AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಯಾವುದೇ ಧರ್ಮ ಕೂಡ ಶಾಂತಿ, ಸಹೋದರತೆ ಸಾರುತ್ತೆ-ಡಿಕೆ ಶಿವಕುಮಾರ್​

ಧರ್ಮ ಎಂದರೆ ಬದುಕು, ಎಲ್ಲರನ್ನು ಪ್ರೀತಿಸೋ ಮಾರ್ಗ, ಧರ್ಮ ಎಂದರೆ ಸಮಾನತೆ ಎಂದು ಡಿವಿಜಿ ಸಾಲುಗಳ ಮೂಲಕ ವಿವರಿಸಿದರು. ಧರ್ಮದಲ್ಲಿ ರಾಜಕಾರಣ ಇರಬೇಕು, ರಾಜಕಾರಣದಲ್ಲಿ ಧರ್ಮ ಇರಬಾರದು. ಆದರೆ, ಇತ್ತೀಚೆಗೆ ಅದು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಜನರ ಸಹಕಾರದಿಂದ ಮಠಗಳು ಬೆಳೆಯುತ್ತವೆ. ಜೊತೆಗೆ ಪೀಠಾಧಿಪತಿಗಳು ಸಾಧನೆ‌ ಮಾಡಲು ಸಾಧ್ಯ ಎಂದು ಹೇಳಿದರು.

ವಿಜಯಪುರ: ಯಾವುದೇ ಧರ್ಮ ಕೂಡ ಶಾಂತಿ, ಸಹೋದರತೆ ಸಾರುತ್ತೆ-ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Feb 03, 2024 | 6:02 PM

ವಿಜಯಪುರ, ಫೆ.03: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಣೆ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಹೇಳಿದರು. ವಿಜಯಪುರ(Vijayapura) ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಮಾತನಾಡಿದ ಅವರು ‘ಯಾವುದೇ ಧರ್ಮ ಕೂಡ ಶಾಂತಿ ಸಹೋದರತೆಯನ್ನು ಸಾರುತ್ತದೆ. ಧರ್ಮ ಯಾವುದಾದರೂ ದೇವರು ಒಬ್ಬನೇ, ಎಲ್ಲದರಲ್ಲೂ ದೇವರನ್ನು ನೋಡುತ್ತೇವೆ ಎಂದರು.

ಧರ್ಮ ಎಂದರೇನು? ವಿವರಿಸಿದ ಡಿಸಿಎಂ

ಧರ್ಮ ಎಂದರೆ ಬದುಕು, ಎಲ್ಲರನ್ನು ಪ್ರೀತಿಸೋ ಮಾರ್ಗ, ಧರ್ಮ ಎಂದರೆ ಸಮಾನತೆ ಎಂದು ಡಿವಿಜಿ ಸಾಲುಗಳ ಮೂಲಕ ವಿವರಿಸಿದರು. ಧರ್ಮದಲ್ಲಿ ರಾಜಕಾರಣ ಇರಬೇಕು, ರಾಜಕಾರಣದಲ್ಲಿ ಧರ್ಮ ಇರಬಾರದು. ಆದರೆ, ಇತ್ತೀಚೆಗೆ ಅದು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಜನರ ಸಹಕಾರದಿಂದ ಮಠಗಳು ಬೆಳೆಯುತ್ತವೆ. ಜೊತೆಗೆ ಪೀಠಾಧಿಪತಿಗಳು ಸಾಧನೆ‌ ಮಾಡಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ:ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ:​ ಪ್ರತಿಭಟನೆ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್​

ಚುನಾವಣೆ ವೇಳೆ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿದೆ

ಇದೇ ವೇಳೆ ವಿಜಯಪುರ ಜಿಲ್ಲೆ ಹೆಚ್ಚು ಕಾಂಗ್ರೆಸ್ ಶಾಸಕರನ್ನು ನೀಡಿದೆ. ಚುನಾವಣೆ ವೇಳೆ ನಾವು ಘೋಷಿಸಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿಮಾಡಿದೆ. ಇದರಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ ಎಂದರು. ಜೊತೆಗೆ ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ನಮ್ಮ ಸರ್ಕಾರ ಗಮನ ಹರಿಸಲಿದೆ. ಆ ಮೂಲಕ ರೈತರನ್ನು ಬದುಕಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಎಲ್ಲರನ್ನೂ ಸಮಾನತೆಯಿಂದ ನೋಡುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Sat, 3 February 24

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ