ವಿಜಯಪುರ: ಮಕ್ಕಳ ಮೇಲೆ ನಾಯಿಗಳ ದಾಳಿ, ನಾಲ್ವರಿಗೆ ಗಾಯ

ಒಂದೇ ದಿನ ಎರಡು ಕಡೆ ಮಕ್ಕಳ ಮೇಲೆ ನಾಯಿಗಳು ದಾಳಿ ನಡೆಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ‌ ನಾಯಿಗಳ ಹಾವಳಿ ತಡೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಜನರು ಒತ್ತಾಯಿಸಿದ್ದಾರೆ.

ವಿಜಯಪುರ: ಮಕ್ಕಳ ಮೇಲೆ ನಾಯಿಗಳ ದಾಳಿ, ನಾಲ್ವರಿಗೆ ಗಾಯ
ವಿಜಯಪುರ ನಗರದಲ್ಲಿ ಮಕ್ಕಳ ಮೇಲೆ ನಾಯಿಗಳ ದಾಳಿ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Nov 27, 2023 | 8:31 PM

ವಿಜಯಪುರ, ನ.27: ನಾಯಿಗಳ ದಾಳಿಗೆ ನಾಲ್ಕು ಬಾಲಕರು ಗಾಯಗೊಂಡ ಘಟನೆ ವಿಜಯಪುರ (Vijayapura) ನಗರದಲ್ಲಿ ನಡೆದಿದೆ. ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಗರದ ಬಡೀಕಮಾನ್ ಬಳಿ ನಾಯಿಗಳ ಪ್ರತ್ಯೇಕ ಎರಡು ದಾಳಿಗಳು ನಡೆದಿವೆ. ಮನೆಯಿಂದ ಹೊರಗೆ ಬಂದಿದ್ದ ವೇಳೆ ಬಾಲಕರನ್ನು ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನಾಯಿ‌ ಕಡಿತದಿಂದ ದಾಳಿಗೊಳಗಾದ ಬಾಲಕರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ನಾಯಿ ದಾಳಿ ಪ್ರಕರಣ: ‘ಮತ್ತೆ ಹೀಗೆ ಆಗದಂತೆ ಎಚ್ಚರ ವಹಿಸುತ್ತೇನೆ’; ಪೊಲೀಸ್​ ಠಾಣೆಗೆ ಬಂದು ದರ್ಶನ್​ ಹೇಳಿಕೆ

ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಬೇಸತ್ತಿದ್ದಾರೆ. ಹೀಗಾಗಿ ಬೀದಿ‌ ನಾಯಿಗಳ ಹಾವಳಿ ತಡೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಜನರು ಒತ್ತಾಯಿಸುತ್ತಿದ್ದಾರೆ.

ಇತ್ತೀಚೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಳ ಟೌನ್​ನಲ್ಲಿ ಹುಚ್ಚು ನಾಯಿ ದಾಳಿಗೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇನ್ಸ್‌ಪೆಕ್ಟರ್ ಶಶಿಧರ್ ನೇತೃತ್ವದಲ್ಲಿ ನಾಯಿ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವಷ್ಟರಲ್ಲಿ ಸಾರ್ವಜನಿಕರು ಆ ನಾಯಿಯನ್ನು ಹೊಡೆದು ಕೊಂದು ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us