ರಮಕ್ಕೆ ಮಾಲಾಧಾರಿಗಳ ಪ್ರತಿಭಟನೆ
ಜಗದೀಶ್ ಕಲಬುರ್ಗಿ (ಎಡಚಿತ್ರ) ಮತ್ತು ಶಬರಿಮಲೆ ದೇವಸ್ಥಾನ (ಬಲಚಿತ್ರ)
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on:Nov 28, 2023 | 7:46 PM

Share

ವಿಜಯಪುರ, ನ.28: ಸಾಮಾಜಿಕ ಜಾಲತಾಣದಲ್ಲಿ ಶಬರಿಮಲೆ (Shabarimala) ಅಯ್ಯಪ್ಪ ಸ್ವಾಮಿ ಬಗ್ಗೆ ವ್ಯಕ್ತಿಯೊಬ್ಬ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಪ್ರಕರಣ ನಡೆದಿದೆ. ಈ ಹಿಂದೆ ಇಂತಹದ್ದೇ ಪ್ರಕರಣದಲ್ಲಿ ಜೈಲು ಸೇರಿದ್ದ ಈತ ಮತ್ತೆ ಅದೇ ಚಾಳಿ ಮುಂದುವರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅಯ್ಯಪ್ಪ ಮಾಲಾಧಾರಿಗಳು ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಗೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಸಿಂದಗಿಯ ಜಗದೀಶ್ ಕಲಬುರ್ಗಿ ಎಂಬಾತ ತನ್ನ ಫೇಸ್​ಬುಕ್ ಖಾತೆಯಲ್ಲಿ ಅಯ್ಯಪ್ಪ ಸ್ವಾಮಿ ಹುಟ್ಟಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ. ಸದ್ಯ, ಅಯ್ಯಪ್ಪ ಸ್ವಾಮಿ ಬಗ್ಗೆ ಅಪಮಾನ ಮಾಡಿದ ಆರೋಪಿ ಜಗದೀಶ ಕಲಬುರ್ಗಿ ವಿರುದ್ಧ ಆಕ್ರೋಶಗೊಂಡಿರುವ ಮಾಲಾಧಾರಿಗಳು ಸಿಂದಗಿ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಅಲ್ಲದೆ, ಅಯ್ಯಪ್ಪ ಸ್ವಾಮೀ ಹುಟ್ಟಿನ ಬಗ್ಗೆ ಅವಮಾನಕಾರಿಯಾಗಿ ಪೋಸ್ಟ್ ಮಾಡಿರುವ ಜಗದೀಶ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀ ಧರ್ಮಶಾಸ್ತ್ರ ಸೇವಾ ಸಮೀತಿಯಿಂದ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಯುವಕ ಸೆರೆ; ಬಂಧನ ಖಂಡಿಸಿ ಭಜರಂಗದಳದಿಂದ ಧರಣಿ

ದೇವರ ಬಗ್ಗೆ ಜಗದೀಶ್ ಕಲಬುರಗಿ ಈ ರೀತಿ ಪೋಸ್ಟ್ ಮಾಡಿರುವುದು ಇದೇ ಮೊದಲೇನಲ್ಲ. ದೇವರನ್ನು ಅವಹೇಳನ ಮಾಡುವ ಚಾಳಿ ಜೈಲಿಗೆ ಹೋಗಿ ಬಂದನಂತರವೂ ಮುಂದುವರಿಸಿದ್ದಾನೆ. ಹೌದು, ಈ ಹಿಂದೆ ಗುಡ್ಡಾಪೂರ ದಾನಮ್ಮದೇವಿಯ ಕುರಿತು ಅವಹೇಳನಕಾರಿ ಪೋಸ್ಟ್ ಹಂಚಿ ಬಂಧನಕ್ಕೊಳಗಾಗಿದ್ದ.

ಅಲ್ಲದೆ, ಬ್ರಾಹ್ಮಣ ಸಮುದಾಯದ ಬಗ್ಗೆಯೂ ಕೀಳಾಗಿ ಪೋಸ್ಟ್ ಮಾಡಿದ ಜಗದೀಶ್, ಭಾರತ ಸ್ವತಂತ್ರ ಆಗುವಾಗ ಶಿಕ್ಷಣ ಪಡೆದವರು ಬ್ರಾಹ್ಮಣರು ಮಾತ್ರ. ರಾಜಕೀಯದಲ್ಲೂ ಅವರೇ ಹೆಚ್ಚಾಗಿದ್ದರು. ಡಾ.ಬಿ ಆರ್ ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ಬೆಳೆಸಲಿಲ್ಲ. ಬಿಜೆಪಿಯ ಬ್ರಾಹ್ಮಣರ ಕುತಂತ್ರದಿಂದಲೇ ಯಡಿಯೂರಪ್ಪನವರು ಜೈಲಿಗೆ ಹೋಗಿದ್ದು. ಬ್ರಾಹ್ಮಣರ ಕುತಂತ್ರದಿಂದಲೇ ಜಗದೀಶ ಶೆಟ್ಟರ್ ಬಿಜೆಪಿಯಿಂದ ಹೊರಗೆ ಹೋಗಿದ್ದು ಎಂದು ಪೋಸ್ಟ್ ಮಾಡಿದ್ದಾನೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:45 pm, Tue, 28 November 23

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More