ವಿಜಯಪುರ: ಯಾವುದೇ ಧರ್ಮ ಕೂಡ ಶಾಂತಿ, ಸಹೋದರತೆ ಸಾರುತ್ತೆ-ಡಿಕೆ ಶಿವಕುಮಾರ್​

ಧರ್ಮ ಎಂದರೆ ಬದುಕು, ಎಲ್ಲರನ್ನು ಪ್ರೀತಿಸೋ ಮಾರ್ಗ, ಧರ್ಮ ಎಂದರೆ ಸಮಾನತೆ ಎಂದು ಡಿವಿಜಿ ಸಾಲುಗಳ ಮೂಲಕ ವಿವರಿಸಿದರು. ಧರ್ಮದಲ್ಲಿ ರಾಜಕಾರಣ ಇರಬೇಕು, ರಾಜಕಾರಣದಲ್ಲಿ ಧರ್ಮ ಇರಬಾರದು. ಆದರೆ, ಇತ್ತೀಚೆಗೆ ಅದು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಜನರ ಸಹಕಾರದಿಂದ ಮಠಗಳು ಬೆಳೆಯುತ್ತವೆ. ಜೊತೆಗೆ ಪೀಠಾಧಿಪತಿಗಳು ಸಾಧನೆ‌ ಮಾಡಲು ಸಾಧ್ಯ ಎಂದು ಹೇಳಿದರು.

ವಿಜಯಪುರ: ಯಾವುದೇ ಧರ್ಮ ಕೂಡ ಶಾಂತಿ, ಸಹೋದರತೆ ಸಾರುತ್ತೆ-ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್​
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 03, 2024 | 6:02 PM

ವಿಜಯಪುರ, ಫೆ.03: ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನೆಂದು ಘೋಷಣೆ ಮಾಡಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್(DK Shivakumar) ಹೇಳಿದರು. ವಿಜಯಪುರ(Vijayapura) ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದಲ್ಲಿ ಮಾತನಾಡಿದ ಅವರು ‘ಯಾವುದೇ ಧರ್ಮ ಕೂಡ ಶಾಂತಿ ಸಹೋದರತೆಯನ್ನು ಸಾರುತ್ತದೆ. ಧರ್ಮ ಯಾವುದಾದರೂ ದೇವರು ಒಬ್ಬನೇ, ಎಲ್ಲದರಲ್ಲೂ ದೇವರನ್ನು ನೋಡುತ್ತೇವೆ ಎಂದರು.

ಧರ್ಮ ಎಂದರೇನು? ವಿವರಿಸಿದ ಡಿಸಿಎಂ

ಧರ್ಮ ಎಂದರೆ ಬದುಕು, ಎಲ್ಲರನ್ನು ಪ್ರೀತಿಸೋ ಮಾರ್ಗ, ಧರ್ಮ ಎಂದರೆ ಸಮಾನತೆ ಎಂದು ಡಿವಿಜಿ ಸಾಲುಗಳ ಮೂಲಕ ವಿವರಿಸಿದರು. ಧರ್ಮದಲ್ಲಿ ರಾಜಕಾರಣ ಇರಬೇಕು, ರಾಜಕಾರಣದಲ್ಲಿ ಧರ್ಮ ಇರಬಾರದು. ಆದರೆ, ಇತ್ತೀಚೆಗೆ ಅದು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನು ಜನರ ಸಹಕಾರದಿಂದ ಮಠಗಳು ಬೆಳೆಯುತ್ತವೆ. ಜೊತೆಗೆ ಪೀಠಾಧಿಪತಿಗಳು ಸಾಧನೆ‌ ಮಾಡಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ:ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ:​ ಪ್ರತಿಭಟನೆ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್​

ಚುನಾವಣೆ ವೇಳೆ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿ ಮಾಡಿದೆ

ಇದೇ ವೇಳೆ ವಿಜಯಪುರ ಜಿಲ್ಲೆ ಹೆಚ್ಚು ಕಾಂಗ್ರೆಸ್ ಶಾಸಕರನ್ನು ನೀಡಿದೆ. ಚುನಾವಣೆ ವೇಳೆ ನಾವು ಘೋಷಿಸಿದ್ದ 5 ಗ್ಯಾರಂಟಿಗಳನ್ನು ಸರ್ಕಾರ ಜಾರಿಮಾಡಿದೆ. ಇದರಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ ಎಂದರು. ಜೊತೆಗೆ ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ನಮ್ಮ ಸರ್ಕಾರ ಗಮನ ಹರಿಸಲಿದೆ. ಆ ಮೂಲಕ ರೈತರನ್ನು ಬದುಕಿಸುವ ಕೆಲಸ ಮಾಡುತ್ತೇವೆ. ಜೊತೆಗೆ ಎಲ್ಲರನ್ನೂ ಸಮಾನತೆಯಿಂದ ನೋಡುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Sat, 3 February 24

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us